ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಯೋಜನೆಗಾಗಿ 'ಆಯುಷ್ಮಾನ್ ಭವ'

Published 23 ಜುಲೈ 2023, 14:05 IST
Last Updated 23 ಜುಲೈ 2023, 14:05 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರದ ಎಲ್ಲ ಆರೋಗ್ಯ ಸೇವಾ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕೇಂದ್ರ ಆರೋಗ್ಯ ಸಚಿವಾಲಯ ‘ಆಯುಷ್ಮಾನ್‌ ಭವ’ ಕಾರ್ಯಕ್ರಮ ಆರಂಭಿಸಿದೆ.

‘ನಿಮ್ಮ ಮನೆ ಬಾಗಿಲಿಗೆ ಆಯುಷ್ಮಾನ್‌ 3, ಆಯುಷ್ಮಾನ್ ಮೇಳ, ಆಯುಷ್ಮಾನ್ ಗ್ರಾಮ ಯೋಜನೆ ಸೇರಿದಂತೆ ಇನ್ನಿತರೆ ಚಟುವಟಿಕೆಗಳನ್ನು ಈ ಕಾರ್ಯಕ್ರಮದಡಿ ನಡೆಸಲು ಯೋಜನೆ ರೂಪಿಸಲಾಗುತ್ತಿದೆ’ ಎಂದು ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ.

‘ಪ್ರತಿಯೊಬ್ಬ ಅರ್ಹ ಫಲಾನುಭವಿಯೂ ಪ್ರಯೋಜನ ಪಡೆಯಲು ಸಾಧ್ಯವಾಗುವಂತೆ ಎಲ್ಲಾ ಆರೋಗ್ಯ ಯೋಜನೆಗಳ ಸಮಗ್ರ ಮತ್ತು ಶುದ್ಧೀಕರಿಸುವ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವುದು ಈ ಅಭಿಯಾನದ ಗುರಿಯಾಗಿದೆ. ಈಗಾಗಲೇ ಎರಡು ಅಭಿಯಾನ ಯಶಸ್ವಿಯಾಗಿ ನಡೆದಿವೆ. ಪೂರ್ಣ ಶುದ್ಧತ್ವ ಖಚಿತಪಡಿಸಿಕೊಳ್ಳಲಿಕ್ಕಾಗಿ ಆ.1ರಿಂದ ನಿಮ್ಮ ಮನೆ ಬಾಗಿಲಿಗೆ ಆಯುಷ್ಮಾನ್‌ 3 ಅಭಿಯಾನ ನಡೆಯಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT