<p><strong>ನವದೆಹಲಿ</strong>: ಯುಪಿಎ ಸರ್ಕಾರದ ಅವಧಿಯಲ್ಲಿ ಅಧಿಕಾರದ ದುರಾಸೆಯಿಂದಾಗಿ ಬ್ಯಾಂಕಿಂಗ್ ಕ್ಷೇತ್ರ ವಿನಾಶದತ್ತ ಸಾಗಿತು. ಆದರೆ, ತಮ್ಮ ಸರ್ಕಾರ ಅದನ್ನು ಉತ್ತಮ ಆರ್ಥಿಕ ಸ್ಥಿತಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.</p>.<p>ರೋಜ್ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು. </p>.<p>ಬಿಜೆಪಿ ನೇತೃತ್ವದ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮ ಭಾರತವು ಈಗ ಪ್ರಬಲ ಬ್ಯಾಂಕಿಂಗ್ ಕ್ಷೇತ್ರಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.</p>.<p>‘ಫೋನ್ ಬ್ಯಾಂಕಿಂಗ್’ ಹಿಂದಿನ ಸರ್ಕಾರದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿದೆ. ಇದು ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಹಾಳು ಮಾಡಿತು. ಕೆಲವು ಪ್ರಬಲ ನಾಯಕರು ಮತ್ತು ಕುಟುಂಬಗಳ ನೆಚ್ಚಿನವರಿಗೆ ಸಾವಿರಾರು ಕೋಟಿ ರೂಪಾಯಿಗಳ ಸಾಲವನ್ನು ನೀಡಲಾಯಿತು ಮತ್ತು ಆ ಸಾಲಗಳನ್ನು ಎಂದಿಗೂ ಹಿಂತಿರುಗಿಸುವ ಉದ್ದೇಶವೇ ಇರಲಿಲ್ಲ ಎಂದು ಹೇಳಿದರು. </p>.<p>ತಮ್ಮ ಸರ್ಕಾರವು ಬ್ಯಾಂಕುಗಳ ನಿರ್ವಹಣೆ ಬಲಪಡಿಸುವುದು, ಸಣ್ಣ ಬ್ಯಾಂಕುಗಳನ್ನು ವಿಲೀನಗೊಳಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದರು.</p>.<p>ಸಾರ್ವಜನಿಕ ವಲಯದ ಬ್ಯಾಂಕುಗಳು ಈ ಹಿಂದೆ ಸಾವಿರಾರು ಕೋಟಿ ರೂಪಾಯಿಗಳ ನಷ್ಟ ಮತ್ತು ಅನುತ್ಪಾದಕ ಆಸ್ತಿಗಳಿಗೆ (ಎಪಿಎಎಸ್) ಹೆಸರುವಾಸಿಯಾಗಿದ್ದವು. ಆದರೆ, ಈಗ ಅವು ದಾಖಲೆಯ ಲಾಭಕ್ಕೆ ಹೆಸರುವಾಸಿಯಾಗಿವೆ ಎಂದು ಪ್ರಧಾನಿ ಹೇಳಿದರು.</p>.<p><strong>2004-14ರ ಅವಧಿಯಲ್ಲಿ ಯುಪಿಎ ಅಧಿಕಾರದಲ್ಲಿತ್ತು.</strong></p>.<p><strong>30 ಲಕ್ಷ ಹುದ್ದೆ ಖಾಲಿ– ಕಾಂಗ್ರೆಸ್:</strong> ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ನೀಡುವ ಬಿಜೆಪಿಯ ಭರವಸೆಯನ್ನು ಈಡೇರಿಸಲಾಗುತ್ತಿದೆಯೇನೋ ಎಂಬಂತೆ, ನೇಮಕಾತಿ ಪತ್ರಗಳನ್ನು ಕಂತುಗಳಲ್ಲಿ ವಿತರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶನಿವಾರ ರೋಜ್ಗಾರ್ ಮೇಳ ನಡೆಸುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.</p>.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದು, ಈಗ ಮಂಜೂರಾದ ಹುದ್ದೆಗಳನ್ನು ಬಹಳ ಹಿಂದೆಯೇ ಭರ್ತಿ ಮಾಡಬೇಕಿತ್ತು ಎಂದಿದ್ದಾರೆ.</p>.<p>ಕೇವಲ ಮೂರು ವರ್ಷಗಳಲ್ಲಿ ದೇಶದಲ್ಲಿ ಸುಮಾರು 20,000 ಎಂಎಸ್ಎಂಇ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಯುಪಿಎ ಸರ್ಕಾರದ ಅವಧಿಯಲ್ಲಿ ಅಧಿಕಾರದ ದುರಾಸೆಯಿಂದಾಗಿ ಬ್ಯಾಂಕಿಂಗ್ ಕ್ಷೇತ್ರ ವಿನಾಶದತ್ತ ಸಾಗಿತು. ಆದರೆ, ತಮ್ಮ ಸರ್ಕಾರ ಅದನ್ನು ಉತ್ತಮ ಆರ್ಥಿಕ ಸ್ಥಿತಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.</p>.<p>ರೋಜ್ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿ, ವಿಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು. </p>.<p>ಬಿಜೆಪಿ ನೇತೃತ್ವದ ಸರ್ಕಾರ ಕೈಗೊಂಡ ಕ್ರಮಗಳ ಪರಿಣಾಮ ಭಾರತವು ಈಗ ಪ್ರಬಲ ಬ್ಯಾಂಕಿಂಗ್ ಕ್ಷೇತ್ರಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.</p>.<p>‘ಫೋನ್ ಬ್ಯಾಂಕಿಂಗ್’ ಹಿಂದಿನ ಸರ್ಕಾರದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿದೆ. ಇದು ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಹಾಳು ಮಾಡಿತು. ಕೆಲವು ಪ್ರಬಲ ನಾಯಕರು ಮತ್ತು ಕುಟುಂಬಗಳ ನೆಚ್ಚಿನವರಿಗೆ ಸಾವಿರಾರು ಕೋಟಿ ರೂಪಾಯಿಗಳ ಸಾಲವನ್ನು ನೀಡಲಾಯಿತು ಮತ್ತು ಆ ಸಾಲಗಳನ್ನು ಎಂದಿಗೂ ಹಿಂತಿರುಗಿಸುವ ಉದ್ದೇಶವೇ ಇರಲಿಲ್ಲ ಎಂದು ಹೇಳಿದರು. </p>.<p>ತಮ್ಮ ಸರ್ಕಾರವು ಬ್ಯಾಂಕುಗಳ ನಿರ್ವಹಣೆ ಬಲಪಡಿಸುವುದು, ಸಣ್ಣ ಬ್ಯಾಂಕುಗಳನ್ನು ವಿಲೀನಗೊಳಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಪ್ರತಿಪಾದಿಸಿದರು.</p>.<p>ಸಾರ್ವಜನಿಕ ವಲಯದ ಬ್ಯಾಂಕುಗಳು ಈ ಹಿಂದೆ ಸಾವಿರಾರು ಕೋಟಿ ರೂಪಾಯಿಗಳ ನಷ್ಟ ಮತ್ತು ಅನುತ್ಪಾದಕ ಆಸ್ತಿಗಳಿಗೆ (ಎಪಿಎಎಸ್) ಹೆಸರುವಾಸಿಯಾಗಿದ್ದವು. ಆದರೆ, ಈಗ ಅವು ದಾಖಲೆಯ ಲಾಭಕ್ಕೆ ಹೆಸರುವಾಸಿಯಾಗಿವೆ ಎಂದು ಪ್ರಧಾನಿ ಹೇಳಿದರು.</p>.<p><strong>2004-14ರ ಅವಧಿಯಲ್ಲಿ ಯುಪಿಎ ಅಧಿಕಾರದಲ್ಲಿತ್ತು.</strong></p>.<p><strong>30 ಲಕ್ಷ ಹುದ್ದೆ ಖಾಲಿ– ಕಾಂಗ್ರೆಸ್:</strong> ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ನೀಡುವ ಬಿಜೆಪಿಯ ಭರವಸೆಯನ್ನು ಈಡೇರಿಸಲಾಗುತ್ತಿದೆಯೇನೋ ಎಂಬಂತೆ, ನೇಮಕಾತಿ ಪತ್ರಗಳನ್ನು ಕಂತುಗಳಲ್ಲಿ ವಿತರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶನಿವಾರ ರೋಜ್ಗಾರ್ ಮೇಳ ನಡೆಸುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.</p>.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದು, ಈಗ ಮಂಜೂರಾದ ಹುದ್ದೆಗಳನ್ನು ಬಹಳ ಹಿಂದೆಯೇ ಭರ್ತಿ ಮಾಡಬೇಕಿತ್ತು ಎಂದಿದ್ದಾರೆ.</p>.<p>ಕೇವಲ ಮೂರು ವರ್ಷಗಳಲ್ಲಿ ದೇಶದಲ್ಲಿ ಸುಮಾರು 20,000 ಎಂಎಸ್ಎಂಇ ಕೈಗಾರಿಕೆಗಳು ಮುಚ್ಚಲ್ಪಟ್ಟಿವೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>