<p><strong>ನವದೆಹಲಿ</strong>: ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದ 20 ಕಡತಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಸ್ ಕಳುಹಿಸಿರುವ ಕೇಂದ್ರ ಸರ್ಕಾರ, ಮರುಪರಿಶೀಲಿಸುವಂತೆ ಹೇಳಿದೆ.</p>.<p>‘ಕೊಲಿಜಿಯಂ ಮಾಡಿರುವ ಕೆಲ ಶಿಫಾರಸುಗಳ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಅಸಮಾಧಾನ ಹೊರಹಾಕಿದೆ. ಈ ಕಾರಣಕ್ಕಾಗಿ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದ ಶಿಫಾರಸುಗಳಿರುವ ಕಡತಗಳನ್ನು ಕೊಲಿಜಿಯಂಗೆನ. 25ರಂದು ವಾಪಸು ಕಳಿಸಿದೆ’ ಎಂದು ಮೂಲಗಳು ಹೇಳಿವೆ.</p>.<p>20 ಹೆಸರುಗಳ ಪೈಕಿ 11 ಹೆಸರುಗಳು ಹೊಸಬರದ್ದಾಗಿವೆ. 9 ಜನರ ಹೆಸರುಗಳನ್ನೇ ಪುನಃ ಶಿಫಾರಸು ಮಾಡಲಾಗಿದೆ ಎಂದು ಇವೇ ಮೂಲಗಳು ಹೇಳಿವೆ.</p>.<p>ತಾನು ಸಲಿಂಗಿ ಎಂಬುದಾಗಿ ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕೃಪಾಲ್ ಅವರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿದೆ. ಕೃಪಾಲ್ ಅವರು ನಿವೃತ್ತ ಸಿಜೆಐ ಬಿ.ಎನ್.ಕೃಪಾಲ್ ಅವರ ಪುತ್ರ. </p>.<p>‘ನನಗೆ ಬಡ್ತಿ ನೀಡುವಲ್ಲಿ ಆಗುತ್ತಿರುವ ವಿಳಂಬಕ್ಕೆ ನಾನು ಸಲಿಂಗಿ ಆಗಿರುವುದೇ ಕಾರಣ’ ಎಂಬುದಾಗಿ ಅವರು ಇತ್ತೀಚೆಗೆ ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.</p>.<p>ಈ ಹಿಂದೆ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿದ್ದ ಎನ್.ವಿ.ರಮಣ ನೇತೃತ್ವದ ಕೊಲಿಜಿಯಂ, ಕೃಪಾಲ್ ಅವರಿಗೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲು ಕಳೆದ ವರ್ಷ ಶಿಫಾರಸು ಮಾಡಿತ್ತು. ಇದಕ್ಕೂ ಮುನ್ನ, ಕೃಪಾಲ್ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು.</p>.<p>ಕೊಲಿಜಿಯಂ ಕಳುಹಿಸಿದ್ದ ಹೆಸರುಗಳನ್ನು ಅನುಮೋದಿಸುವಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ವಿಳಂಬದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರವಷ್ಟೇ ತನ್ನ ಅಸಮಾಧಾನವನ್ನು ಹೊರಹಾಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದ 20 ಕಡತಗಳನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಸ್ ಕಳುಹಿಸಿರುವ ಕೇಂದ್ರ ಸರ್ಕಾರ, ಮರುಪರಿಶೀಲಿಸುವಂತೆ ಹೇಳಿದೆ.</p>.<p>‘ಕೊಲಿಜಿಯಂ ಮಾಡಿರುವ ಕೆಲ ಶಿಫಾರಸುಗಳ ಬಗ್ಗೆ ಕೇಂದ್ರ ಸರ್ಕಾರ ತೀವ್ರ ಅಸಮಾಧಾನ ಹೊರಹಾಕಿದೆ. ಈ ಕಾರಣಕ್ಕಾಗಿ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದ ಶಿಫಾರಸುಗಳಿರುವ ಕಡತಗಳನ್ನು ಕೊಲಿಜಿಯಂಗೆನ. 25ರಂದು ವಾಪಸು ಕಳಿಸಿದೆ’ ಎಂದು ಮೂಲಗಳು ಹೇಳಿವೆ.</p>.<p>20 ಹೆಸರುಗಳ ಪೈಕಿ 11 ಹೆಸರುಗಳು ಹೊಸಬರದ್ದಾಗಿವೆ. 9 ಜನರ ಹೆಸರುಗಳನ್ನೇ ಪುನಃ ಶಿಫಾರಸು ಮಾಡಲಾಗಿದೆ ಎಂದು ಇವೇ ಮೂಲಗಳು ಹೇಳಿವೆ.</p>.<p>ತಾನು ಸಲಿಂಗಿ ಎಂಬುದಾಗಿ ಹೇಳಿಕೊಂಡಿರುವ ಹಿರಿಯ ವಕೀಲ ಸೌರಭ್ ಕೃಪಾಲ್ ಅವರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿದೆ. ಕೃಪಾಲ್ ಅವರು ನಿವೃತ್ತ ಸಿಜೆಐ ಬಿ.ಎನ್.ಕೃಪಾಲ್ ಅವರ ಪುತ್ರ. </p>.<p>‘ನನಗೆ ಬಡ್ತಿ ನೀಡುವಲ್ಲಿ ಆಗುತ್ತಿರುವ ವಿಳಂಬಕ್ಕೆ ನಾನು ಸಲಿಂಗಿ ಆಗಿರುವುದೇ ಕಾರಣ’ ಎಂಬುದಾಗಿ ಅವರು ಇತ್ತೀಚೆಗೆ ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.</p>.<p>ಈ ಹಿಂದೆ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿದ್ದ ಎನ್.ವಿ.ರಮಣ ನೇತೃತ್ವದ ಕೊಲಿಜಿಯಂ, ಕೃಪಾಲ್ ಅವರಿಗೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲು ಕಳೆದ ವರ್ಷ ಶಿಫಾರಸು ಮಾಡಿತ್ತು. ಇದಕ್ಕೂ ಮುನ್ನ, ಕೃಪಾಲ್ ಅವರ ಹೆಸರನ್ನು ಶಿಫಾರಸು ಮಾಡುವ ನಿರ್ಧಾರವನ್ನು ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು.</p>.<p>ಕೊಲಿಜಿಯಂ ಕಳುಹಿಸಿದ್ದ ಹೆಸರುಗಳನ್ನು ಅನುಮೋದಿಸುವಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ವಿಳಂಬದ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರವಷ್ಟೇ ತನ್ನ ಅಸಮಾಧಾನವನ್ನು ಹೊರಹಾಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>