<p><strong>ನವದೆಹಲಿ</strong>: ದೇಶದಲ್ಲಿ ಕೆಲವೆಡೆ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎಂಎಸ್ಎಂಇ, ಆಹಾರ ಸಂಸ್ಕರಣಾ ಘಟಕಗಳಂತಹ ಕೈಗಾರಿಕೆಗಳಿಗೆ ಮತ್ತು ಮೂಲಸೌಕರ್ಯ ನಿರ್ಮಾಣ ಯೋಜನೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಆಮ್ಲಜನಕ ಉತ್ಪಾದಕ ಘಟಕಗಳಿಗೆ ಅನುಮತಿ ನೀಡಿದೆ.</p>.<p>ಆದರೆ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ ಆಸ್ಪತ್ರೆಗಳು ಮತ್ತು ಇತರೆ ವೈದ್ಯಕೀಯ ಉದ್ದೇಶಗಳಿಗೆ ಇರುವ ವೈದ್ಯಕೀಯ ಆಮ್ಲಜನಕದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿನ ಬೇಡಿಕೆಗಳನ್ನು ಪೂರೈಸಿದ ನಂತರವೇ ಉಳಿದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸಬೇಕು ಎಂದು ಸರ್ಕಾರ ತಿಳಿಸಿದೆ.</p>.<p>ಕೋವಿಡ್ ಪ್ರಕರಣಗಳು ಏರಿಕೆಯಾದ ಕಾರಣ, ಕೇಂದ್ರ ಸರ್ಕಾರ ಏಪ್ರಿಲ್ ತಿಂಗಳಲ್ಲಿ ಒಂಬತ್ತು ನಿರ್ದಿಷ್ಟ ಕೈಗಾರಿಕೆಗಳನ್ನು ಹೊರತುಪಡಿಸಿ, ಬೇರೆ ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ ಪೂರೈಸುವುದಕ್ಕೆ ನಿಷೇಧ ಹೇರಿತ್ತು.</p>.<p><a href="https://www.prajavani.net/india-news/covid-19-crisis-in-india-rajasthan-wasted-more-than-11-lakh-doses-of-coronavirus-vaccine-accused-835105.html" itemprop="url">ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ: ಗಜೇಂದ್ರ ಸಿಂಗ್ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕೆಲವೆಡೆ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎಂಎಸ್ಎಂಇ, ಆಹಾರ ಸಂಸ್ಕರಣಾ ಘಟಕಗಳಂತಹ ಕೈಗಾರಿಕೆಗಳಿಗೆ ಮತ್ತು ಮೂಲಸೌಕರ್ಯ ನಿರ್ಮಾಣ ಯೋಜನೆಗಳಿಗೆ ತಾತ್ಕಾಲಿಕವಾಗಿ ದ್ರವೀಕೃತ ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರ ಆಮ್ಲಜನಕ ಉತ್ಪಾದಕ ಘಟಕಗಳಿಗೆ ಅನುಮತಿ ನೀಡಿದೆ.</p>.<p>ಆದರೆ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ ಆಸ್ಪತ್ರೆಗಳು ಮತ್ತು ಇತರೆ ವೈದ್ಯಕೀಯ ಉದ್ದೇಶಗಳಿಗೆ ಇರುವ ವೈದ್ಯಕೀಯ ಆಮ್ಲಜನಕದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಲ್ಲಿನ ಬೇಡಿಕೆಗಳನ್ನು ಪೂರೈಸಿದ ನಂತರವೇ ಉಳಿದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸಬೇಕು ಎಂದು ಸರ್ಕಾರ ತಿಳಿಸಿದೆ.</p>.<p>ಕೋವಿಡ್ ಪ್ರಕರಣಗಳು ಏರಿಕೆಯಾದ ಕಾರಣ, ಕೇಂದ್ರ ಸರ್ಕಾರ ಏಪ್ರಿಲ್ ತಿಂಗಳಲ್ಲಿ ಒಂಬತ್ತು ನಿರ್ದಿಷ್ಟ ಕೈಗಾರಿಕೆಗಳನ್ನು ಹೊರತುಪಡಿಸಿ, ಬೇರೆ ಕೈಗಾರಿಕಾ ಉದ್ದೇಶಗಳಿಗಾಗಿ ಆಮ್ಲಜನಕ ಪೂರೈಸುವುದಕ್ಕೆ ನಿಷೇಧ ಹೇರಿತ್ತು.</p>.<p><a href="https://www.prajavani.net/india-news/covid-19-crisis-in-india-rajasthan-wasted-more-than-11-lakh-doses-of-coronavirus-vaccine-accused-835105.html" itemprop="url">ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ: ಗಜೇಂದ್ರ ಸಿಂಗ್ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>