<p><strong>ನವದೆಹಲಿ</strong>: ಆಮ್ಲಜನಕ ಉತ್ಪಾದಿಸುವ ಕೈಗಾರಿಕೆಗಳ ಬಳಿಯೇ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ.</p>.<p>ಅಗತ್ಯವಿರುವಷ್ಟು ಶುದ್ಧತೆಯ ಆಮ್ಲಜನಕ ತಕ್ಷಣವೇ ಕೋವಿಡ್–19 ರೋಗಿಗಳಿಗೆ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಇಂಥ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ. ಇಂಥ ಆಸ್ಪತ್ರೆಗಳಲ್ಲಿ ಒಟ್ಟು 10,000 ಹಾಸಿಗೆಗಳು ಇರಲಿದ್ದು, ಪ್ರತಿ ಹಾಸಿಗೆಯೂ ಆಮ್ಲಜನಕ ಪೂರೈಕೆ ಸೌಲಭ್ಯ ಹೊಂದಿರಲಿದೆ ಎಂದು ಮೂಲಗಳು ಹೇಳಿವೆ.</p>.<p>ಕೋವಿಡ್–19 ಪರಿಸ್ಥಿತಿ ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯ ಬಳಿಕ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಲಾಗಿದೆ.</p>.<p>ಪ್ರಾಯೋಗಿಕವಾಗಿ ಇಂಥ ತಾತ್ಕಾಲಿಕ ಆಸ್ಪತ್ರೆಗಳ ಸ್ಥಾಪನೆಗೆ ಐದು ಸ್ಥಳಗಳನ್ನು ಸರ್ಕಾರ ಗುರುತಿಸಿದೆ.</p>.<p>ದೇಶದ ವಿವಿಧೆಡೆ ಸಾರಜನಕ ಉತ್ಪಾದಿಸುವ ಘಟಕಗಳಿದ್ದು, ಅವುಗಳನ್ನು ಆಮ್ಲಜನಕ ಉತ್ಪಾದನಾ ಘಟಕಗಳನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.</p>.<p>ಉಕ್ಕು ಕಾರ್ಖಾನೆಗಳು, ತೈಲ ಸಂಸ್ಕರಣೆ ಘಟಕಗಳಿರುವ ಪೆಟ್ರೋಕೆಮಿಕಲ್ ಉದ್ದಿಮೆಗಳು, ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ಸಹ ಪ್ರಾಣವಾಯುವಿನ ಉತ್ಪಾದನೆಗೆ ಬಳಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಮ್ಲಜನಕ ಉತ್ಪಾದಿಸುವ ಕೈಗಾರಿಕೆಗಳ ಬಳಿಯೇ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ.</p>.<p>ಅಗತ್ಯವಿರುವಷ್ಟು ಶುದ್ಧತೆಯ ಆಮ್ಲಜನಕ ತಕ್ಷಣವೇ ಕೋವಿಡ್–19 ರೋಗಿಗಳಿಗೆ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಇಂಥ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ. ಇಂಥ ಆಸ್ಪತ್ರೆಗಳಲ್ಲಿ ಒಟ್ಟು 10,000 ಹಾಸಿಗೆಗಳು ಇರಲಿದ್ದು, ಪ್ರತಿ ಹಾಸಿಗೆಯೂ ಆಮ್ಲಜನಕ ಪೂರೈಕೆ ಸೌಲಭ್ಯ ಹೊಂದಿರಲಿದೆ ಎಂದು ಮೂಲಗಳು ಹೇಳಿವೆ.</p>.<p>ಕೋವಿಡ್–19 ಪರಿಸ್ಥಿತಿ ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯ ಬಳಿಕ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಲಾಗಿದೆ.</p>.<p>ಪ್ರಾಯೋಗಿಕವಾಗಿ ಇಂಥ ತಾತ್ಕಾಲಿಕ ಆಸ್ಪತ್ರೆಗಳ ಸ್ಥಾಪನೆಗೆ ಐದು ಸ್ಥಳಗಳನ್ನು ಸರ್ಕಾರ ಗುರುತಿಸಿದೆ.</p>.<p>ದೇಶದ ವಿವಿಧೆಡೆ ಸಾರಜನಕ ಉತ್ಪಾದಿಸುವ ಘಟಕಗಳಿದ್ದು, ಅವುಗಳನ್ನು ಆಮ್ಲಜನಕ ಉತ್ಪಾದನಾ ಘಟಕಗಳನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.</p>.<p>ಉಕ್ಕು ಕಾರ್ಖಾನೆಗಳು, ತೈಲ ಸಂಸ್ಕರಣೆ ಘಟಕಗಳಿರುವ ಪೆಟ್ರೋಕೆಮಿಕಲ್ ಉದ್ದಿಮೆಗಳು, ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ಸಹ ಪ್ರಾಣವಾಯುವಿನ ಉತ್ಪಾದನೆಗೆ ಬಳಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>