<p><strong>ನೋಯಿಡಾ</strong>: ಮಹಿಳೆಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ, ಅವರ ಹೊಟ್ಟೆಯೊಳಗೆ ಬಟ್ಟೆಯನ್ನು ಹಾಗೆಯೇ ಬಿಟ್ಟ ಗ್ರೇಟರ್ ನೋಯ್ಡಾದ ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ಹಿರಿಯ ಆರೋಗ್ಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.</p>.<p>ಗ್ರೇಟರ್ ನೋಯ್ಡಾದ ಸೆಕ್ಟರ್ ಡೆಲ್ಟಾ ಒನ್ ನಿವಾಸಿ ಅನ್ಸುಲ್ ವರ್ಮಾ ಸಂತ್ರಸ್ತ ಮಹಿಳೆ. ಜೀವನೋಪಾಯಕ್ಕಾಗಿ ಮನೆಗೆಲಸ ಮತ್ತು ಹೊಲಿಗೆ ಕೆಲಸ ಮಾಡುವ ಅವರು, 2023ರ ನವೆಂಬರ್ 14ರಂದು ತುಘಲಕ್ಪುರದ ಬಕ್ಸನ್ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.</p>.<p>ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿರಂತರ ಹೊಟ್ಟೆ ನೋವನ್ನು ಅನುಭವಿಸಿದ್ದಾರೆ. 2025ರ ಏಪ್ರಿಲ್ನಲ್ಲಿ ಗ್ರೇಟರ್ ನೋಯ್ಡಾದ ಕೈಲಾಶ್ ಆಸ್ಪತ್ರೆಯು ಅವರ ಹೊಟ್ಟೆಯಲ್ಲಿ ಗಡ್ಡೆಯನ್ನು ಪತ್ತೆಹಚ್ಚಿ, ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು. ಈ ವೇಳೆ ವೈದ್ಯರು ಅವರ ಹೊಟ್ಟೆಯಿಂದ ಬಟ್ಟೆಯನ್ನು ಹೊರೆತೆಗೆದಿದ್ದಾರೆ.</p>.<p>‘ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಅರ್ಧ ಮೀಟರ್ ಉದ್ದದ ಶಸ್ತ್ರಚಿಕಿತ್ಸಾ ಬಟ್ಟೆಯನ್ನು ಹೊಟ್ಟೆಯೊಳಗೆ ಬಿಟ್ಟಿದ್ದರು. ಇದರಿಂದಾಗಿ ನಾನು ಸುಮಾರು ಒಂದೂವರೆ ವರ್ಷಗಳ ಕಾಲ ತೀವ್ರ ನೋವನ್ನು ಅನುಭವಿಸಿದ್ದೇನೆ’ ಎಂದು ಅವರು ಆರೋಪಿಸಿದ್ದಾರೆ.</p>.<p>ನ್ಯಾಯಾಲಯದ ನಿರ್ದೇಶನದ ಮೇರೆಗೆ, ಪೊಲೀಸರು ಡಿಸೆಂಬರ್ 24ರಂದು ವೈದ್ಯರು, ಹಿರಿಯ ಆರೋಗ್ಯ ಅಧಿಕಾರಿಗಳು ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೋಯಿಡಾ</strong>: ಮಹಿಳೆಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ, ಅವರ ಹೊಟ್ಟೆಯೊಳಗೆ ಬಟ್ಟೆಯನ್ನು ಹಾಗೆಯೇ ಬಿಟ್ಟ ಗ್ರೇಟರ್ ನೋಯ್ಡಾದ ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ಹಿರಿಯ ಆರೋಗ್ಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.</p>.<p>ಗ್ರೇಟರ್ ನೋಯ್ಡಾದ ಸೆಕ್ಟರ್ ಡೆಲ್ಟಾ ಒನ್ ನಿವಾಸಿ ಅನ್ಸುಲ್ ವರ್ಮಾ ಸಂತ್ರಸ್ತ ಮಹಿಳೆ. ಜೀವನೋಪಾಯಕ್ಕಾಗಿ ಮನೆಗೆಲಸ ಮತ್ತು ಹೊಲಿಗೆ ಕೆಲಸ ಮಾಡುವ ಅವರು, 2023ರ ನವೆಂಬರ್ 14ರಂದು ತುಘಲಕ್ಪುರದ ಬಕ್ಸನ್ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.</p>.<p>ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿರಂತರ ಹೊಟ್ಟೆ ನೋವನ್ನು ಅನುಭವಿಸಿದ್ದಾರೆ. 2025ರ ಏಪ್ರಿಲ್ನಲ್ಲಿ ಗ್ರೇಟರ್ ನೋಯ್ಡಾದ ಕೈಲಾಶ್ ಆಸ್ಪತ್ರೆಯು ಅವರ ಹೊಟ್ಟೆಯಲ್ಲಿ ಗಡ್ಡೆಯನ್ನು ಪತ್ತೆಹಚ್ಚಿ, ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿತ್ತು. ಈ ವೇಳೆ ವೈದ್ಯರು ಅವರ ಹೊಟ್ಟೆಯಿಂದ ಬಟ್ಟೆಯನ್ನು ಹೊರೆತೆಗೆದಿದ್ದಾರೆ.</p>.<p>‘ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಅರ್ಧ ಮೀಟರ್ ಉದ್ದದ ಶಸ್ತ್ರಚಿಕಿತ್ಸಾ ಬಟ್ಟೆಯನ್ನು ಹೊಟ್ಟೆಯೊಳಗೆ ಬಿಟ್ಟಿದ್ದರು. ಇದರಿಂದಾಗಿ ನಾನು ಸುಮಾರು ಒಂದೂವರೆ ವರ್ಷಗಳ ಕಾಲ ತೀವ್ರ ನೋವನ್ನು ಅನುಭವಿಸಿದ್ದೇನೆ’ ಎಂದು ಅವರು ಆರೋಪಿಸಿದ್ದಾರೆ.</p>.<p>ನ್ಯಾಯಾಲಯದ ನಿರ್ದೇಶನದ ಮೇರೆಗೆ, ಪೊಲೀಸರು ಡಿಸೆಂಬರ್ 24ರಂದು ವೈದ್ಯರು, ಹಿರಿಯ ಆರೋಗ್ಯ ಅಧಿಕಾರಿಗಳು ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>