<p><strong>ನವದೆಹಲಿ</strong>: ಕೋವಿಡ್ ಲಸಿಕೆ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಹೆಡ್ಲೈನ್ಗಳ ಬಗ್ಗೆ ಆಸಕ್ತಿಯೇ ಹೊರತು, ಡೆಡ್ಲೈನ್ ಬಗ್ಗೆ ಅಲ್ಲ ಎಂದು ಕಾಂಗ್ರೆಸ್ ಮಂಗಳವಾರ ಚಾಟಿ ಬೀಸಿದೆ.</p>.<p class="bodytext">ಈ ವರ್ಷಾಂತ್ಯದ ವೇಳೆಗೆ ಸರ್ವರಿಗೂ ಲಸಿಕೆ ನೀಡುವ ಕುರಿತ ಕಾರ್ಯಸೂಚಿ ಮತ್ತು ಲಸಿಕೆ ನೀತಿ ಕುರಿತಂತೆ ಸ್ಪಷ್ಟನೆ ನೀಡಲು ಸಂಸತ್ ಅಧಿವೇಶನ ಕರೆಯಬೇಕು ಎಂದು ಆಗ್ರಹಪಡಿಸಿದೆ.</p>.<p class="bodytext">ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು, ಎಲ್ಲ ಭಾರತೀಯರಿಗೂ ಉಚಿತವಾಗಿ ಲಸಿಕೆ ಸಿಗಬೇಕು. ಇದಕ್ಕಾಗಿ ಕೋವಿನ್ನಲ್ಲಿ ನೋಂದಣಿ ಮಾಡುವುದನ್ನು ಕಡ್ಡಾಯ ಮಾಡಬಾರದು. ಏಕೆಂದರೆ, ಡಿಜಿಟಲ್ ಸೌಲಭ್ಯವಿಲ್ಲದವರೂ ದೇಶದಲ್ಲಿ ಸಾಕಷ್ಟು ಮಂದಿ ಇದ್ದಾರೆ ಎಂದು ಪ್ರತಿಪಾದಿಸಿದರು.</p>.<p class="bodytext">ರಾಜ್ಯಗಳಿಗೆ ಲಸಿಕೆಯನ್ನು ಹಂಚಿಕೆ ಮಾಡುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಅಲ್ಲದೆ, ಲಸಿಕೆ ನೀತಿ ಕುರಿತ ಚರ್ಚೆ ಹಾಗೂ ಇದಕ್ಕಾಗಿ ಮಾಡಬೇಕಾದ ವೆಚ್ಚಕ್ಕೆ ಅನುಮೋದನೆ ಪಡೆದುಕೊಳ್ಳಲು ಸಂಸತ್ತಿನ ಅಧಿವೇಶನವನ್ನು ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಲಸಿಕೆ ವಿತರಣೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ಇಲ್ಲದಂತೆ ಒಕ್ಕೂಟ ಆಡಳಿತದ ಸಹಕಾರ ತತ್ವವನ್ನು ಕೇಂದ್ರ ಸರ್ಕಾರ ಪಾಲಿಸಬೇಕು ಎಂದು ಒತ್ತಾಯಿಸಿದರು.</p>.<p>‘ಈ ಸರ್ಕಾರಕ್ಕೆ ಹೆಡ್ಲೈನ್ ಮೇಲೇ ಆಸಕ್ತಿ, ಡೆಡ್ಲೈನ್ ಮೇಲೆ ಅಲ್ಲ’ ಎಂದು ಆನ್ಲೈನ್ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ ಅವರು, ಸರ್ವರಿಗೂ ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆಯನ್ನು ನೀಡುವುದರ ಕುರಿತು ರೂಪಿಸಿರುವ ಕಾರ್ಯಸೂಚಿ, ನೀತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರಧಾನಿ ವಿರುದ್ಧ ನೇರ ಹರಿಹಾಯ್ದ ಅವರು, ಪ್ರಧಾನಮಂತ್ರಿಯವರು ನಿದ್ರೆಯಲ್ಲಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ಬಳಿಕ ಈಗ ಕುಂಭಕರ್ಣನ ನಿದ್ರೆಯಿಂದ ಎದ್ದಿದ್ದಾರೆ. ಈಗಿನದು ಒಬ್ಬ ವ್ಯಕ್ತಿಯ ಅಹಂ ಮತ್ತು ವೈಫಲ್ಯದಿಂದಾಗಿ ಮೂಡಿರುವ ಬಿಕ್ಕಟ್ಟು. ಇದರ ಪರಿಣಾಮವನ್ನು ದೇಶವೇ ಎದುರಿಸುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ಲಸಿಕೆ ನೀಡುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಹೆಡ್ಲೈನ್ಗಳ ಬಗ್ಗೆ ಆಸಕ್ತಿಯೇ ಹೊರತು, ಡೆಡ್ಲೈನ್ ಬಗ್ಗೆ ಅಲ್ಲ ಎಂದು ಕಾಂಗ್ರೆಸ್ ಮಂಗಳವಾರ ಚಾಟಿ ಬೀಸಿದೆ.</p>.<p class="bodytext">ಈ ವರ್ಷಾಂತ್ಯದ ವೇಳೆಗೆ ಸರ್ವರಿಗೂ ಲಸಿಕೆ ನೀಡುವ ಕುರಿತ ಕಾರ್ಯಸೂಚಿ ಮತ್ತು ಲಸಿಕೆ ನೀತಿ ಕುರಿತಂತೆ ಸ್ಪಷ್ಟನೆ ನೀಡಲು ಸಂಸತ್ ಅಧಿವೇಶನ ಕರೆಯಬೇಕು ಎಂದು ಆಗ್ರಹಪಡಿಸಿದೆ.</p>.<p class="bodytext">ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು, ಎಲ್ಲ ಭಾರತೀಯರಿಗೂ ಉಚಿತವಾಗಿ ಲಸಿಕೆ ಸಿಗಬೇಕು. ಇದಕ್ಕಾಗಿ ಕೋವಿನ್ನಲ್ಲಿ ನೋಂದಣಿ ಮಾಡುವುದನ್ನು ಕಡ್ಡಾಯ ಮಾಡಬಾರದು. ಏಕೆಂದರೆ, ಡಿಜಿಟಲ್ ಸೌಲಭ್ಯವಿಲ್ಲದವರೂ ದೇಶದಲ್ಲಿ ಸಾಕಷ್ಟು ಮಂದಿ ಇದ್ದಾರೆ ಎಂದು ಪ್ರತಿಪಾದಿಸಿದರು.</p>.<p class="bodytext">ರಾಜ್ಯಗಳಿಗೆ ಲಸಿಕೆಯನ್ನು ಹಂಚಿಕೆ ಮಾಡುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಅಲ್ಲದೆ, ಲಸಿಕೆ ನೀತಿ ಕುರಿತ ಚರ್ಚೆ ಹಾಗೂ ಇದಕ್ಕಾಗಿ ಮಾಡಬೇಕಾದ ವೆಚ್ಚಕ್ಕೆ ಅನುಮೋದನೆ ಪಡೆದುಕೊಳ್ಳಲು ಸಂಸತ್ತಿನ ಅಧಿವೇಶನವನ್ನು ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಲಸಿಕೆ ವಿತರಣೆಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ಇಲ್ಲದಂತೆ ಒಕ್ಕೂಟ ಆಡಳಿತದ ಸಹಕಾರ ತತ್ವವನ್ನು ಕೇಂದ್ರ ಸರ್ಕಾರ ಪಾಲಿಸಬೇಕು ಎಂದು ಒತ್ತಾಯಿಸಿದರು.</p>.<p>‘ಈ ಸರ್ಕಾರಕ್ಕೆ ಹೆಡ್ಲೈನ್ ಮೇಲೇ ಆಸಕ್ತಿ, ಡೆಡ್ಲೈನ್ ಮೇಲೆ ಅಲ್ಲ’ ಎಂದು ಆನ್ಲೈನ್ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ ಅವರು, ಸರ್ವರಿಗೂ ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆಯನ್ನು ನೀಡುವುದರ ಕುರಿತು ರೂಪಿಸಿರುವ ಕಾರ್ಯಸೂಚಿ, ನೀತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರಧಾನಿ ವಿರುದ್ಧ ನೇರ ಹರಿಹಾಯ್ದ ಅವರು, ಪ್ರಧಾನಮಂತ್ರಿಯವರು ನಿದ್ರೆಯಲ್ಲಿದ್ದರು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ಬಳಿಕ ಈಗ ಕುಂಭಕರ್ಣನ ನಿದ್ರೆಯಿಂದ ಎದ್ದಿದ್ದಾರೆ. ಈಗಿನದು ಒಬ್ಬ ವ್ಯಕ್ತಿಯ ಅಹಂ ಮತ್ತು ವೈಫಲ್ಯದಿಂದಾಗಿ ಮೂಡಿರುವ ಬಿಕ್ಕಟ್ಟು. ಇದರ ಪರಿಣಾಮವನ್ನು ದೇಶವೇ ಎದುರಿಸುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>