‘ಇದು ಬಲಪಂಥಕ್ಕೆ ಸಂದ ಜಯ. ಉದ್ಯಾನಕ್ಕೆ ಇಟ್ಟಿರುವ ಹೆಸರನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಸಕಲ ಹಿಂದೂ ಸಮಾಜ ಪ್ರತಿಭಟನೆಗಳನ್ನು ನಡೆಸಿತ್ತು. ಇದೇ ಬೇಡಿಕೆಯನ್ನು ಮುಂಬೈ ಉತ್ತರ ಲೋಕಸಭಾ ಸಂಸದ ಗೋಪಾಲ್ ಶೆಟ್ಟಿ ಅವರು ಡಿಪಿಡಿಸಿ ಸಭೆಯಲ್ಲಿ ಮಂಡಿಸಿದ್ದರು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದು ಹಾಕುವಂತೆ ಆದೇಶಿಸಲಾಗಿದೆ’ ಎಂದು ಲೋಧಾ ಹೇಳಿದ್ದಾರೆ.