<p><strong>ನವದೆಹಲಿ</strong>: ಅದಾನಿ ಹಗರಣ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಆಡಳಿತ ಪಕ್ಷ ಅವಕಾಶ ಕಲ್ಪಿಸದ ಕಾರಣ, ಲೋಕಸಭೆಯ ಸುಗಮ ಕಲಾಪಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಆರೋಪಿಸಿದ್ದಾರೆ.</p><p>ಅದಾನಿ ವಿಷಯ ಪ್ರಸ್ತಾಪಿಸಲು ಮೊಂಡುತನ ಪ್ರದರ್ಶಿಸುತ್ತಿರುವ ಬಿಜೆಪಿ, ಸದನವನ್ನು ಬೇರೆಡೆ ಸೆಳೆಯಲು ತಂತ್ರದ ಭಾಗವಾಗಿ ಕಾಂಗ್ರೆಸ್ ಜಾರ್ಜ್ ಸೋರೊಸ್ ಅವರೊಂದಿಗೆ ಸಂಪರ್ಕದಲ್ಲಿದೆ ಎಂದು ಆರೋಪಿಸಿದೆ. ಆದರೆ ವಾಸ್ತವವಾಗಿ ಅತ್ಯಂತ ಹಾಸ್ಯಾಸ್ಪದ ವಿಷಯ ಎಂದು ಭಾವಿಸುತ್ತೇನೆ ಎಂದು ಪ್ರಿಯಾಂಕಾ ತಿರುಗೇಟು ನೀಡಿದರು.</p>.ಆಟೊ ಡ್ರೈವರ್ಗಳಿಗೆ ₹10 ಲಕ್ಷ ವಿಮೆ, ಮಗಳ ಮದುವೆಗೆ ₹1 ಲಕ್ಷ: ಕೇಜ್ರಿವಾಲ್.ರಾಜ್ಯಸಭಾ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರೇಖಾ ಶರ್ಮಾ ಅವಿರೋಧ ಆಯ್ಕೆ. <p>‘ಸದನದಲ್ಲಿ ಕಲಾಪ ನಡೆಸಲು ಆಡಳಿತ ಪಕ್ಷಕ್ಕೆ ಇಷ್ಟವಿಲ್ಲ ಅಥವಾ ಅವರು ಸಾಮರ್ಥ್ಯ ಹೊಂದಿಲ್ಲ. ಆಡಳಿತ ಪಕ್ಷವು ವಿನಃ ಕಾರಣ ಕಲಾಪವನ್ನು ಮುಂದೂಡುತ್ತದೆ‘ ಎಂದು ಕಿಡಿಕಾರಿದ್ದಾರೆ.</p><p>‘ಇದುವರೆಗೂ ಸದನಕ್ಕೆ ಪ್ರಧಾನಿ ನರೇಂದ್ರ ಮೋದಿ ಬರದೆ ಇರುವುದು ನೂತನ ಸಂಸದೆಯಾಗಿ ನನಗೆ ಆಶ್ಚರ್ಯವೆನಿಸುತ್ತದೆ. ಸದನದಲ್ಲಿ ಅದಾನಿ ವಿಷಯ ಪ್ರಸ್ತಾಪಿಸುವುದು ಅವಶ್ಯಕ. ಏಕೆಂದರೆ, ಈ ವಿಚಾರ ಅಮೆರಿಕದಲ್ಲಿ ಚರ್ಚೆಯಾಗಿದೆ‘ ಎಂದೂ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.</p><p>ಶೂನ್ಯ ಅವಧಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವ್ಯಂಗ್ಯ ಚಿತ್ರಗಳಿರುವ ಮುಖವಾಡಗಳು ಮತ್ತು ಜಾಕೆಟ್ಗಳನ್ನು ಧರಿಸಿ ಸದನಕ್ಕೆ ಬರುವ ವಿರೋಧ ಪಕ್ಷಗಳು ಸಂಸತ್ತಿನ ಗೌರವದ ಮೇಲೆ ದಾಳಿ ನಡೆಸಿವೆ ಎಂದು ಹೇಳಿದ್ದಾರೆ.</p>.VHP ಕಾರ್ಯಕ್ರಮದಲ್ಲಿ ಅಲಹಾಬಾದ್ HC ನ್ಯಾಯಮೂರ್ತಿ ಭಾಷಣ: ಮಾಹಿತಿ ಕೇಳಿದ SC.ನಿಮ್ಹಾನ್ಸ್ ಪಾಲಿಟ್ರಾಮಾ ಕೇಂದ್ರಕ್ಕೆ ಅನುಮೋದನೆ: ಹಣಕಾಸು ಸಚಿವರಿಗೆ ಮನವಿ. <p>ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ಗದ್ದಲ ಸೃಷ್ಠಿಸುತ್ತಿರುವುದರಿಂದ ಸದನದಲ್ಲಿ ಇತರೆ ಸದಸ್ಯರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸುವುದರಿಂದ ವಂಚಿತರಾಗುತ್ತಿದ್ದಾರೆ ಎಂದು ರಿಜಿಜು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಭಾರತದಲ್ಲಿ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗಳ ಗುತ್ತಿಗೆಯನ್ನು ಸುಲಭವಾಗಿ ಪಡೆಯಲು ಅಧಿಕಾರಿಗಳಿಗೆ 25 ಕೋಟಿ ಡಾಲರ್ಗಳಷ್ಟು (ಅಂದಾಜು ₹2,100 ಕೋಟಿ) ಲಂಚ ನೀಡಿದ್ದಾರೆ ಇಲ್ಲವೆ ನೀಡಲು ಮುಂದಾಗಿದ್ದಾರೆ ಎಂದು ಗೌತಮ್ ಅದಾನಿ ಹಾಗೂ ಅವರ ಅಣ್ಣನ ಮಗ ಸಾಗರ್ ಅದಾನಿ ವಿರುದ್ಧ ಅಮೆರಿಕದ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಇದರ ಬೆನ್ನಲ್ಲೇ, ಅವರ ಬಂಧನಕ್ಕೆ ಕೋರ್ಟ್ ವಾರಂಟ್ ಹೊರಡಿಸಿದೆ.</p>.ಹಿಮಾಚಲ ಪ್ರದೇಶ | ಕಂದಕಕ್ಕೆ ಉರುಳಿದ ಬಸ್: ಚಾಲಕ ಸಾವು, 30 ಮಂದಿಗೆ ಗಂಭೀರ ಗಾಯ.ಮ್ಯಾಚ್ ಫಿಕ್ಸಿಂಗ್ ಯತ್ನ: ಸನ್ನಿ ಧಿಲ್ಲೋನ್ಗೆ 6 ವರ್ಷ ನಿಷೇಧ ಹೇರಿದ ಐಸಿಸಿ . <p>ಲಂಚದ ಆರೋಪದ ಮೇಲೆ ಗೌತಮ್ ಅದಾನಿ ಮತ್ತು ಇತರ ಕಂಪನಿಗಳ ಅಧಿಕಾರಿಗಳ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಆರೋಪಪಟ್ಟಿ ದಾಖಲಾಗಿರುವ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ತನಿಖೆ ನಡೆಸುವಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅದಾನಿ ಹಗರಣ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗೆ ಆಡಳಿತ ಪಕ್ಷ ಅವಕಾಶ ಕಲ್ಪಿಸದ ಕಾರಣ, ಲೋಕಸಭೆಯ ಸುಗಮ ಕಲಾಪಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಆರೋಪಿಸಿದ್ದಾರೆ.</p><p>ಅದಾನಿ ವಿಷಯ ಪ್ರಸ್ತಾಪಿಸಲು ಮೊಂಡುತನ ಪ್ರದರ್ಶಿಸುತ್ತಿರುವ ಬಿಜೆಪಿ, ಸದನವನ್ನು ಬೇರೆಡೆ ಸೆಳೆಯಲು ತಂತ್ರದ ಭಾಗವಾಗಿ ಕಾಂಗ್ರೆಸ್ ಜಾರ್ಜ್ ಸೋರೊಸ್ ಅವರೊಂದಿಗೆ ಸಂಪರ್ಕದಲ್ಲಿದೆ ಎಂದು ಆರೋಪಿಸಿದೆ. ಆದರೆ ವಾಸ್ತವವಾಗಿ ಅತ್ಯಂತ ಹಾಸ್ಯಾಸ್ಪದ ವಿಷಯ ಎಂದು ಭಾವಿಸುತ್ತೇನೆ ಎಂದು ಪ್ರಿಯಾಂಕಾ ತಿರುಗೇಟು ನೀಡಿದರು.</p>.ಆಟೊ ಡ್ರೈವರ್ಗಳಿಗೆ ₹10 ಲಕ್ಷ ವಿಮೆ, ಮಗಳ ಮದುವೆಗೆ ₹1 ಲಕ್ಷ: ಕೇಜ್ರಿವಾಲ್.ರಾಜ್ಯಸಭಾ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ರೇಖಾ ಶರ್ಮಾ ಅವಿರೋಧ ಆಯ್ಕೆ. <p>‘ಸದನದಲ್ಲಿ ಕಲಾಪ ನಡೆಸಲು ಆಡಳಿತ ಪಕ್ಷಕ್ಕೆ ಇಷ್ಟವಿಲ್ಲ ಅಥವಾ ಅವರು ಸಾಮರ್ಥ್ಯ ಹೊಂದಿಲ್ಲ. ಆಡಳಿತ ಪಕ್ಷವು ವಿನಃ ಕಾರಣ ಕಲಾಪವನ್ನು ಮುಂದೂಡುತ್ತದೆ‘ ಎಂದು ಕಿಡಿಕಾರಿದ್ದಾರೆ.</p><p>‘ಇದುವರೆಗೂ ಸದನಕ್ಕೆ ಪ್ರಧಾನಿ ನರೇಂದ್ರ ಮೋದಿ ಬರದೆ ಇರುವುದು ನೂತನ ಸಂಸದೆಯಾಗಿ ನನಗೆ ಆಶ್ಚರ್ಯವೆನಿಸುತ್ತದೆ. ಸದನದಲ್ಲಿ ಅದಾನಿ ವಿಷಯ ಪ್ರಸ್ತಾಪಿಸುವುದು ಅವಶ್ಯಕ. ಏಕೆಂದರೆ, ಈ ವಿಚಾರ ಅಮೆರಿಕದಲ್ಲಿ ಚರ್ಚೆಯಾಗಿದೆ‘ ಎಂದೂ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.</p><p>ಶೂನ್ಯ ಅವಧಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವ್ಯಂಗ್ಯ ಚಿತ್ರಗಳಿರುವ ಮುಖವಾಡಗಳು ಮತ್ತು ಜಾಕೆಟ್ಗಳನ್ನು ಧರಿಸಿ ಸದನಕ್ಕೆ ಬರುವ ವಿರೋಧ ಪಕ್ಷಗಳು ಸಂಸತ್ತಿನ ಗೌರವದ ಮೇಲೆ ದಾಳಿ ನಡೆಸಿವೆ ಎಂದು ಹೇಳಿದ್ದಾರೆ.</p>.VHP ಕಾರ್ಯಕ್ರಮದಲ್ಲಿ ಅಲಹಾಬಾದ್ HC ನ್ಯಾಯಮೂರ್ತಿ ಭಾಷಣ: ಮಾಹಿತಿ ಕೇಳಿದ SC.ನಿಮ್ಹಾನ್ಸ್ ಪಾಲಿಟ್ರಾಮಾ ಕೇಂದ್ರಕ್ಕೆ ಅನುಮೋದನೆ: ಹಣಕಾಸು ಸಚಿವರಿಗೆ ಮನವಿ. <p>ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ಗದ್ದಲ ಸೃಷ್ಠಿಸುತ್ತಿರುವುದರಿಂದ ಸದನದಲ್ಲಿ ಇತರೆ ಸದಸ್ಯರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸುವುದರಿಂದ ವಂಚಿತರಾಗುತ್ತಿದ್ದಾರೆ ಎಂದು ರಿಜಿಜು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಭಾರತದಲ್ಲಿ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗಳ ಗುತ್ತಿಗೆಯನ್ನು ಸುಲಭವಾಗಿ ಪಡೆಯಲು ಅಧಿಕಾರಿಗಳಿಗೆ 25 ಕೋಟಿ ಡಾಲರ್ಗಳಷ್ಟು (ಅಂದಾಜು ₹2,100 ಕೋಟಿ) ಲಂಚ ನೀಡಿದ್ದಾರೆ ಇಲ್ಲವೆ ನೀಡಲು ಮುಂದಾಗಿದ್ದಾರೆ ಎಂದು ಗೌತಮ್ ಅದಾನಿ ಹಾಗೂ ಅವರ ಅಣ್ಣನ ಮಗ ಸಾಗರ್ ಅದಾನಿ ವಿರುದ್ಧ ಅಮೆರಿಕದ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಇದರ ಬೆನ್ನಲ್ಲೇ, ಅವರ ಬಂಧನಕ್ಕೆ ಕೋರ್ಟ್ ವಾರಂಟ್ ಹೊರಡಿಸಿದೆ.</p>.ಹಿಮಾಚಲ ಪ್ರದೇಶ | ಕಂದಕಕ್ಕೆ ಉರುಳಿದ ಬಸ್: ಚಾಲಕ ಸಾವು, 30 ಮಂದಿಗೆ ಗಂಭೀರ ಗಾಯ.ಮ್ಯಾಚ್ ಫಿಕ್ಸಿಂಗ್ ಯತ್ನ: ಸನ್ನಿ ಧಿಲ್ಲೋನ್ಗೆ 6 ವರ್ಷ ನಿಷೇಧ ಹೇರಿದ ಐಸಿಸಿ . <p>ಲಂಚದ ಆರೋಪದ ಮೇಲೆ ಗೌತಮ್ ಅದಾನಿ ಮತ್ತು ಇತರ ಕಂಪನಿಗಳ ಅಧಿಕಾರಿಗಳ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಆರೋಪಪಟ್ಟಿ ದಾಖಲಾಗಿರುವ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ (ಜೆಪಿಸಿ) ತನಿಖೆ ನಡೆಸುವಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>