ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗದ ಗ್ಯಾರಂಟಿ ನೀಡಿ ದೇಶಭಕ್ತಿ ಪ್ರದರ್ಶಿಸಿ: ಕೇಂದ್ರ ವಿರುದ್ಧ ಮಾಯಾವತಿ ಕಿಡಿ

Published 1 ಜನವರಿ 2024, 8:23 IST
Last Updated 1 ಜನವರಿ 2024, 8:23 IST
ಅಕ್ಷರ ಗಾತ್ರ

ಲಖನೌ: ನಿರುದ್ಯೋಗ ಸಮಸ್ಯೆ ಕುರಿತಂತೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್‌ಪಿ ನಾಯಕಿ ಮಾಯಾವತಿ, ಜನರಿಗೆ ಉದ್ಯೋಗದ ಗ್ಯಾರಂಟಿ ನೀಡುವ ಮೂಲಕ ನಿಜವಾದ ದೇಶಭಕ್ತಿ ಪ್ರದರ್ಶಿಸಿ ಎಂದು ಹೇಳಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ‘ಹಿಂದಿನ ಕಾಂಗ್ರೆಸ್, ಈಗಿನ ಬಿಜೆಪಿ ನೇತೃತ್ವದ ಜಾತಿವಾದಿ, ದುರಹಂಕಾರಿ, ಎಲ್ಲರನ್ನೂ ಒಳಗೊಳ್ಳದ ಸರ್ಕಾರಗಳಿಂದಾಗಿ ದೇಶದ ಕೋಟಿಗಟ್ಟಲೆ ಬಡವರ ಅಭಿವೃದ್ಧಿಗೆ ಧಕ್ಕೆಯಾಗಿದೆ’ ಎಂದು ಕಿಡಿಕಾರಿದರು.

‘ಹೊಸ ವರ್ಷದ ಈ ಸುದಿನದಲ್ಲಿ ಸರ್ಕಾರವು ದೇಶದ ಜನರಿಗೆ ಉದ್ಯೋಗವನ್ನು ಖಾತ್ರಿಪಡಿಸುವ ಮೂಲಕ ನಿಜವಾದ ದೇಶಭಕ್ತಿ ಮತ್ತು ರಾಜಧರ್ಮವನ್ನು ಪಾಲಿಸಲಿ. ಯಾಕೆಂದರೆ ಸರ್ಕಾರದ ಉಳಿದ ಗ್ಯಾರಂಟಿಗಳು ಸಂಕುಚಿತ ರಾಷ್ಟ್ರೀಯತೆಯಿಂದ ಕೂಡಿದ ಮೋಸದ ರಾಜಕಾರಣವೆಂದು ಸಾಬೀತಾಗಿದೆ’ ಎಂದರು.

‘ಖರ್ಚು ಮಾಡಲು ಜನರ ಜೇಬಿನಲ್ಲಿ ಹಣವೇ ಇಲ್ಲದಿದ್ದ ಮೇಲೆ ಅಭಿವೃದ್ಧಿಯ ಕಹಳೆ ಊದಿದರೇನು ಪ್ರಯೋಜನ. ಇಷ್ಟು ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗ ತಾಂಡವಾಡುತ್ತಿದ್ದರೆ ಅಭಿವೃದ್ದಿ ಹೊಂದಿದ ದೇಶವಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT