<p><strong>ನವದೆಹಲಿ</strong>: ಆರ್ಎಸ್ಎಸ್ನ ಶತಮಾನೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಅಂಚೆ ಚೀಟಿ ಮತ್ತು ₹100 ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿರುವುದನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ತೀವ್ರವಾಗಿ ಖಂಡಿಸಿದೆ.</p><p>ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ), ‘ಆರ್ಎಸ್ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಚೆ ಚೀಟಿ ಮತ್ತು ₹100 ನಾಣ್ಯವನ್ನು ಬಿಡುಗಡೆ ಮಾಡಿರುವುದು ಭಾರತದ ಸಂವಿಧಾನಕ್ಕೆ ಮಾಡಿದ ಗಂಭೀರ ಗಾಯ ಮತ್ತು ಅವಮಾನವಾಗಿದೆ’ ಎಂದು ಹೇಳಿದೆ.</p><p>‘ಹಿಂದೂ ರಾಷ್ಟ್ರ ಪರಿಕಲ್ಪನೆಯ ಸಂಕೇತವಾಗಿ ಆರ್ಎಸ್ಎಸ್ ಪ್ರಚಾರ ಮಾಡಿದ ಭಾರತ ಮಾತೆಯ ಚಿತ್ರವನ್ನು ಅಧಿಕೃತ ನಾಣ್ಯದಲ್ಲಿ ಮುದ್ರಿಸಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನ ಹೊರಹಾಕಿದೆ.</p><p>‘1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಆರ್ಎಸ್ ಸ್ವಯಂ ಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಇತಿಹಾಸದ ವ್ಯಂಗ್ಯವಾಗಿದೆ. ನೆಹರೂ ಅವರು ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಲು ಆರ್ಎಸ್ಎಸ್ ಅನ್ನು ಆಹ್ವಾನಿಸಿದ್ದಾರೆ ಎಂಬುವುದು ಸುಳ್ಳನ್ನು ಆಧರಿಸಿದೆ. ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿರುವುದು ದಾಖಲಾಗಿದೆ. ಆರ್ಆರ್ಎಸ್ ಸ್ವಯಂಸೇವಕರು ಭಾಗವಹಿಸಿರುವುದು ಕೇವಲ ಆಕಸ್ಮಿಕ’ ಎಂದು ಹೇಳಿದೆ.</p><p>‘ಸ್ವಾತಂತ್ರ್ಯ ಹೋರಾಟದಿಂದ ಆರ್ಆರ್ಎಸ್ ಸಂಪೂರ್ಣವಾಗಿ ದೂರವಿತ್ತು. ಬ್ರಿಟಿಷರ ಒಡೆದು ಆಳುವ ನೀತಿಯನ್ನೂ ಬೆಂಬಲಿಸಿತ್ತು. ವಸಾಹತುಶಾಹಿ ಆಳ್ವಿಕೆ ವಿರುದ್ಧ ಭಾರತ ಜನರ ಐಕ್ಯತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿತ್ತು’ ಎಂದು ಹೇಳಿದೆ.</p><p>‘ಇದು ಆರ್ಎಸ್ಎಸ್ನ ನಿಜವಾದ ಇತಿಹಾಸವಾಗಿದೆ. ಪ್ರಧಾನಿಯವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆರ್ಎಸ್ಎಸ್ ಇತಿಹಾಸವನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ. ಆ ಮೂಲಕ ತಾವು ಹೊಂದಿರುವ ಸಾಂವಿಧಾನಿಕ ಸ್ಥಾನದ ಘನತೆಯ ಕುಂದಿಸಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆರ್ಎಸ್ಎಸ್ನ ಶತಮಾನೋತ್ಸವದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಅಂಚೆ ಚೀಟಿ ಮತ್ತು ₹100 ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿರುವುದನ್ನು ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ತೀವ್ರವಾಗಿ ಖಂಡಿಸಿದೆ.</p><p>ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ), ‘ಆರ್ಎಸ್ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಚೆ ಚೀಟಿ ಮತ್ತು ₹100 ನಾಣ್ಯವನ್ನು ಬಿಡುಗಡೆ ಮಾಡಿರುವುದು ಭಾರತದ ಸಂವಿಧಾನಕ್ಕೆ ಮಾಡಿದ ಗಂಭೀರ ಗಾಯ ಮತ್ತು ಅವಮಾನವಾಗಿದೆ’ ಎಂದು ಹೇಳಿದೆ.</p><p>‘ಹಿಂದೂ ರಾಷ್ಟ್ರ ಪರಿಕಲ್ಪನೆಯ ಸಂಕೇತವಾಗಿ ಆರ್ಎಸ್ಎಸ್ ಪ್ರಚಾರ ಮಾಡಿದ ಭಾರತ ಮಾತೆಯ ಚಿತ್ರವನ್ನು ಅಧಿಕೃತ ನಾಣ್ಯದಲ್ಲಿ ಮುದ್ರಿಸಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನ ಹೊರಹಾಕಿದೆ.</p><p>‘1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಆರ್ಎಸ್ ಸ್ವಯಂ ಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಇತಿಹಾಸದ ವ್ಯಂಗ್ಯವಾಗಿದೆ. ನೆಹರೂ ಅವರು ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಲು ಆರ್ಎಸ್ಎಸ್ ಅನ್ನು ಆಹ್ವಾನಿಸಿದ್ದಾರೆ ಎಂಬುವುದು ಸುಳ್ಳನ್ನು ಆಧರಿಸಿದೆ. ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿರುವುದು ದಾಖಲಾಗಿದೆ. ಆರ್ಆರ್ಎಸ್ ಸ್ವಯಂಸೇವಕರು ಭಾಗವಹಿಸಿರುವುದು ಕೇವಲ ಆಕಸ್ಮಿಕ’ ಎಂದು ಹೇಳಿದೆ.</p><p>‘ಸ್ವಾತಂತ್ರ್ಯ ಹೋರಾಟದಿಂದ ಆರ್ಆರ್ಎಸ್ ಸಂಪೂರ್ಣವಾಗಿ ದೂರವಿತ್ತು. ಬ್ರಿಟಿಷರ ಒಡೆದು ಆಳುವ ನೀತಿಯನ್ನೂ ಬೆಂಬಲಿಸಿತ್ತು. ವಸಾಹತುಶಾಹಿ ಆಳ್ವಿಕೆ ವಿರುದ್ಧ ಭಾರತ ಜನರ ಐಕ್ಯತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿತ್ತು’ ಎಂದು ಹೇಳಿದೆ.</p><p>‘ಇದು ಆರ್ಎಸ್ಎಸ್ನ ನಿಜವಾದ ಇತಿಹಾಸವಾಗಿದೆ. ಪ್ರಧಾನಿಯವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆರ್ಎಸ್ಎಸ್ ಇತಿಹಾಸವನ್ನು ಮರೆಮಾಚಲು ಪ್ರಯತ್ನಿಸಿದ್ದಾರೆ. ಆ ಮೂಲಕ ತಾವು ಹೊಂದಿರುವ ಸಾಂವಿಧಾನಿಕ ಸ್ಥಾನದ ಘನತೆಯ ಕುಂದಿಸಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>