<p><strong>ನವದೆಹಲಿ: </strong>ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಮೇಲೆ ಅವಲಂಬಿತರಾದವರಿಗೆ ಪಿಂಚಣಿ ನೀಡುವ ನಿಟ್ಟಿನಲ್ಲಿ ₹3274.87 ಕೋಟಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಣವನ್ನು 2025-26ರವರೆಗೆ ಸದ್ಬಳಕೆ ಮಾಡಬಹುದಾಗಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆಯಡಿ(ಎಸ್ಎಸ್ಎಸ್ವೈ) ಹಣಕಾಸು ನೆರವು ಪಡೆಯುವ ದೇಶದ 23,566 ಫಲಾನುಭವಿಗಳಿಗೆ ಅನುಕೂಲವಾಗಲಿದೆ.</p>.<p>ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆ 2025-26ರವರೆಗೆ ಮುಂದುವರಿಸುವ ಮತ್ತು ಅದಕ್ಕಾಗಿ ₹3274.87 ಕೋಟಿ ಮೀಸಲಿಡುವ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದೆ. ಅಲ್ಲದೆ ಕೇಂದ್ರ ಸರ್ಕಾರದ ಈ ನಿರ್ಣಯವು ಆಜಾದಿ ಕಾ ಅಮೃತಮಹೋತ್ಸವದ ವರ್ಷದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ನೆನೆಯುವ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಎಸ್ಎಸ್ಎಸ್ವೈ ಯೋಜನೆ ಮುಂದುವರಿಸುವ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಮೇಲೆ ಅವಲಂಬಿತರಾದವರಿಗೆ ಪಿಂಚಣಿ ನೀಡುವ ನಿಟ್ಟಿನಲ್ಲಿ ₹3274.87 ಕೋಟಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹಣವನ್ನು 2025-26ರವರೆಗೆ ಸದ್ಬಳಕೆ ಮಾಡಬಹುದಾಗಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆಯಡಿ(ಎಸ್ಎಸ್ಎಸ್ವೈ) ಹಣಕಾಸು ನೆರವು ಪಡೆಯುವ ದೇಶದ 23,566 ಫಲಾನುಭವಿಗಳಿಗೆ ಅನುಕೂಲವಾಗಲಿದೆ.</p>.<p>ಸ್ವತಂತ್ರ ಸೈನಿಕ ಸಮ್ಮಾನ್ ಯೋಜನೆ 2025-26ರವರೆಗೆ ಮುಂದುವರಿಸುವ ಮತ್ತು ಅದಕ್ಕಾಗಿ ₹3274.87 ಕೋಟಿ ಮೀಸಲಿಡುವ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದೆ. ಅಲ್ಲದೆ ಕೇಂದ್ರ ಸರ್ಕಾರದ ಈ ನಿರ್ಣಯವು ಆಜಾದಿ ಕಾ ಅಮೃತಮಹೋತ್ಸವದ ವರ್ಷದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ನೆನೆಯುವ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಎಸ್ಎಸ್ಎಸ್ವೈ ಯೋಜನೆ ಮುಂದುವರಿಸುವ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>