<p><strong>ನವದೆಹಲಿ:</strong> ‘ಅಗತ್ಯ ಕಂಡುಬಂದಲ್ಲಿ ಅಗ್ನಿಪಥ ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸರ್ಕಾರ ಮುಕ್ತವಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.</p>.<p>‘ಟೈಮ್ಸ್ ನೌ’ ಸುದ್ದಿವಾಹಿನಿ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮಾತನಾಡಿದ ಅವರು,‘ಯೋಜನೆಯಲ್ಲಿ ಯಾವುದೇ ನ್ಯೂನತೆ ಇರುವುದು ಬಂದಲ್ಲಿ, ಅದನ್ನು ಸರಿಪಡಿಸಲು ಕೂಡ ನಾವು ಸಿದ್ಧ’ ಎಂದು ಹೇಳಿದರು.</p>.<p>‘ಬರುವ ದಿನಗಳಲ್ಲಿ ಅಗ್ನಿವೀರರಾಗಿ ಸೇನೆಗೆ ಸೇರ್ಪಡೆಯಾಗುವ ಯುವಕರಿಗೆ ಯಾವುದೇ ರೀತಿ ಸಮಸ್ಯೆ ಆಗುವುದಿಲ್ಲ’ ಎಂದರು.</p>.<p>ಅಗ್ನಿಪಥ ಯೋಜನೆ ಕುರಿತ ಟೀಕೆಗಳಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಂತಹ ಪ್ರಶ್ನೆಗಳಿಗೆ ಅರ್ಥವೇ ಇಲ್ಲ. ಸಶಸ್ತ್ರ ಪಡೆಗಳು ತರುಣರಿಂದ ತುಂಬಿರಬೇಕು ಎಂಬ ಮಾತನ್ನು ಎಲ್ಲರೂ ಒಪ್ಪುತ್ತಾರೆ’ ಎಂದರು.</p>.<p>‘ಯುವಕರ ಸಂಖ್ಯೆ ಹೆಚ್ಚಿದ್ದಷ್ಟೂ, ಸಶಸ್ತ್ರ ಪಡೆಗಳಲ್ಲಿ ಸವಾಲು ಎದುರಿಸುವ ಉತ್ಸಾಹ ಹೆಚ್ಚುವುದು. ತಂತ್ರಜ್ಞಾನ ಬಳಕೆ ಬಗ್ಗೆ ಒಲವು ಹೊಂದಿರುವ ಯೋಧರು ಸಂಖ್ಯೆಯೂ ಹೆಚ್ಚಾಗಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಅಗತ್ಯ ಕಂಡುಬಂದಲ್ಲಿ ಅಗ್ನಿಪಥ ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸರ್ಕಾರ ಮುಕ್ತವಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.</p>.<p>‘ಟೈಮ್ಸ್ ನೌ’ ಸುದ್ದಿವಾಹಿನಿ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮಾತನಾಡಿದ ಅವರು,‘ಯೋಜನೆಯಲ್ಲಿ ಯಾವುದೇ ನ್ಯೂನತೆ ಇರುವುದು ಬಂದಲ್ಲಿ, ಅದನ್ನು ಸರಿಪಡಿಸಲು ಕೂಡ ನಾವು ಸಿದ್ಧ’ ಎಂದು ಹೇಳಿದರು.</p>.<p>‘ಬರುವ ದಿನಗಳಲ್ಲಿ ಅಗ್ನಿವೀರರಾಗಿ ಸೇನೆಗೆ ಸೇರ್ಪಡೆಯಾಗುವ ಯುವಕರಿಗೆ ಯಾವುದೇ ರೀತಿ ಸಮಸ್ಯೆ ಆಗುವುದಿಲ್ಲ’ ಎಂದರು.</p>.<p>ಅಗ್ನಿಪಥ ಯೋಜನೆ ಕುರಿತ ಟೀಕೆಗಳಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಂತಹ ಪ್ರಶ್ನೆಗಳಿಗೆ ಅರ್ಥವೇ ಇಲ್ಲ. ಸಶಸ್ತ್ರ ಪಡೆಗಳು ತರುಣರಿಂದ ತುಂಬಿರಬೇಕು ಎಂಬ ಮಾತನ್ನು ಎಲ್ಲರೂ ಒಪ್ಪುತ್ತಾರೆ’ ಎಂದರು.</p>.<p>‘ಯುವಕರ ಸಂಖ್ಯೆ ಹೆಚ್ಚಿದ್ದಷ್ಟೂ, ಸಶಸ್ತ್ರ ಪಡೆಗಳಲ್ಲಿ ಸವಾಲು ಎದುರಿಸುವ ಉತ್ಸಾಹ ಹೆಚ್ಚುವುದು. ತಂತ್ರಜ್ಞಾನ ಬಳಕೆ ಬಗ್ಗೆ ಒಲವು ಹೊಂದಿರುವ ಯೋಧರು ಸಂಖ್ಯೆಯೂ ಹೆಚ್ಚಾಗಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>