<p><strong>ನವದೆಹಲಿ:</strong> ಪೊಲೀಸರ ಮನವರಿಕೆಗೂ ಜಗ್ಗದ ದೆಹಲಿಯ ಗಡಿಭಾಗಗಳಾದ ಸಿಂಘು ಮತ್ತು ಟಿಕ್ರಿಯಲ್ಲಿ ಬೀಡು ಬಿಟ್ಟಿದ್ದ ರೈತ ಸಂಘಟನೆಯ ಸದಸ್ಯರು ಮಂಗಳವಾರ ಮುಂಜಾನೆ ಬ್ಯಾರಿಕೇಡ್ಗಳನ್ನು ಮುರಿದು ಹೊರ ವರ್ತುಲ ರಸ್ತೆಯ ಮೂಲಕ ದೆಹಲಿ ಪ್ರವೇಶಿಸಲು ಹೆಜ್ಜೆ ಹಾಕಿದರು.</p>.<p>ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಗಡಿಭಾಗಗಳಲ್ಲಿ ಬೀಡುಬಿಟ್ಟಿದ್ದ ಸಾವಿರಾರು ಪ್ರತಿಭಟನಾ ನಿರತ ರೈತರು ಮಂಗಳವಾರ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ನಿರ್ಧರಿಸಿದ್ದರು. ದೆಹಲಿಯ ರಾಜ್ಪತ್ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿದ ನಂತರ ರ್ಯಾಲಿಗೆ ಪೊಲೀಸರು ಅನುಮತಿ ನೀಡಿದ್ದರು.</p>.<p>‘ಈ ವಿಷಯವನ್ನು ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ, ಅದನ್ನು ಲೆಕ್ಕಿಸದ ರೈತರ ಗುಂಪು ಬ್ಯಾರಿಕೇಡ್ಗಳನ್ನು ಮುರಿದು ರಿಂಗ್ರೋಡ್ ಮೂಲಕ ದೆಹಲಿಯತ್ತ ಮುನ್ನುಗ್ಗಿತು‘ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದ ಕೆಲವು ಸದಸ್ಯರು ಬ್ಯಾರಿಕೇಡ್ಗಳನ್ನು ಮುರಿದಿದ್ದಾರೆ‘ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಕೆಎಸ್ಎಂ) ಸದಸ್ಯರೊಬ್ಬರು ತಿಳಿಸಿದ್ದಾರೆ. ಕೆಎಸ್ಎಂ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ 41 ರೈತ ಸಂಘಗಳ ಒಕ್ಕೂಟವಾಗಿದೆ.</p>.<p>‘ಪೊಲೀಸರ ಅನುಮತಿಯಂತೆ ಈಗಾಗಲೇ ನಿಗದಿತಪಡಿಸಿರುವ ಸಮಯದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಟ್ರ್ಯಾಕ್ಟರ್ ರ್ಯಾಲಿ ಆರಂಭವಾಗಲಿದೆ. ಕೆಎಸ್ಎಂ ಸೋಮವಾರ ಪ್ರಕಟಿಸಿರುವಂತೆ ಟ್ರ್ಯಾಕ್ಟರ್ ರ್ಯಾಲಿ ದೆಹಲಿ ಹೊರ ವರ್ತುಲ ರಸ್ತೆಯಲ್ಲಿ ಸಾಗಲಿದೆ‘ ಎಂದು ಅವರು ತಿಳಿಸಿದರು.</p>.<p>ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಲು ಪ್ರತಿಭಟನಡೆ ನಡೆಸುತ್ತಿರುವ ವಿವಿಧ ರೈತ ಸಂಘಟನೆಗಳು ಬಜೆಟ್ ಅಧಿವೇಶನ ನಡೆಯುವ ಫೆಬ್ರುವರಿ 1 ರಂದು ಸಂಸತ್ತಿನತ್ತ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿವೆ.</p>.<p>'ಕಿಸಾನ್ ಗಣತಂತ್ರ ಮೆರವಣಿಗೆ‘ಯ ಹಿನ್ನೆಲೆಯಲ್ಲಿ ಮಂಗಳವಾರ ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಭಾಗಗಳಲ್ಲಿ ಭಾರಿ ಭದ್ರತೆ ಒದಗಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/mobile-internet-services-temporarily-suspended-across-kashmir-valley-as-security-measure-799717.html" itemprop="url">ಮುನ್ನೆಚ್ಚರಿಕಾ ಕ್ರಮ: ಜಮ್ಮು–ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೊಲೀಸರ ಮನವರಿಕೆಗೂ ಜಗ್ಗದ ದೆಹಲಿಯ ಗಡಿಭಾಗಗಳಾದ ಸಿಂಘು ಮತ್ತು ಟಿಕ್ರಿಯಲ್ಲಿ ಬೀಡು ಬಿಟ್ಟಿದ್ದ ರೈತ ಸಂಘಟನೆಯ ಸದಸ್ಯರು ಮಂಗಳವಾರ ಮುಂಜಾನೆ ಬ್ಯಾರಿಕೇಡ್ಗಳನ್ನು ಮುರಿದು ಹೊರ ವರ್ತುಲ ರಸ್ತೆಯ ಮೂಲಕ ದೆಹಲಿ ಪ್ರವೇಶಿಸಲು ಹೆಜ್ಜೆ ಹಾಕಿದರು.</p>.<p>ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಗಡಿಭಾಗಗಳಲ್ಲಿ ಬೀಡುಬಿಟ್ಟಿದ್ದ ಸಾವಿರಾರು ಪ್ರತಿಭಟನಾ ನಿರತ ರೈತರು ಮಂಗಳವಾರ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ನಿರ್ಧರಿಸಿದ್ದರು. ದೆಹಲಿಯ ರಾಜ್ಪತ್ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿದ ನಂತರ ರ್ಯಾಲಿಗೆ ಪೊಲೀಸರು ಅನುಮತಿ ನೀಡಿದ್ದರು.</p>.<p>‘ಈ ವಿಷಯವನ್ನು ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ, ಅದನ್ನು ಲೆಕ್ಕಿಸದ ರೈತರ ಗುಂಪು ಬ್ಯಾರಿಕೇಡ್ಗಳನ್ನು ಮುರಿದು ರಿಂಗ್ರೋಡ್ ಮೂಲಕ ದೆಹಲಿಯತ್ತ ಮುನ್ನುಗ್ಗಿತು‘ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದ ಕೆಲವು ಸದಸ್ಯರು ಬ್ಯಾರಿಕೇಡ್ಗಳನ್ನು ಮುರಿದಿದ್ದಾರೆ‘ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಕೆಎಸ್ಎಂ) ಸದಸ್ಯರೊಬ್ಬರು ತಿಳಿಸಿದ್ದಾರೆ. ಕೆಎಸ್ಎಂ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ 41 ರೈತ ಸಂಘಗಳ ಒಕ್ಕೂಟವಾಗಿದೆ.</p>.<p>‘ಪೊಲೀಸರ ಅನುಮತಿಯಂತೆ ಈಗಾಗಲೇ ನಿಗದಿತಪಡಿಸಿರುವ ಸಮಯದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಟ್ರ್ಯಾಕ್ಟರ್ ರ್ಯಾಲಿ ಆರಂಭವಾಗಲಿದೆ. ಕೆಎಸ್ಎಂ ಸೋಮವಾರ ಪ್ರಕಟಿಸಿರುವಂತೆ ಟ್ರ್ಯಾಕ್ಟರ್ ರ್ಯಾಲಿ ದೆಹಲಿ ಹೊರ ವರ್ತುಲ ರಸ್ತೆಯಲ್ಲಿ ಸಾಗಲಿದೆ‘ ಎಂದು ಅವರು ತಿಳಿಸಿದರು.</p>.<p>ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಲು ಪ್ರತಿಭಟನಡೆ ನಡೆಸುತ್ತಿರುವ ವಿವಿಧ ರೈತ ಸಂಘಟನೆಗಳು ಬಜೆಟ್ ಅಧಿವೇಶನ ನಡೆಯುವ ಫೆಬ್ರುವರಿ 1 ರಂದು ಸಂಸತ್ತಿನತ್ತ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿವೆ.</p>.<p>'ಕಿಸಾನ್ ಗಣತಂತ್ರ ಮೆರವಣಿಗೆ‘ಯ ಹಿನ್ನೆಲೆಯಲ್ಲಿ ಮಂಗಳವಾರ ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಭಾಗಗಳಲ್ಲಿ ಭಾರಿ ಭದ್ರತೆ ಒದಗಿಸಲಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/mobile-internet-services-temporarily-suspended-across-kashmir-valley-as-security-measure-799717.html" itemprop="url">ಮುನ್ನೆಚ್ಚರಿಕಾ ಕ್ರಮ: ಜಮ್ಮು–ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>