<p><strong>ನವದೆಹಲಿ:</strong> ‘ಬೆಲೆ ಏರಿಕೆಯ ನಡುವೆಯೂ ರೈತರಿಗೆ ಸಬ್ಸಿಡಿ ದರದಲ್ಲಿ ರಸಗೊಬ್ಬರ ಪೂರೈಸುವುದನ್ನು ಮುಂದುವರಿಸಲಾಗುವುದು’ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.</p>.<p>‘ಪ್ರತಿ ಚೀಲಕ್ಕೆ ₹ 1,200ರಷ್ಟು ಬೆಲೆ ಏರಿದಾಗಲೂ ಕೇಂದ್ರ ಸರ್ಕಾರವು ರೈತರಿಗೆ ಸಬ್ಸಿಡಿ ದರದಲ್ಲಿ ದೊರೆಯುವಂತೆ ಮಾಡಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರು ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.</p>.<p>ಎಐಎಂಐಎಂ ಸದಸ್ಯ ಇಮ್ತಿಯಾಜ್ ಜಲೀಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೈಲಾಶ್ ಅವರು, ‘ಪ್ರತಿ ಚೀಲಕ್ಕೆ ₹ 600ರಷ್ಟು ಸಬ್ಸಿಡಿ ಇದೆ. ಇಂದು ಪ್ರತಿ ಚೀಲ ರಸಗೊಬ್ಬರದ ಮೇಲೆ ₹ 4,200ಕ್ಕೆ ತಲುಪಿದೆ. ಆದರೂ, ಕೇಂದ್ರ ಸರ್ಕಾರ ₹ 2,600ರಷ್ಟು ಸಬ್ಸಿಡಿ ನೀಡುವ ಮೂಲಕ ಪ್ರತಿ ಚೀಲಕ್ಕೆ ₹ 1,200 ದರದಲ್ಲಿ ರೈತರಿಗೆ ಪೂರೈಸುತ್ತಿದೆ. ಅಗತ್ಯವಿದ್ದಾಗ, ಎಲ್ಲಿಂದ ತರಬೇಕಾದರೂ ರೈತರಿಗೆ ರಸಗೊಬ್ಬರ ಲಭ್ಯವಾಗುವಂತೆ ಮಾಡಲಾಗುವುದು’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬೆಲೆ ಏರಿಕೆಯ ನಡುವೆಯೂ ರೈತರಿಗೆ ಸಬ್ಸಿಡಿ ದರದಲ್ಲಿ ರಸಗೊಬ್ಬರ ಪೂರೈಸುವುದನ್ನು ಮುಂದುವರಿಸಲಾಗುವುದು’ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.</p>.<p>‘ಪ್ರತಿ ಚೀಲಕ್ಕೆ ₹ 1,200ರಷ್ಟು ಬೆಲೆ ಏರಿದಾಗಲೂ ಕೇಂದ್ರ ಸರ್ಕಾರವು ರೈತರಿಗೆ ಸಬ್ಸಿಡಿ ದರದಲ್ಲಿ ದೊರೆಯುವಂತೆ ಮಾಡಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರು ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದರು.</p>.<p>ಎಐಎಂಐಎಂ ಸದಸ್ಯ ಇಮ್ತಿಯಾಜ್ ಜಲೀಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೈಲಾಶ್ ಅವರು, ‘ಪ್ರತಿ ಚೀಲಕ್ಕೆ ₹ 600ರಷ್ಟು ಸಬ್ಸಿಡಿ ಇದೆ. ಇಂದು ಪ್ರತಿ ಚೀಲ ರಸಗೊಬ್ಬರದ ಮೇಲೆ ₹ 4,200ಕ್ಕೆ ತಲುಪಿದೆ. ಆದರೂ, ಕೇಂದ್ರ ಸರ್ಕಾರ ₹ 2,600ರಷ್ಟು ಸಬ್ಸಿಡಿ ನೀಡುವ ಮೂಲಕ ಪ್ರತಿ ಚೀಲಕ್ಕೆ ₹ 1,200 ದರದಲ್ಲಿ ರೈತರಿಗೆ ಪೂರೈಸುತ್ತಿದೆ. ಅಗತ್ಯವಿದ್ದಾಗ, ಎಲ್ಲಿಂದ ತರಬೇಕಾದರೂ ರೈತರಿಗೆ ರಸಗೊಬ್ಬರ ಲಭ್ಯವಾಗುವಂತೆ ಮಾಡಲಾಗುವುದು’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>