ನವದೆಹಲಿ: ಚಾಲಕರ ತಪ್ಪಿನಿಂದಾಗಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶದಿಂದ, ಚಾಲಕರ ಅರೆನಿದ್ರಾವಸ್ಥೆ ಹಾಗೂ ಜಾಗರೂಕ ಸ್ಥಿತಿಯನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವ ಸಂಬಂಧ ವ್ಯವಸ್ಥೆಯನ್ನು ರೂಪಿಸಲು ಕೇಂದ್ರ ಭೂಸಾರಿಗೆ ಸಚಿವಾಲಯ ಮುಂದಾಗಿದೆ. ಈ ಸಂಬಂಧ ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.