<p><strong>ಹೈದರಾಬಾದ್:</strong> ಉಚಿತ ಕೊಡುಗೆಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಒಮ್ಮತ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ‘ಶ್ವೇತಪತ್ರ’ ಹೊರಡಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮಾಜಿ ಗವರ್ನರ್ ಡಿ. ಸುಬ್ಬರಾವ್ ಹೇಳಿದ್ದಾರೆ.</p>.<p>ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಿಗೆ ಹೇಗೆ ನಿರ್ಬಂಧ ಹೇರಬಹುದು ಎಂಬುದರ ಕುರಿತು ಕೂಲಂಕಷ ಚರ್ಚೆ ಆಗಬೇಕು. ಉಚಿತ ಕೊಡುಗೆಗಳ ಯೋಜನೆಗೆ ತಗಲುವ ಖರ್ಚು, ವೆಚ್ಚ ಮತ್ತು ಅದರ ಪ್ರಯೋಜನಗಳ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ. ಅಲ್ಲದೆ ಈ ಕುರಿತು ಜನರಿಗೆ ಶಿಕ್ಷಣ ನೀಡುವ ಜವಾಬ್ದಾರಿಯೂ ಸರ್ಕಾರದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಇದು ಅಂತಿಮವಾಗಿ ರಾಜಕೀಯ ವಿಷಯ. ಹೀಗಾಗಿ ಈ ಬಗ್ಗೆ ರಾಜಕೀಯವಾಗಿ ಒಮ್ಮತ ಇರಬೇಕು. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಅವರೇ ನಾಯಕತ್ವ ವಹಿಸಿಕೊಳ್ಳುವುದು ಸೂಕ್ತ. ಆದ್ದರಿಂದಲೇ ಅವರು ಈ ಬಗ್ಗೆ ಶ್ವೇತಪತ್ರ ಹೊರಡಿಸಿ, ಒಮ್ಮತ ಸೃಷ್ಟಿಸಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.</p>.<p>ಉಚಿತ ಕೊಡುಗೆಗಳ ಸಾಧಕ– ಬಾಧಕಗಳ ಕುರಿತು ಜನರಿಗೆ ಶಿಕ್ಷಣ ನೀಡಬೇಕು. ಅದನ್ನು ಹೇಗೆ ಜಾರಿಗೊಳಿಸಬಹುದು ಮತ್ತು ಹೇಗೆ ನಿಗಾ ಇಡಬಹುದು ಎಂಬುದು ಜನರಿಗೆ ಗೊತ್ತಿರಬೇಕು ಎಂದು ಅವರು ಪಿಟಿಐ ಜತೆಗಿನ ಸಂವಾದದಲ್ಲಿ ತಿಳಿಸಿದ್ದಾರೆ. </p>.<p>ಭಾರತದಂತಹ ಬಡ ದೇಶದಲ್ಲಿ ಅತ್ಯಂತ ದುರ್ಬಲ ವರ್ಗಗಳಿಗೆ ಸುರಕ್ಷತಾ ಸಂರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಇವುಗಳನ್ನು ಎಷ್ಟು ವರ್ಷ ವಿಸ್ತರಿಸಬಹುದು ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<p>‘ಈ ಸಂಬಂಧ ಒದಗಿಸಲಾದ ಹಣವು ಸದ್ಬಳಕೆ ಆಗಿದೆಯೇ ಅಥವಾ ಯೋಜನೆಯನ್ನು ಇನ್ನೂ ಉತ್ತಮ ಪಡಿಸಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು. ಹೀಗಾಗಿಯೇ ಉಚಿತ ಕೊಡುಗೆಗಳ ಬಗ್ಗೆ ಹೆಚ್ಚು ಜಾಗೃತಿ ಮತ್ತು ತಿಳಿವಳಿಕೆ ಮೂಡಿಸುವ ಅಗತ್ಯವಿದೆ. ಅಲ್ಲದೆ ಈ ವಿಷಯದಲ್ಲಿ ರಾಜಕೀಯ ಪಕ್ಷಗಳ ಮೇಲೆ ಹೇಗೆ ಸ್ವಲ್ಪ ಮಟ್ಟಿಗೆ ನಿರ್ಬಂಧ ವಿಧಿಸಬಹುದು ಎಂಬುದರ ಕುರಿತು ಚರ್ಚೆಯಾಗಬೇಕಿದೆ’ ಎಂದಿದ್ದಾರೆ.</p>.<p>ಕೆಲ ರಾಜ್ಯಗಳು ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆಯ (ಎಫ್ಆರ್ಬಿಎಂ) ಮಿತಿಗಳನ್ನು ದಾಟಿವೆ ಎಂದ ಅವರು, ‘ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಎಫ್ಆರ್ಬಿಎಂ ಗುರಿಗಳಿಗೆ ಬದ್ಧರಾಗಿರಬೇಕು’ ಎಂದು ಹೇಳಿದ್ದಾರೆ. </p>.<p>ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 2047ರವರೆಗೆ ಸತತವಾಗಿ ಶೇ 7.6ರಷ್ಟು ದರದಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಐಎಂಎಫ್ ಅಧ್ಯಯನ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಉಚಿತ ಕೊಡುಗೆಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಒಮ್ಮತ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ‘ಶ್ವೇತಪತ್ರ’ ಹೊರಡಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮಾಜಿ ಗವರ್ನರ್ ಡಿ. ಸುಬ್ಬರಾವ್ ಹೇಳಿದ್ದಾರೆ.</p>.<p>ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಿಗೆ ಹೇಗೆ ನಿರ್ಬಂಧ ಹೇರಬಹುದು ಎಂಬುದರ ಕುರಿತು ಕೂಲಂಕಷ ಚರ್ಚೆ ಆಗಬೇಕು. ಉಚಿತ ಕೊಡುಗೆಗಳ ಯೋಜನೆಗೆ ತಗಲುವ ಖರ್ಚು, ವೆಚ್ಚ ಮತ್ತು ಅದರ ಪ್ರಯೋಜನಗಳ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ. ಅಲ್ಲದೆ ಈ ಕುರಿತು ಜನರಿಗೆ ಶಿಕ್ಷಣ ನೀಡುವ ಜವಾಬ್ದಾರಿಯೂ ಸರ್ಕಾರದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಇದು ಅಂತಿಮವಾಗಿ ರಾಜಕೀಯ ವಿಷಯ. ಹೀಗಾಗಿ ಈ ಬಗ್ಗೆ ರಾಜಕೀಯವಾಗಿ ಒಮ್ಮತ ಇರಬೇಕು. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಅವರೇ ನಾಯಕತ್ವ ವಹಿಸಿಕೊಳ್ಳುವುದು ಸೂಕ್ತ. ಆದ್ದರಿಂದಲೇ ಅವರು ಈ ಬಗ್ಗೆ ಶ್ವೇತಪತ್ರ ಹೊರಡಿಸಿ, ಒಮ್ಮತ ಸೃಷ್ಟಿಸಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.</p>.<p>ಉಚಿತ ಕೊಡುಗೆಗಳ ಸಾಧಕ– ಬಾಧಕಗಳ ಕುರಿತು ಜನರಿಗೆ ಶಿಕ್ಷಣ ನೀಡಬೇಕು. ಅದನ್ನು ಹೇಗೆ ಜಾರಿಗೊಳಿಸಬಹುದು ಮತ್ತು ಹೇಗೆ ನಿಗಾ ಇಡಬಹುದು ಎಂಬುದು ಜನರಿಗೆ ಗೊತ್ತಿರಬೇಕು ಎಂದು ಅವರು ಪಿಟಿಐ ಜತೆಗಿನ ಸಂವಾದದಲ್ಲಿ ತಿಳಿಸಿದ್ದಾರೆ. </p>.<p>ಭಾರತದಂತಹ ಬಡ ದೇಶದಲ್ಲಿ ಅತ್ಯಂತ ದುರ್ಬಲ ವರ್ಗಗಳಿಗೆ ಸುರಕ್ಷತಾ ಸಂರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಇವುಗಳನ್ನು ಎಷ್ಟು ವರ್ಷ ವಿಸ್ತರಿಸಬಹುದು ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<p>‘ಈ ಸಂಬಂಧ ಒದಗಿಸಲಾದ ಹಣವು ಸದ್ಬಳಕೆ ಆಗಿದೆಯೇ ಅಥವಾ ಯೋಜನೆಯನ್ನು ಇನ್ನೂ ಉತ್ತಮ ಪಡಿಸಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು. ಹೀಗಾಗಿಯೇ ಉಚಿತ ಕೊಡುಗೆಗಳ ಬಗ್ಗೆ ಹೆಚ್ಚು ಜಾಗೃತಿ ಮತ್ತು ತಿಳಿವಳಿಕೆ ಮೂಡಿಸುವ ಅಗತ್ಯವಿದೆ. ಅಲ್ಲದೆ ಈ ವಿಷಯದಲ್ಲಿ ರಾಜಕೀಯ ಪಕ್ಷಗಳ ಮೇಲೆ ಹೇಗೆ ಸ್ವಲ್ಪ ಮಟ್ಟಿಗೆ ನಿರ್ಬಂಧ ವಿಧಿಸಬಹುದು ಎಂಬುದರ ಕುರಿತು ಚರ್ಚೆಯಾಗಬೇಕಿದೆ’ ಎಂದಿದ್ದಾರೆ.</p>.<p>ಕೆಲ ರಾಜ್ಯಗಳು ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆಯ (ಎಫ್ಆರ್ಬಿಎಂ) ಮಿತಿಗಳನ್ನು ದಾಟಿವೆ ಎಂದ ಅವರು, ‘ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಎಫ್ಆರ್ಬಿಎಂ ಗುರಿಗಳಿಗೆ ಬದ್ಧರಾಗಿರಬೇಕು’ ಎಂದು ಹೇಳಿದ್ದಾರೆ. </p>.<p>ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 2047ರವರೆಗೆ ಸತತವಾಗಿ ಶೇ 7.6ರಷ್ಟು ದರದಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಐಎಂಎಫ್ ಅಧ್ಯಯನ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>