<p><strong>ಪಟ್ಟಣಂತಿಟ್ಟ:</strong> ಅಯ್ಯಪ್ಪ ದೇವಸ್ಥಾನವನ್ನು ಪ್ರವೇಶಿಸುವಾಗ ಪುರುಷರು ಅಂಗಿ ತೆಗೆಯುವ ಪದ್ಧತಿಯನ್ನು ವಿರೋಧಿಸುವ ಗುಂಪೊಂದು, ಭಾನುವಾರ ಅಂಗಿ ಕಳಚದೆಯೇ ದೇವಸ್ಥಾನ ಪ್ರವೇಶಿಸಿದೆ.</p>.<p>ಎಸ್ಎನ್ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು ತಮ್ಮ ಅಂಗಿಯನ್ನು ಕಳಚದೆಯೇ ಪ್ರಾರ್ಥಿಸಿದ ದೃಶ್ಯ ಇರುವ ವಿಡಿಯೊಗಳು ಬಹಿರಂಗ ಆಗಿವೆ.</p>.<p>ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯಾಗಲಿ, ಪೊಲೀಸರಾಗಲಿ ಆಕ್ಷೇಪ ವ್ಯಕ್ತಪಡಿಸಲಿಲ್ಲ. ನಂತರದಲ್ಲಿ, ಅಂಗಿ ತೆಗೆಯಬೇಕು ಎಂಬ ಪದ್ಧತಿಯನ್ನು ಕೈಬಿಡಬೇಕು ಎಂದು ಈ ಪ್ರತಿಭಟನಕಾರರು ಆಗ್ರಹಿಸಿದರು.</p>.<p class="title">‘ಪ್ರತಿಭಟನೆ ಶಾಂತಿಯುತವಾಗಿತ್ತು. ಅಂಗಿ ತೆಗೆಯದೆ ದೇವಸ್ಥಾನವನ್ನು ಯಾರಾದರೂ ಪ್ರವೇಶಿಸಿದರೆ ತನ್ನ ಆಕ್ಷೇಪ ಇಲ್ಲ ಎಂದು ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ. ಆದರೆ ಭಕ್ತರು ಅಂಗಿ ತೆಗೆಯುವ ಪದ್ಧತಿಯನ್ನು ಪಾಲಿಸುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p class="title">ಸಮಾಜ ಸುಧಾರಕ ನಾರಾಯಣ ಗುರುಗಳು ಸ್ಥಾಪಿಸಿದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು, ಅಂಗಿ ಕಳಚುವ ಈ ಪದ್ಧತಿಯು ಸಾಮಾಜಿಕ ಕೆಡುಕು ಎಂದು ಹೇಳಿದ್ದರು. ಈ ಪದ್ಧತಿಯನ್ನು ಇಲ್ಲವಾಗಿಸಬೇಕು ಎಂದು ಅವರು ಕಳೆದ ವರ್ಷ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ಟಣಂತಿಟ್ಟ:</strong> ಅಯ್ಯಪ್ಪ ದೇವಸ್ಥಾನವನ್ನು ಪ್ರವೇಶಿಸುವಾಗ ಪುರುಷರು ಅಂಗಿ ತೆಗೆಯುವ ಪದ್ಧತಿಯನ್ನು ವಿರೋಧಿಸುವ ಗುಂಪೊಂದು, ಭಾನುವಾರ ಅಂಗಿ ಕಳಚದೆಯೇ ದೇವಸ್ಥಾನ ಪ್ರವೇಶಿಸಿದೆ.</p>.<p>ಎಸ್ಎನ್ಡಿಪಿ ಸಂಯುಕ್ತ ಸಮರ ಸಮಿತಿಯ ಸದಸ್ಯರು ತಮ್ಮ ಅಂಗಿಯನ್ನು ಕಳಚದೆಯೇ ಪ್ರಾರ್ಥಿಸಿದ ದೃಶ್ಯ ಇರುವ ವಿಡಿಯೊಗಳು ಬಹಿರಂಗ ಆಗಿವೆ.</p>.<p>ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯಾಗಲಿ, ಪೊಲೀಸರಾಗಲಿ ಆಕ್ಷೇಪ ವ್ಯಕ್ತಪಡಿಸಲಿಲ್ಲ. ನಂತರದಲ್ಲಿ, ಅಂಗಿ ತೆಗೆಯಬೇಕು ಎಂಬ ಪದ್ಧತಿಯನ್ನು ಕೈಬಿಡಬೇಕು ಎಂದು ಈ ಪ್ರತಿಭಟನಕಾರರು ಆಗ್ರಹಿಸಿದರು.</p>.<p class="title">‘ಪ್ರತಿಭಟನೆ ಶಾಂತಿಯುತವಾಗಿತ್ತು. ಅಂಗಿ ತೆಗೆಯದೆ ದೇವಸ್ಥಾನವನ್ನು ಯಾರಾದರೂ ಪ್ರವೇಶಿಸಿದರೆ ತನ್ನ ಆಕ್ಷೇಪ ಇಲ್ಲ ಎಂದು ಆಡಳಿತ ಮಂಡಳಿ ಈಗಾಗಲೇ ಸ್ಪಷ್ಟಪಡಿಸಿದೆ. ಆದರೆ ಭಕ್ತರು ಅಂಗಿ ತೆಗೆಯುವ ಪದ್ಧತಿಯನ್ನು ಪಾಲಿಸುತ್ತಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p class="title">ಸಮಾಜ ಸುಧಾರಕ ನಾರಾಯಣ ಗುರುಗಳು ಸ್ಥಾಪಿಸಿದ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರು, ಅಂಗಿ ಕಳಚುವ ಈ ಪದ್ಧತಿಯು ಸಾಮಾಜಿಕ ಕೆಡುಕು ಎಂದು ಹೇಳಿದ್ದರು. ಈ ಪದ್ಧತಿಯನ್ನು ಇಲ್ಲವಾಗಿಸಬೇಕು ಎಂದು ಅವರು ಕಳೆದ ವರ್ಷ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>