<p class="title"><strong>ದುಬೈ</strong>: ‘ಏರ್ ಇಂಡಿಯಾ’ ಸಂಸ್ಥೆಯನ್ನು ಕುರಿತಂತೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಶನಿವಾರ ಇಲ್ಲಿ ಹೇಳಿದರು.</p>.<p class="title">ವ್ಯವಸ್ಥಿತವಾಗಿ ನಿಯಮಾನುಸಾರ ಬಿಡ್ನ ಅಂತಿಮ ವಿಜೇತರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.</p>.<p class="title">‘ನಾನು ದುಬೈನಲ್ಲಿದ್ದೇನೆ. ಯಾವುದೇ ತೀರ್ಮಾನ ಕೈಗೊಂಡ ಮಾಹಿತಿ ನನ್ನಲ್ಲಿಲ್ಲ. ಬಿಡ್ ಆಹ್ವಾನಿಸಿರುವುದು ನಿಜ. ಅದನ್ನು ನಿಗದಿತ ವೇಳೆಗೆ ಅಧಿಕಾರಿಗಳು ಗಮನಿಸುತ್ತಾರೆ. ನಿಯಮದಂತೆಯೇ ಎಲ್ಲವೂ ನಡೆಯಲಿದೆ’ ಎಂದು ತಿಳಿಸಿದರು.</p>.<p class="bodytext">ಸಾಲದ ಸುಳಿಗೆ ಸಿಲುಕಿರುವ ‘ಏರ್ ಇಂಡಿಯಾ’ ವೈಮಾನಿಕ ಸಂಸ್ಥೆಯ ಮಾಲೀಕತ್ವವನ್ನು ಪಡೆಯುವ ಬಿಡ್ನಲ್ಲಿ ಟಾಟಾ ಸಂಸ್ಥೆಯು ವಿಜಯಿಯಾಗಿದೆ ಎಂಬ ಮಾಧ್ಯಮ ವರದಿಗಳನ್ನು ಕುರಿತ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.</p>.<p class="bodytext">ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿ ತುಹಿನ್ಕಾಂತ ಪಾಂಡೆ ಈ ಮಧ್ಯೆ ಟ್ವೀಟ್ ಮಾಡಿದ್ದು, ಏರ್ ಇಂಡಿಯಾ ಕುರಿತಂತೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ಹಣಕಾಸು ಬಿಡ್ ಅನುಮೋದಿಸಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ದುಬೈ</strong>: ‘ಏರ್ ಇಂಡಿಯಾ’ ಸಂಸ್ಥೆಯನ್ನು ಕುರಿತಂತೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಶನಿವಾರ ಇಲ್ಲಿ ಹೇಳಿದರು.</p>.<p class="title">ವ್ಯವಸ್ಥಿತವಾಗಿ ನಿಯಮಾನುಸಾರ ಬಿಡ್ನ ಅಂತಿಮ ವಿಜೇತರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.</p>.<p class="title">‘ನಾನು ದುಬೈನಲ್ಲಿದ್ದೇನೆ. ಯಾವುದೇ ತೀರ್ಮಾನ ಕೈಗೊಂಡ ಮಾಹಿತಿ ನನ್ನಲ್ಲಿಲ್ಲ. ಬಿಡ್ ಆಹ್ವಾನಿಸಿರುವುದು ನಿಜ. ಅದನ್ನು ನಿಗದಿತ ವೇಳೆಗೆ ಅಧಿಕಾರಿಗಳು ಗಮನಿಸುತ್ತಾರೆ. ನಿಯಮದಂತೆಯೇ ಎಲ್ಲವೂ ನಡೆಯಲಿದೆ’ ಎಂದು ತಿಳಿಸಿದರು.</p>.<p class="bodytext">ಸಾಲದ ಸುಳಿಗೆ ಸಿಲುಕಿರುವ ‘ಏರ್ ಇಂಡಿಯಾ’ ವೈಮಾನಿಕ ಸಂಸ್ಥೆಯ ಮಾಲೀಕತ್ವವನ್ನು ಪಡೆಯುವ ಬಿಡ್ನಲ್ಲಿ ಟಾಟಾ ಸಂಸ್ಥೆಯು ವಿಜಯಿಯಾಗಿದೆ ಎಂಬ ಮಾಧ್ಯಮ ವರದಿಗಳನ್ನು ಕುರಿತ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.</p>.<p class="bodytext">ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿ ತುಹಿನ್ಕಾಂತ ಪಾಂಡೆ ಈ ಮಧ್ಯೆ ಟ್ವೀಟ್ ಮಾಡಿದ್ದು, ಏರ್ ಇಂಡಿಯಾ ಕುರಿತಂತೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ಹಣಕಾಸು ಬಿಡ್ ಅನುಮೋದಿಸಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>