<p><strong>ನವದೆಹಲಿ:</strong>'ಎನ್ಇಇಟಿ–ಜೆಇಇ ಪ್ರವೇಶ ಪರೀಕ್ಷೆ ವಿಷಯದಲ್ಲಿ ಕೇಂದ್ರ ಸರ್ಕಾರ ಮೊದಲು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಬೇಕು. ನಂತರ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿಸುತ್ತಿರುವ ಸಂದರ್ಭದಲ್ಲಿ ರಾಹುಲ್ಗಾಂಧಿ ವಿದ್ಯಾರ್ಥಿಗಳ ಪರವಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ವಿದ್ಯಾರ್ಥಿಗಳ ಒತ್ತಾಯವನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ರಾಹುಲ್ಗಾಂಧಿ, ’ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆರೋಗ್ಯದ ಜತೆಗೆ ಭವಿಷ್ಯದ ಬಗ್ಗೆಯೂ ಕಾಳಜಿ ಇದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪ್ರಯಾಣ ಮಾಡುವುದು, ಹೋಟೆಲ್ಗಳಲ್ಲಿ ಆಹಾರ ಸೇವನೆ, ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡುವುದರ ಬಗ್ಗೆ ಭಯಭೀತರಾಗಿದ್ದಾರೆ. ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ’ ಎಂದ ಟ್ವೀಟ್ನಲ್ಲಿ ವಿವರಿಸಿದ್ದಾರೆ.</p>.<p>’ಸರ್ಕಾರ ಮೊದಲು ಪರೀಕ್ಷೆಗೆ ಸಂಬಂಧಿಸಿದವರೆಲ್ಲರ ಕಷ್ಟಗಳು, ಕುಂದು–ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಹುಡುಕಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. #anti-students# ’ವಿದ್ಯಾರ್ಥಿ ವಿರೋಧಿ ಮೋದಿ ಸರ್ಕಾರ’ ಎಂಬ ಹ್ಯಾಷ್ಟ್ಯಾಗ್ ಮೂಲಕ ರಾಹುಲ್ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>'ಎನ್ಇಇಟಿ–ಜೆಇಇ ಪ್ರವೇಶ ಪರೀಕ್ಷೆ ವಿಷಯದಲ್ಲಿ ಕೇಂದ್ರ ಸರ್ಕಾರ ಮೊದಲು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಬೇಕು. ನಂತರ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿಸುತ್ತಿರುವ ಸಂದರ್ಭದಲ್ಲಿ ರಾಹುಲ್ಗಾಂಧಿ ವಿದ್ಯಾರ್ಥಿಗಳ ಪರವಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ವಿದ್ಯಾರ್ಥಿಗಳ ಒತ್ತಾಯವನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ರಾಹುಲ್ಗಾಂಧಿ, ’ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆರೋಗ್ಯದ ಜತೆಗೆ ಭವಿಷ್ಯದ ಬಗ್ಗೆಯೂ ಕಾಳಜಿ ಇದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪ್ರಯಾಣ ಮಾಡುವುದು, ಹೋಟೆಲ್ಗಳಲ್ಲಿ ಆಹಾರ ಸೇವನೆ, ವಸತಿ ಗೃಹಗಳಲ್ಲಿ ವಾಸ್ತವ್ಯ ಹೂಡುವುದರ ಬಗ್ಗೆ ಭಯಭೀತರಾಗಿದ್ದಾರೆ. ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ’ ಎಂದ ಟ್ವೀಟ್ನಲ್ಲಿ ವಿವರಿಸಿದ್ದಾರೆ.</p>.<p>’ಸರ್ಕಾರ ಮೊದಲು ಪರೀಕ್ಷೆಗೆ ಸಂಬಂಧಿಸಿದವರೆಲ್ಲರ ಕಷ್ಟಗಳು, ಕುಂದು–ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಹುಡುಕಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. #anti-students# ’ವಿದ್ಯಾರ್ಥಿ ವಿರೋಧಿ ಮೋದಿ ಸರ್ಕಾರ’ ಎಂಬ ಹ್ಯಾಷ್ಟ್ಯಾಗ್ ಮೂಲಕ ರಾಹುಲ್ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>