<p class="title"><strong>ಜೈಪುರ</strong>: ‘ವಂಚಿತ್ ಕೋ ವರಿಯತಾ‘ (ಹಿಂದುಳಿದವರಿಗೆ ಆದ್ಯತೆ) ಎನ್ನುವ ಮಂತ್ರದೊಂದಿಗೆ ನಿರ್ಲಕ್ಷ್ಯಕ್ಕೊಳಗಾದ ಸಮಾಜದ ಪ್ರತಿಯೊಂದು ವರ್ಗವನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.</p>.<p class="title">ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗುರ್ಜರ್ ಸಮುದಾಯದ ಜನಪದ ದೇವರು ಭಗವಾನ್ ಶ್ರೀ ದೇವನಾರಾಯಣ ಅವರ 1,111 ನೇ ಅವತಾರ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p class="title">ಸ್ವಾತಂತ್ರ್ಯ ಹೋರಾಟ ಮತ್ತು ಇತರ ಚಳವಳಿಗಳಲ್ಲಿ ಗುರ್ಜರ್ ಸಮುದಾಯದ ಕೊಡುಗೆ ಅಪಾರ. ಇಂತಹ ವ್ಯಕ್ತಿಗಳಿಗೆ ದೇಶದಲ್ಲಿ ಸಿಗಬೇಕಾದ ಗೌರವ ಸಿಗದೇ ಇರುವುದು ದೌರ್ಭಾಗ್ಯವಾಗಿದೆ. ಆದರೆ ನವ ಭಾರತ ಹಿಂದೆ ಆದ ತಪ್ಪನ್ನು ಸರಿಪಡಿಸಲಿದೆ ಎಂದು ಹೇಳಿದರು.</p>.<p>ಭಾರತವನ್ನು ಸೈದ್ದಾಂತಿಕವಾಗಿ ಹಿಮ್ಮೆಟ್ಟಿಸಲು ಅನೇಕ ಪ್ರಯತ್ನಗಳು ನಡೆದರೂ ಅದು ಯಶಸ್ಸು ಕಾಣಲಿಲ್ಲ. ಭಾರತ ಕೇವಲ ಭೂಭಾಗವಲ್ಲ, ನಾಗರಿಕತೆ, ಸಂಸ್ಕೃತಿ, ಸಾಮರಸ್ಯ ಮತ್ತು ಸಾಮರ್ಥ್ಯದ ಅಭಿವ್ಯಕ್ತಿತ್ವವನ್ನು ಒಳಗೊಂಡಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.</p>.<p>ಭಾರತದ ಶಕ್ತಿ ಮತ್ತು ಪ್ರಾಬಲ್ಯವನ್ನು ಕಂಡು ಜಗತ್ತು ಈಗ ಹೊಸ ಆಶಾಭಾವನೆಯಿಂದ ನೋಡುತ್ತಿದೆ. ಭಾರತವು ಜಾಗತಿಕ ವೇದಿಕೆಗಳಲ್ಲಿ ತನ್ನನ್ನು ತಾನು ಪ್ರತಿಪಾದಿಸಿಕೊಂಡಿದೆ, ಜೊತೆಗೆ ಇತರ ದೇಶಗಳ ಮೇಲಿನ ತನ್ನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೈಪುರ</strong>: ‘ವಂಚಿತ್ ಕೋ ವರಿಯತಾ‘ (ಹಿಂದುಳಿದವರಿಗೆ ಆದ್ಯತೆ) ಎನ್ನುವ ಮಂತ್ರದೊಂದಿಗೆ ನಿರ್ಲಕ್ಷ್ಯಕ್ಕೊಳಗಾದ ಸಮಾಜದ ಪ್ರತಿಯೊಂದು ವರ್ಗವನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.</p>.<p class="title">ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗುರ್ಜರ್ ಸಮುದಾಯದ ಜನಪದ ದೇವರು ಭಗವಾನ್ ಶ್ರೀ ದೇವನಾರಾಯಣ ಅವರ 1,111 ನೇ ಅವತಾರ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p class="title">ಸ್ವಾತಂತ್ರ್ಯ ಹೋರಾಟ ಮತ್ತು ಇತರ ಚಳವಳಿಗಳಲ್ಲಿ ಗುರ್ಜರ್ ಸಮುದಾಯದ ಕೊಡುಗೆ ಅಪಾರ. ಇಂತಹ ವ್ಯಕ್ತಿಗಳಿಗೆ ದೇಶದಲ್ಲಿ ಸಿಗಬೇಕಾದ ಗೌರವ ಸಿಗದೇ ಇರುವುದು ದೌರ್ಭಾಗ್ಯವಾಗಿದೆ. ಆದರೆ ನವ ಭಾರತ ಹಿಂದೆ ಆದ ತಪ್ಪನ್ನು ಸರಿಪಡಿಸಲಿದೆ ಎಂದು ಹೇಳಿದರು.</p>.<p>ಭಾರತವನ್ನು ಸೈದ್ದಾಂತಿಕವಾಗಿ ಹಿಮ್ಮೆಟ್ಟಿಸಲು ಅನೇಕ ಪ್ರಯತ್ನಗಳು ನಡೆದರೂ ಅದು ಯಶಸ್ಸು ಕಾಣಲಿಲ್ಲ. ಭಾರತ ಕೇವಲ ಭೂಭಾಗವಲ್ಲ, ನಾಗರಿಕತೆ, ಸಂಸ್ಕೃತಿ, ಸಾಮರಸ್ಯ ಮತ್ತು ಸಾಮರ್ಥ್ಯದ ಅಭಿವ್ಯಕ್ತಿತ್ವವನ್ನು ಒಳಗೊಂಡಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.</p>.<p>ಭಾರತದ ಶಕ್ತಿ ಮತ್ತು ಪ್ರಾಬಲ್ಯವನ್ನು ಕಂಡು ಜಗತ್ತು ಈಗ ಹೊಸ ಆಶಾಭಾವನೆಯಿಂದ ನೋಡುತ್ತಿದೆ. ಭಾರತವು ಜಾಗತಿಕ ವೇದಿಕೆಗಳಲ್ಲಿ ತನ್ನನ್ನು ತಾನು ಪ್ರತಿಪಾದಿಸಿಕೊಂಡಿದೆ, ಜೊತೆಗೆ ಇತರ ದೇಶಗಳ ಮೇಲಿನ ತನ್ನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>