<p><strong>ಲಖನೌ</strong>: ನಿರುದ್ಯೋಗ ಸಮಸ್ಯೆ ಕುರಿತಂತೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ಪಿ ನಾಯಕಿ ಮಾಯಾವತಿ, ಜನರಿಗೆ ಉದ್ಯೋಗದ ಗ್ಯಾರಂಟಿ ನೀಡುವ ಮೂಲಕ ನಿಜವಾದ ದೇಶಭಕ್ತಿ ಪ್ರದರ್ಶಿಸಿ ಎಂದು ಹೇಳಿದ್ದಾರೆ.</p><p>ಈ ಕುರಿತಂತೆ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ‘ಹಿಂದಿನ ಕಾಂಗ್ರೆಸ್, ಈಗಿನ ಬಿಜೆಪಿ ನೇತೃತ್ವದ ಜಾತಿವಾದಿ, ದುರಹಂಕಾರಿ, ಎಲ್ಲರನ್ನೂ ಒಳಗೊಳ್ಳದ ಸರ್ಕಾರಗಳಿಂದಾಗಿ ದೇಶದ ಕೋಟಿಗಟ್ಟಲೆ ಬಡವರ ಅಭಿವೃದ್ಧಿಗೆ ಧಕ್ಕೆಯಾಗಿದೆ’ ಎಂದು ಕಿಡಿಕಾರಿದರು.</p><p>‘ಹೊಸ ವರ್ಷದ ಈ ಸುದಿನದಲ್ಲಿ ಸರ್ಕಾರವು ದೇಶದ ಜನರಿಗೆ ಉದ್ಯೋಗವನ್ನು ಖಾತ್ರಿಪಡಿಸುವ ಮೂಲಕ ನಿಜವಾದ ದೇಶಭಕ್ತಿ ಮತ್ತು ರಾಜಧರ್ಮವನ್ನು ಪಾಲಿಸಲಿ. ಯಾಕೆಂದರೆ ಸರ್ಕಾರದ ಉಳಿದ ಗ್ಯಾರಂಟಿಗಳು ಸಂಕುಚಿತ ರಾಷ್ಟ್ರೀಯತೆಯಿಂದ ಕೂಡಿದ ಮೋಸದ ರಾಜಕಾರಣವೆಂದು ಸಾಬೀತಾಗಿದೆ’ ಎಂದರು.</p><p>‘ಖರ್ಚು ಮಾಡಲು ಜನರ ಜೇಬಿನಲ್ಲಿ ಹಣವೇ ಇಲ್ಲದಿದ್ದ ಮೇಲೆ ಅಭಿವೃದ್ಧಿಯ ಕಹಳೆ ಊದಿದರೇನು ಪ್ರಯೋಜನ. ಇಷ್ಟು ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ತಾಂಡವಾಡುತ್ತಿದ್ದರೆ ಅಭಿವೃದ್ದಿ ಹೊಂದಿದ ದೇಶವಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ನಿರುದ್ಯೋಗ ಸಮಸ್ಯೆ ಕುರಿತಂತೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ಪಿ ನಾಯಕಿ ಮಾಯಾವತಿ, ಜನರಿಗೆ ಉದ್ಯೋಗದ ಗ್ಯಾರಂಟಿ ನೀಡುವ ಮೂಲಕ ನಿಜವಾದ ದೇಶಭಕ್ತಿ ಪ್ರದರ್ಶಿಸಿ ಎಂದು ಹೇಳಿದ್ದಾರೆ.</p><p>ಈ ಕುರಿತಂತೆ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ‘ಹಿಂದಿನ ಕಾಂಗ್ರೆಸ್, ಈಗಿನ ಬಿಜೆಪಿ ನೇತೃತ್ವದ ಜಾತಿವಾದಿ, ದುರಹಂಕಾರಿ, ಎಲ್ಲರನ್ನೂ ಒಳಗೊಳ್ಳದ ಸರ್ಕಾರಗಳಿಂದಾಗಿ ದೇಶದ ಕೋಟಿಗಟ್ಟಲೆ ಬಡವರ ಅಭಿವೃದ್ಧಿಗೆ ಧಕ್ಕೆಯಾಗಿದೆ’ ಎಂದು ಕಿಡಿಕಾರಿದರು.</p><p>‘ಹೊಸ ವರ್ಷದ ಈ ಸುದಿನದಲ್ಲಿ ಸರ್ಕಾರವು ದೇಶದ ಜನರಿಗೆ ಉದ್ಯೋಗವನ್ನು ಖಾತ್ರಿಪಡಿಸುವ ಮೂಲಕ ನಿಜವಾದ ದೇಶಭಕ್ತಿ ಮತ್ತು ರಾಜಧರ್ಮವನ್ನು ಪಾಲಿಸಲಿ. ಯಾಕೆಂದರೆ ಸರ್ಕಾರದ ಉಳಿದ ಗ್ಯಾರಂಟಿಗಳು ಸಂಕುಚಿತ ರಾಷ್ಟ್ರೀಯತೆಯಿಂದ ಕೂಡಿದ ಮೋಸದ ರಾಜಕಾರಣವೆಂದು ಸಾಬೀತಾಗಿದೆ’ ಎಂದರು.</p><p>‘ಖರ್ಚು ಮಾಡಲು ಜನರ ಜೇಬಿನಲ್ಲಿ ಹಣವೇ ಇಲ್ಲದಿದ್ದ ಮೇಲೆ ಅಭಿವೃದ್ಧಿಯ ಕಹಳೆ ಊದಿದರೇನು ಪ್ರಯೋಜನ. ಇಷ್ಟು ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ತಾಂಡವಾಡುತ್ತಿದ್ದರೆ ಅಭಿವೃದ್ದಿ ಹೊಂದಿದ ದೇಶವಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>