ನವದೆಹಲಿ: ರೈತ ಸಂಘಟನೆಗಳ ಮುಖಂಡರೊಂದಿಗೆ ಶನಿವಾರ ನಡೆದ ಐದನೇ ಸುತ್ತಿನ ಮಾತುಕತೆ ಯಶಸ್ವಿಯಾಗದೆ, ಡಿಸೆಂಬರ್ 9ರಂದು ಮತ್ತೊಂದು ಸಭೆಯನ್ನು ನಡೆಸಲು ಕೇಂದ್ರ ಸರ್ಕಾರ ಘೋಷಿಸಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ನಿಮ್ಮೆಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯವಸ್ಥೆ ಮುಂದುವರಿಯುತ್ತದೆ ಮತ್ತು 'ಇದಕ್ಕೆ ಯಾವುದೇ ಅಡೆತಡೆಯು ಇಲ್ಲ' ಎಂದು ಆಕ್ರೋಶಗೊಂಡಿದ್ದ ರೈತರಿಗೆ ಭರವಸೆ ನೀಡಿದ್ದಾರೆ.
ವಿಜ್ಞಾನ ಭವನದಲ್ಲಿ ನಡೆದ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕನಿಷ್ಠ ಬೆಂಬಲ ಬೆಲೆಯು ಮುಂದುವರಿಯುತ್ತದೆ. ಅದಕ್ಕೆ ಯಾವುದೇ ಅಡೆತಡೆ ಇಲ್ಲ ಎಂದು ನಾವು ತಿಳಿಸಿದ್ದೇವೆ. ಈ ಬಗ್ಗೆ ಅನುಮಾನಗಳಿದ್ದರೆ ಅದು ಆಧಾರರಹಿತ. ಯಾರಿಗಾದರೂ ಅನುಮಾನಗಳಿದ್ದರೆ ಅದನ್ನು ಪರಿಹರಿಸಲು ಸರ್ಕಾರ ಸಿದ್ಧವಿದೆ. ರಾಜ್ಯಗಳಲ್ಲಿ ಮಂಡಿಯ ಮೇಲೆ ಪರಿಣಾಮ ಬೀರುವ ಉದ್ದೇಶ ನಮಗಿಲ್ಲ, ಅವು ಕಾನೂನಿನ ಮೂಲಕವೂ ಪರಿಣಾಮ ಬೀರುವುದಿಲ್ಲ. ಎಪಿಎಂಸಿಗಳ ಬಗ್ಗೆ ಯಾರಾದರೂ ತಪ್ಪು ಕಲ್ಪನೆ ಹೊಂದಿದ್ದರೆ, ಅದನ್ನು ಸರಿಪಡಿಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ' ಎಂದು ತಿಳಿಸಿದ್ದಾರೆ.
I want to request protesting farmers to give up their movement so that they don't face inconvenience in this cold weather & citizens of Delhi can also live a life of convenience: Union Agriculture Minister Narendra Singh Tomar after 5th round of talks at Vigyan Bhawan today https://t.co/nn1gRw7joB pic.twitter.com/sXBb1d83ol
— ANI (@ANI) December 5, 2020
ನಾವು ರೈತರಿಂದ ಕೆಲವು ಸಲಹೆಗಳನ್ನು ಪಡೆಯಲು ಬಯಸಿದ್ದೇವು ಆದರೆ ಮಾತುಕತೆಯ ಸಮಯದಲ್ಲಿ ಅದು ಆಗಲಿಲ್ಲ. ರೈತರ ಎಲ್ಲ ಬೇಡಿಕೆಗಳನ್ನು ಸರ್ಕಾರ ಪರಿಗಣಿಸುತ್ತದೆ ಎಂದು ತಿಳಿಸಿದ್ದೇವೆ. ರೈತ ಮುಖಂಡರಿಂದ ಸಲಹೆಗಳನ್ನು ಪಡೆದಿದ್ದರೆ ಪರಿಹಾರವನ್ನು ಕಂಡುಕೊಳ್ಳುವುದು ನಮಗೆ ಸುಲಭವಾಗುತ್ತಿತ್ತು. ಈಗ, ಡಿಸೆಂಬರ್ 9 ರಂದು ಮತ್ತೊಂದು ಸಭೆ ನಡೆಯಲಿದೆ ಮತ್ತು ರೈತರಿಗೆ ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆ ನೀಡಿದ್ದೇವೆ. ಶೀತ ಋತುಮಾನ ಮತ್ತು ಕೋವಿಡ್ -19 ಇರುವುದರಿಂದಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳನ್ನು ಪ್ರತಿಭಟನಾ ಸ್ಥಳಗಳಿಂದ ಮನೆಗೆ ಮರಳುವಂತೆ ಮಾಡಲು ರೈತ ಸಂಘದ ಮುಖಂಡರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.
Farmers should keep faith in Modi govt that whatever will be done, it will be in their interest. I want to thank Farmers' unions for maintaining the discipline...Since talks couldn't be completed today, we've called for another meeting on 9th December: Union Agriculture Minister https://t.co/dP1PimfEvf pic.twitter.com/uRIeLj0S8J
— ANI (@ANI) December 5, 2020
ರೈತರ ಸುಧಾರಣೆಗೆ ಮೋದಿ ಸರ್ಕಾರ ಬದ್ಧವಾಗಿದೆ. ಮೋದಿ ಸರ್ಕಾರ ನಿಮಗೆ ಸಂಪೂರ್ಣ ಬದ್ಧವಾಗಿದೆ ಎಂದು ನಾನು ರೈತರಿಗೆ ಭರವಸೆ ನೀಡಲು ಬಯಸುತ್ತೇನೆ ಮತ್ತು ಭವಿಷ್ಯದಲ್ಲಿ ಹಾಗೆಯೇ ಉಳಿಯುತ್ತದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಹಲವಾರು ಕೃಷಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಜೆಟ್, ಎಂಎಸ್ಪಿ ಮತ್ತು ರೈತರ ಆದಾಯವೂ ಹೆಚ್ಚಾಗಿದೆ. ಯೂನಿಯನ್ಗಳ ಕಾರ್ಯಕ್ರಮದ ಕುರಿತು ಪ್ರತಿಕ್ರಿಯಿಸಲು ನಾನು ಇಷ್ಟಪಡುವುದಿಲ್ಲ. ಆದರೆ ರೈತರು ಮತ್ತು ಸಂಘಟನೆಗಳು ಪ್ರತಿಭಟನೆಯನ್ನು ಕೈಬಿಟ್ಟು ಚರ್ಚೆಗೆ ಬರಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಈಮಧ್ಯೆ, ಪ್ರತಿಭಟನಾನಿರತ ರೈತ ಸಂಘಟನೆಗಳು ಭಾರತ ಬಂದ್ಗೆ ಕರೆ ನೀಡಿದ್ದು, ರಾಷ್ಟ್ರವ್ಯಾಪಿ ಬಂದ್ ಡಿಸೆಂಬರ್ 8 ರಂದು ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.