<p><strong>ನವದೆಹಲಿ</strong>: ಸಾರ್ವಜನಿಕ ಆರೋಗ್ಯ ನಿಯಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಕೇರಳ ಸರ್ಕಾರಕ್ಕೆ ಸಹಾಯ ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಜಂಟಿ ಪ್ರತಿಸ್ಪಂದನ ತಂಡವನ್ನು ಕೇರಳಕ್ಕೆ ಕಳುಹಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನಿಫಾ ವೈರಸ್ನ 2 ಪ್ರಕರಣಗಳು ಪತ್ತೆಯಾಗಿರುವ ಕಾರಣದಿಂದ ಈ ಬೆಳವಣಿಗೆ ನಡೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. </p>.<p>38 ವರ್ಷದ ಮಹಿಳೆಯೊಬ್ಬರಿಗೆ ನಿಫಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ಜತೆಗೆ ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟ 18 ವರ್ಷದ ಯುವತಿಗೂ ನಿಫಾ ಸೋಂಕು ತಗುಲಿತ್ತು ಎಂಬುದು ದೃಢಪಟ್ಟಿದೆ. ಈ ಕಾರಣದಿಂದ ರಾಜ್ಯದಲ್ಲಿ ರೋಗ ತಪಾಸಣೆ, ನಿಯಂತ್ರಣ ಕ್ರಮಗಳನ್ನು ಚುರುಕುಗೊಳಿಸಲಾಗಿದೆ. </p>.<p class="title">ಕೇಂದ್ರ ಸಮಗ್ರ ರೋಗ ನಿಯಂತ್ರಣ ತಂಡವೂ ಕೂಡ ರಾಜ್ಯ ಘಟಕದ ಸಂಪರ್ಕದಲ್ಲಿದ್ದು, ರಾಜ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವುದಾಗಿ ಹೇಳಿದೆ. ಏತನ್ಮಧ್ಯೆ, ಕೇಂದ್ರದಿಂದ ತಂಡ ನಿಯೋಜಿಸುವ ಪ್ರಸ್ತಾಪ ಬಂದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾರ್ವಜನಿಕ ಆರೋಗ್ಯ ನಿಯಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಕೇರಳ ಸರ್ಕಾರಕ್ಕೆ ಸಹಾಯ ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಜಂಟಿ ಪ್ರತಿಸ್ಪಂದನ ತಂಡವನ್ನು ಕೇರಳಕ್ಕೆ ಕಳುಹಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ನಿಫಾ ವೈರಸ್ನ 2 ಪ್ರಕರಣಗಳು ಪತ್ತೆಯಾಗಿರುವ ಕಾರಣದಿಂದ ಈ ಬೆಳವಣಿಗೆ ನಡೆದಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. </p>.<p>38 ವರ್ಷದ ಮಹಿಳೆಯೊಬ್ಬರಿಗೆ ನಿಫಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ಜತೆಗೆ ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟ 18 ವರ್ಷದ ಯುವತಿಗೂ ನಿಫಾ ಸೋಂಕು ತಗುಲಿತ್ತು ಎಂಬುದು ದೃಢಪಟ್ಟಿದೆ. ಈ ಕಾರಣದಿಂದ ರಾಜ್ಯದಲ್ಲಿ ರೋಗ ತಪಾಸಣೆ, ನಿಯಂತ್ರಣ ಕ್ರಮಗಳನ್ನು ಚುರುಕುಗೊಳಿಸಲಾಗಿದೆ. </p>.<p class="title">ಕೇಂದ್ರ ಸಮಗ್ರ ರೋಗ ನಿಯಂತ್ರಣ ತಂಡವೂ ಕೂಡ ರಾಜ್ಯ ಘಟಕದ ಸಂಪರ್ಕದಲ್ಲಿದ್ದು, ರಾಜ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವುದಾಗಿ ಹೇಳಿದೆ. ಏತನ್ಮಧ್ಯೆ, ಕೇಂದ್ರದಿಂದ ತಂಡ ನಿಯೋಜಿಸುವ ಪ್ರಸ್ತಾಪ ಬಂದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>