<p><strong>ನವದೆಹಲಿ</strong>: 11 ವರ್ಷಗಳ ಆಡಳಿತದಲ್ಲಿ ಮೋದಿ ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ಪ್ರದರ್ಶಿಸಲಿಲ್ಲ. ಬರೀ ಅಪಪ್ರಚಾರದಲ್ಲೇ ಕಾಲ ಕಳೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p><p>ವಾಸ್ತವದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿರುವ ಕೇಂದ್ರ ಸರ್ಕಾರವು, ಈಗ 2047ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.</p><p>ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಲೋಕಲ್ ಟ್ರೇನ್ನಿಂದ ಬಿದ್ದು, ನಾಲ್ವರು ಮೃತಪಟ್ಟು, 6 ಮಂದಿ ಗಾಯಗೊಂಡ ಘಟನೆ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p><p>ಎಕ್ಸ್ನಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಕ್ಕೆ 11 ವರ್ಷಗಳು ಸೇವೆ ಮಾಡಿರುವುದಾಗಿ ಮೋದಿ ಸರ್ಕಾರ ಸಂಭ್ರಮಿಸುತ್ತಿದೆ. ದೇಶದ ವಾಸ್ತವವನ್ನು ಮುಂಬೈನಿಂದ ಬರುತ್ತಿರುವ ದುರಂತದ ಸುದ್ದಿಯು ಪ್ರತಿಬಿಂಬಿಸುತ್ತಿದೆ. ರೈಲಿನಿಂದ ಬಿದ್ದು ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.</p><p>ಭಾರತೀಯ ರೈಲ್ವೆ ಕೋಟ್ಯಂತರ ಜನರ ಜೀವನದ ಬೆನ್ನೆಲುಬಾಗಿತ್ತು. ಆದರೆ, ಇಂದು ಅದು ಅಭದ್ರತೆ, ಜನದಟ್ಟಣೆ ಮತ್ತು ಅವ್ಯವಸ್ಥೆಯ ಸಂಕೇತವಾಗಿದೆ ಎಂದು ಅವರು ಆರೋಪಿಸಿದ್ದಾರೆ.</p><p>ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ಯಾವುದೇ ಹೊಣೆಗಾರಿಕೆ ಪ್ರದರ್ಶಿಸಿಲ್ಲ. ಬದಲಾವಣೆ ಇಲ್ಲ, ಕೇವಲ ಅಪಪ್ರಚಾರ ಮಾಡಿದೆ. ಸರ್ಕಾರ 2025ರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದು, ಈಗ 2047ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ರಾಹುಲ್ ಕುಟುಕಿದ್ದಾರೆ.</p> .ಮೋದಿಯವರ 11 ವರ್ಷಗಳ ಆಡಳಿತ ರಾಜಕೀಯ ಸಂಸ್ಕೃತಿಯನ್ನೇ ಬದಲಿಸಿದೆ; ನಡ್ಡಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 11 ವರ್ಷಗಳ ಆಡಳಿತದಲ್ಲಿ ಮೋದಿ ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ಪ್ರದರ್ಶಿಸಲಿಲ್ಲ. ಬರೀ ಅಪಪ್ರಚಾರದಲ್ಲೇ ಕಾಲ ಕಳೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p><p>ವಾಸ್ತವದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿರುವ ಕೇಂದ್ರ ಸರ್ಕಾರವು, ಈಗ 2047ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.</p><p>ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಲೋಕಲ್ ಟ್ರೇನ್ನಿಂದ ಬಿದ್ದು, ನಾಲ್ವರು ಮೃತಪಟ್ಟು, 6 ಮಂದಿ ಗಾಯಗೊಂಡ ಘಟನೆ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p><p>ಎಕ್ಸ್ನಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಕ್ಕೆ 11 ವರ್ಷಗಳು ಸೇವೆ ಮಾಡಿರುವುದಾಗಿ ಮೋದಿ ಸರ್ಕಾರ ಸಂಭ್ರಮಿಸುತ್ತಿದೆ. ದೇಶದ ವಾಸ್ತವವನ್ನು ಮುಂಬೈನಿಂದ ಬರುತ್ತಿರುವ ದುರಂತದ ಸುದ್ದಿಯು ಪ್ರತಿಬಿಂಬಿಸುತ್ತಿದೆ. ರೈಲಿನಿಂದ ಬಿದ್ದು ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.</p><p>ಭಾರತೀಯ ರೈಲ್ವೆ ಕೋಟ್ಯಂತರ ಜನರ ಜೀವನದ ಬೆನ್ನೆಲುಬಾಗಿತ್ತು. ಆದರೆ, ಇಂದು ಅದು ಅಭದ್ರತೆ, ಜನದಟ್ಟಣೆ ಮತ್ತು ಅವ್ಯವಸ್ಥೆಯ ಸಂಕೇತವಾಗಿದೆ ಎಂದು ಅವರು ಆರೋಪಿಸಿದ್ದಾರೆ.</p><p>ಮೋದಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ಯಾವುದೇ ಹೊಣೆಗಾರಿಕೆ ಪ್ರದರ್ಶಿಸಿಲ್ಲ. ಬದಲಾವಣೆ ಇಲ್ಲ, ಕೇವಲ ಅಪಪ್ರಚಾರ ಮಾಡಿದೆ. ಸರ್ಕಾರ 2025ರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದು, ಈಗ 2047ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ರಾಹುಲ್ ಕುಟುಕಿದ್ದಾರೆ.</p> .ಮೋದಿಯವರ 11 ವರ್ಷಗಳ ಆಡಳಿತ ರಾಜಕೀಯ ಸಂಸ್ಕೃತಿಯನ್ನೇ ಬದಲಿಸಿದೆ; ನಡ್ಡಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>