<p><strong>ನವದೆಹಲಿ:</strong> ಕೋವಿಡ್-19ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ನೀಡುವ ಮಾಸಿಕ ಆರ್ಥಿಕ ಸಹಾಯವನ್ನು ₹ 2,000 ದಿಂದ ₹ 4,000ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಮುಂದಿನ ಕೆಲವು ವಾರಗಳಲ್ಲಿ ಈ ಪ್ರಸ್ತಾವನೆಯು ಕ್ಯಾಬಿನೆಟ್ ಅನುಮೋದನೆಗೆ ಹೋಗಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುವ ಮಾಸಿಕ ಸಹಾಯ ಧನವನ್ನು ₹ 2,000 ದಿಂದ ₹ 4,000ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಕೋವಿಡ್-19ನಿಂದಾಗಿ ಪೋಷಕರು ಅಥವಾ ಕಾನೂನಾತ್ಮಕ ಪಾಲಕರು/ದತ್ತು ಪಡೆದಿದ್ದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 'ಪಿಎಂ-ಕೇರ್ಸ್ ಫಾರ್ ಚಿಲ್ಡ್ರನ್' ಯೋಜನೆ ಅಡಿಯಲ್ಲಿ ಬೆಂಬಲಿಸಲಾಗುವುದು ಎಂದು ಸರ್ಕಾರವು ಮೇ ತಿಂಗಳಿನಲ್ಲಿ ಘೋಷಿಸಿತ್ತು.</p>.<p>ಈವರೆಗೂ ಈ ಯೋಜನೆಯಡಿ ಸ್ವೀಕರಿಸಿರುವ 3,250 ಅರ್ಜಿಗಳಲ್ಲಿ, ಒಟ್ಟು 667 ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅನುಮೋದಿಸಿದ್ದಾರೆ. ಇಲ್ಲಿಯವರೆಗೆ 467 ಜಿಲ್ಲೆಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್-19ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ನೀಡುವ ಮಾಸಿಕ ಆರ್ಥಿಕ ಸಹಾಯವನ್ನು ₹ 2,000 ದಿಂದ ₹ 4,000ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಮುಂದಿನ ಕೆಲವು ವಾರಗಳಲ್ಲಿ ಈ ಪ್ರಸ್ತಾವನೆಯು ಕ್ಯಾಬಿನೆಟ್ ಅನುಮೋದನೆಗೆ ಹೋಗಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುವ ಮಾಸಿಕ ಸಹಾಯ ಧನವನ್ನು ₹ 2,000 ದಿಂದ ₹ 4,000ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಕೋವಿಡ್-19ನಿಂದಾಗಿ ಪೋಷಕರು ಅಥವಾ ಕಾನೂನಾತ್ಮಕ ಪಾಲಕರು/ದತ್ತು ಪಡೆದಿದ್ದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 'ಪಿಎಂ-ಕೇರ್ಸ್ ಫಾರ್ ಚಿಲ್ಡ್ರನ್' ಯೋಜನೆ ಅಡಿಯಲ್ಲಿ ಬೆಂಬಲಿಸಲಾಗುವುದು ಎಂದು ಸರ್ಕಾರವು ಮೇ ತಿಂಗಳಿನಲ್ಲಿ ಘೋಷಿಸಿತ್ತು.</p>.<p>ಈವರೆಗೂ ಈ ಯೋಜನೆಯಡಿ ಸ್ವೀಕರಿಸಿರುವ 3,250 ಅರ್ಜಿಗಳಲ್ಲಿ, ಒಟ್ಟು 667 ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅನುಮೋದಿಸಿದ್ದಾರೆ. ಇಲ್ಲಿಯವರೆಗೆ 467 ಜಿಲ್ಲೆಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>