<p><strong>ಜೈಪುರ:</strong> ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕಾಗುತ್ತದೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಆಗ ಬ್ರಿಟಿಷರೇ ಭಾರತದ ರೈತರ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ಈಗ ಈ ನರೇಂದ್ರ ಮೋದಿ ಯಾವ ಲೆಕ್ಕ ಎಂದು ಹೇಳಿದ್ದಾರೆ.</p>.<p>ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಪದಂಪೂರ್ ಪಟ್ಟಣದಲ್ಲಿ ಶುಕ್ರವಾರ ನಡೆದ ತಮ್ಮ ಎರಡನೇ ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ 40 ಪ್ರತಿಶತ ಜನರು ಕೃಷಿಯಲ್ಲಿ ತೊಡಗಿದ್ದಾರೆ. ಇದು ರಾಷ್ಟ್ರವನ್ನು ಪೋಷಿಸುತ್ತಿರುವ 'ಭಾರತ ಮಾತೆ'ಯ ವ್ಯವಹಾರವಾಗಿದೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/prime-minister-narendra-modi-wants-to-clear-path-for-his-friends-rahul-gandhi-on-farm-laws-804609.html" itemprop="url">ಸ್ನೇಹಿತರಿಗೆ ಅನುಕೂಲ ಕಲ್ಪಿಸುತ್ತಿರುವ ಪ್ರಧಾನಿ: ರಾಹುಲ್ ಗಾಂಧಿ ಟೀಕೆ </a></p>.<p>ರೈತರಿಗೆ ಸಂಬಂಧಪಟ್ಟಿದೆ ಎನ್ನುವ ಕಾರಣಕ್ಕಾಗಿ ಮಾತ್ರ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವು ದೇಶದಾದ್ಯಂತ ಹರಡುತ್ತಿದೆ ಎಂದಲ್ಲ. ಇದು ಕಾರ್ಮಿಕರು, ವ್ಯಾಪಾರಿಗಳು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಮತ್ತು ಮಧ್ಯಮ ವರ್ಗದವರ ಸಮಸ್ಯೆಯೂ ಆಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲೇಬೇಕಾಗುತ್ತದೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಆಗ ಬ್ರಿಟಿಷರೇ ಭಾರತದ ರೈತರ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ಈಗ ಈ ನರೇಂದ್ರ ಮೋದಿ ಯಾವ ಲೆಕ್ಕ ಎಂದು ಹೇಳಿದ್ದಾರೆ.</p>.<p>ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಪದಂಪೂರ್ ಪಟ್ಟಣದಲ್ಲಿ ಶುಕ್ರವಾರ ನಡೆದ ತಮ್ಮ ಎರಡನೇ ರೈತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ 40 ಪ್ರತಿಶತ ಜನರು ಕೃಷಿಯಲ್ಲಿ ತೊಡಗಿದ್ದಾರೆ. ಇದು ರಾಷ್ಟ್ರವನ್ನು ಪೋಷಿಸುತ್ತಿರುವ 'ಭಾರತ ಮಾತೆ'ಯ ವ್ಯವಹಾರವಾಗಿದೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/prime-minister-narendra-modi-wants-to-clear-path-for-his-friends-rahul-gandhi-on-farm-laws-804609.html" itemprop="url">ಸ್ನೇಹಿತರಿಗೆ ಅನುಕೂಲ ಕಲ್ಪಿಸುತ್ತಿರುವ ಪ್ರಧಾನಿ: ರಾಹುಲ್ ಗಾಂಧಿ ಟೀಕೆ </a></p>.<p>ರೈತರಿಗೆ ಸಂಬಂಧಪಟ್ಟಿದೆ ಎನ್ನುವ ಕಾರಣಕ್ಕಾಗಿ ಮಾತ್ರ ಕೃಷಿ ಕಾನೂನುಗಳ ವಿರುದ್ಧದ ಆಂದೋಲನವು ದೇಶದಾದ್ಯಂತ ಹರಡುತ್ತಿದೆ ಎಂದಲ್ಲ. ಇದು ಕಾರ್ಮಿಕರು, ವ್ಯಾಪಾರಿಗಳು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಮತ್ತು ಮಧ್ಯಮ ವರ್ಗದವರ ಸಮಸ್ಯೆಯೂ ಆಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>