<p><strong>ಮುಂಬೈ:</strong> ದೇಶದ ಶ್ರೀಮಂತ ಗಣಪತಿ ಮಂಡಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮುಂಬೈನ ಜಿಎಸ್ಬಿ ಸೇವಾ ಮಂಡಲದ ಮಹಾ ಗಣೇಶನಿಗೆ ಈ ಬಾರಿ 474.46 ಕೋಟಿ ವಿಮೆ ಮಾಡಿಸಲಾಗಿದೆ.</p><p>ಮುಂಬೈನ ಕಿಂಗ್ ಸರ್ಕಲ್ನಲ್ಲಿ ಈ ಗಣೇಶ ಮಂಡಲವಿದ್ದು, ಜನಸಾಮಾನ್ಯರು ಸೇರಿದಂತೆ ಖ್ಯಾತನಾಮರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ವಿಮೆ ವ್ಯವಸ್ಥೆಯನ್ನು ನ್ಯೂ ಇಂಡಿಯಾ ಇನ್ಸೂರೆನ್ಸ್ ಕಂಪನಿ ಮಾಡಿದೆ. ಆದರೆ ಮಂಡಳಿಯು ವಿಮೆಯ ಪ್ರೀಮಿಯಂ ಮೊತ್ತವನ್ನು ಬಹಿರಂಗಪಡಿಸಿಲ್ಲ.</p>.ಮುಂಬೈನ ಜಿಎಸ್ಬಿ ಸೇವಾ ಮಂಡಲದ ಮಹಾ ಗಣೇಶನಿಗೆ ₹360 ಕೋಟಿ ವಿಮೆ!.ನಗರದಲ್ಲಿ ಇಂದು: ಜಿಎಸ್ಬಿ ಮಹಿಳಾ ಭಜನಾ ಮಂಡಳಿ ಕಾಶಿಮಠ, ಉಪನ್ಯಾಸ.<p>ಕಳೆದ ವರ್ಷ ಜಿಎಸ್ಬಿ ಮಂಡಲವು ₹ 400.58 ಕೋಟಿಗೆ ವಿಮೆ ಮಾಡಿಸಿತ್ತು. ಈ ಬಾರಿ ವಿಮಾ ಮೊತ್ತವು ₹ 73 ಕೋಟಿ ಹೆಚ್ಚಾಗಿದೆ ಎಂದು ಜಿಎಸ್ಬಿ ಸೇವಾ ಮಂಡಲದ ಟ್ರಸ್ಟಿ ಹಾಗೂ ವಕ್ತಾರ ಅಮಿತ್ ಡಿ. ಪೈ ಮಾಹಿತಿ ನೀಡಿದ್ದಾರೆ.</p><p>ಗಣೇಶನಿಗೆ ತೊಡಿಸುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳಿಗೆ ₹ 67.03 ಕೋಟಿ, ಉತ್ಸವದ ವೇಳೆ ಸಂಭವಿಸುವ ಅನಾಹುತಗಳಿಗೆ ಪರಿಹಾರವಾಗಿ ₹ 2 ಕೋಟಿ ವಿಮೆ ಮಾಡಿಸಲಾಗಿದೆ. ಇದರಲ್ಲಿ ಭೂಕಂಪ ಹಾಗೂ ಅಗ್ನಿ ಅವಘಡದಿಂದಾಗುವ ಹಾನಿಗೆ(ಕಚೇರಿ ಸಾಮಾನುಗಳು, ಕಂಪ್ಯೂಟರ್ಗಳು, ಸಿಸಿಟಿವಿ ಕ್ಯಾಮೆರಾಗಳು, ಕ್ಯೂಆರ್ ಸ್ಕ್ಯಾನರ್ಗಳು, ಪಾತ್ರೆಗಳು, ಅಕ್ಕಿ-ದಿನಸಿ, ಹಣ್ಣು-ತರಕಾರಿಗಳು ಇದರಲ್ಲಿ ಸೇರಿವೆ) ವಿಮೆ ಮಾಡಲಾಗಿದೆ. </p><p>ಸಾರ್ವಜನಿಕ ಹೊಣೆಗಾರಿಕೆಯಡಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್, ಕ್ರೀಡಾಂಗಣ ಹಾಗೂ ಭಕ್ತರಿಗಾಗಿ ₹ 30 ಕೋಟಿ ವಿಮೆ ಮಾಡಿಸಲಾಗಿದೆ.</p><p>ಉಳಿದಂತೆ ಸ್ವಯಂ ಸೇವಕರು, ಅರ್ಚಕರು, ಅಡುಗೆ ಸಿಬ್ಬಂದಿ, ಪಾದರಕ್ಷೆ ಕಾಯುವ ಸಿಬ್ಬಂದಿ, ರಕ್ಷಣಾ ಸಿಬ್ಬಂದಿಗಾಗಿ ₹ 375 ಕೋಟಿ ವಿಮೆ ಮಾಡಿಸಲಾಗಿದೆ. ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಗೆ ₹ 43 ಕೋಟಿ ವಿಮೆ ಮಾಡಿಸಲಾಗಿದೆ. </p><p>ಮಹಾನಗರದಲ್ಲಿರುವ ಎಲ್ಲಾ ಗಣೇಶ ಮಂಡಳಿಗಳ ಪೈಕಿ ಜಿಎಸ್ಬಿ ಸೇವಾ ಮಂಡಳಿಯ ಗಣಪತಿಗೆ ಸಂಪ್ರದಾಯದಂತೆ 24 ಗಂಟೆಗಳೂ ಪೂಜೆ, ಅರ್ಚನೆ ಹಾಗೂ ಅನ್ನದಾನ ಸೇವೆ ನಡೆಯುತ್ತದೆ.</p><p>ಇಲ್ಲಿ ಪ್ರತಿಷ್ಠಾಪಿಸುವ ಗಣೇಶನಿಗೆ 69 ಕೆ.ಜಿ ಬಂಗಾರದ ಆಭರಣಗಳು, 336 ಕೆ.ಜಿ ಬೆಳ್ಳಿ ಹಾಗೂ ಇತರೆ ಅಮೂಲ್ಯ ವಸ್ತುಗಳಿಂದ ಅಲಂಕರಿಸಲಾಗುತ್ತದೆ. ಇವುಗಳನ್ನು ಭಕ್ತರು ಹಾಗೂ ಸೇವಾದಾರರು ದೇಣಿಗೆಯಾಗಿ ನೀಡಿರುತ್ತಾರೆ.</p><p>ಪ್ರತಿ ವರ್ಷ ಜಿಎಸ್ಬಿ ಸೇವಾ ಮಂಡಳಿಯು ದುರ್ಬಲ ವರ್ಗದವರಿಗೆ ಶಿಕ್ಷಣ ಪಡೆಯಲು ಹಾಗೂ ಸ್ವ–ಉದ್ಯೋಗಕ್ಕೆ ಆರ್ಥಿಕ ಸಹಾಯ ಮಾಡುತ್ತದೆ ಎಂದು ಅಮಿತ್ ಡಿ. ಪೈ ಹೇಳಿದ್ದಾರೆ.</p>.ಪರಿಸರಸ್ನೇಹಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ: : ಜಿಲ್ಲಾಧಿಕಾರಿ.ಶೂನ್ಯ ಬಡ್ಡಿದರದ ಸಾಲ ವಿತರಣೆಗೆ ಸಮಸ್ಯೆ ಇಲ್ಲ: ಬಾಂಡ್ ಗಣಪತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೇಶದ ಶ್ರೀಮಂತ ಗಣಪತಿ ಮಂಡಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮುಂಬೈನ ಜಿಎಸ್ಬಿ ಸೇವಾ ಮಂಡಲದ ಮಹಾ ಗಣೇಶನಿಗೆ ಈ ಬಾರಿ 474.46 ಕೋಟಿ ವಿಮೆ ಮಾಡಿಸಲಾಗಿದೆ.</p><p>ಮುಂಬೈನ ಕಿಂಗ್ ಸರ್ಕಲ್ನಲ್ಲಿ ಈ ಗಣೇಶ ಮಂಡಲವಿದ್ದು, ಜನಸಾಮಾನ್ಯರು ಸೇರಿದಂತೆ ಖ್ಯಾತನಾಮರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ವಿಮೆ ವ್ಯವಸ್ಥೆಯನ್ನು ನ್ಯೂ ಇಂಡಿಯಾ ಇನ್ಸೂರೆನ್ಸ್ ಕಂಪನಿ ಮಾಡಿದೆ. ಆದರೆ ಮಂಡಳಿಯು ವಿಮೆಯ ಪ್ರೀಮಿಯಂ ಮೊತ್ತವನ್ನು ಬಹಿರಂಗಪಡಿಸಿಲ್ಲ.</p>.ಮುಂಬೈನ ಜಿಎಸ್ಬಿ ಸೇವಾ ಮಂಡಲದ ಮಹಾ ಗಣೇಶನಿಗೆ ₹360 ಕೋಟಿ ವಿಮೆ!.ನಗರದಲ್ಲಿ ಇಂದು: ಜಿಎಸ್ಬಿ ಮಹಿಳಾ ಭಜನಾ ಮಂಡಳಿ ಕಾಶಿಮಠ, ಉಪನ್ಯಾಸ.<p>ಕಳೆದ ವರ್ಷ ಜಿಎಸ್ಬಿ ಮಂಡಲವು ₹ 400.58 ಕೋಟಿಗೆ ವಿಮೆ ಮಾಡಿಸಿತ್ತು. ಈ ಬಾರಿ ವಿಮಾ ಮೊತ್ತವು ₹ 73 ಕೋಟಿ ಹೆಚ್ಚಾಗಿದೆ ಎಂದು ಜಿಎಸ್ಬಿ ಸೇವಾ ಮಂಡಲದ ಟ್ರಸ್ಟಿ ಹಾಗೂ ವಕ್ತಾರ ಅಮಿತ್ ಡಿ. ಪೈ ಮಾಹಿತಿ ನೀಡಿದ್ದಾರೆ.</p><p>ಗಣೇಶನಿಗೆ ತೊಡಿಸುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳಿಗೆ ₹ 67.03 ಕೋಟಿ, ಉತ್ಸವದ ವೇಳೆ ಸಂಭವಿಸುವ ಅನಾಹುತಗಳಿಗೆ ಪರಿಹಾರವಾಗಿ ₹ 2 ಕೋಟಿ ವಿಮೆ ಮಾಡಿಸಲಾಗಿದೆ. ಇದರಲ್ಲಿ ಭೂಕಂಪ ಹಾಗೂ ಅಗ್ನಿ ಅವಘಡದಿಂದಾಗುವ ಹಾನಿಗೆ(ಕಚೇರಿ ಸಾಮಾನುಗಳು, ಕಂಪ್ಯೂಟರ್ಗಳು, ಸಿಸಿಟಿವಿ ಕ್ಯಾಮೆರಾಗಳು, ಕ್ಯೂಆರ್ ಸ್ಕ್ಯಾನರ್ಗಳು, ಪಾತ್ರೆಗಳು, ಅಕ್ಕಿ-ದಿನಸಿ, ಹಣ್ಣು-ತರಕಾರಿಗಳು ಇದರಲ್ಲಿ ಸೇರಿವೆ) ವಿಮೆ ಮಾಡಲಾಗಿದೆ. </p><p>ಸಾರ್ವಜನಿಕ ಹೊಣೆಗಾರಿಕೆಯಡಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್, ಕ್ರೀಡಾಂಗಣ ಹಾಗೂ ಭಕ್ತರಿಗಾಗಿ ₹ 30 ಕೋಟಿ ವಿಮೆ ಮಾಡಿಸಲಾಗಿದೆ.</p><p>ಉಳಿದಂತೆ ಸ್ವಯಂ ಸೇವಕರು, ಅರ್ಚಕರು, ಅಡುಗೆ ಸಿಬ್ಬಂದಿ, ಪಾದರಕ್ಷೆ ಕಾಯುವ ಸಿಬ್ಬಂದಿ, ರಕ್ಷಣಾ ಸಿಬ್ಬಂದಿಗಾಗಿ ₹ 375 ಕೋಟಿ ವಿಮೆ ಮಾಡಿಸಲಾಗಿದೆ. ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಗೆ ₹ 43 ಕೋಟಿ ವಿಮೆ ಮಾಡಿಸಲಾಗಿದೆ. </p><p>ಮಹಾನಗರದಲ್ಲಿರುವ ಎಲ್ಲಾ ಗಣೇಶ ಮಂಡಳಿಗಳ ಪೈಕಿ ಜಿಎಸ್ಬಿ ಸೇವಾ ಮಂಡಳಿಯ ಗಣಪತಿಗೆ ಸಂಪ್ರದಾಯದಂತೆ 24 ಗಂಟೆಗಳೂ ಪೂಜೆ, ಅರ್ಚನೆ ಹಾಗೂ ಅನ್ನದಾನ ಸೇವೆ ನಡೆಯುತ್ತದೆ.</p><p>ಇಲ್ಲಿ ಪ್ರತಿಷ್ಠಾಪಿಸುವ ಗಣೇಶನಿಗೆ 69 ಕೆ.ಜಿ ಬಂಗಾರದ ಆಭರಣಗಳು, 336 ಕೆ.ಜಿ ಬೆಳ್ಳಿ ಹಾಗೂ ಇತರೆ ಅಮೂಲ್ಯ ವಸ್ತುಗಳಿಂದ ಅಲಂಕರಿಸಲಾಗುತ್ತದೆ. ಇವುಗಳನ್ನು ಭಕ್ತರು ಹಾಗೂ ಸೇವಾದಾರರು ದೇಣಿಗೆಯಾಗಿ ನೀಡಿರುತ್ತಾರೆ.</p><p>ಪ್ರತಿ ವರ್ಷ ಜಿಎಸ್ಬಿ ಸೇವಾ ಮಂಡಳಿಯು ದುರ್ಬಲ ವರ್ಗದವರಿಗೆ ಶಿಕ್ಷಣ ಪಡೆಯಲು ಹಾಗೂ ಸ್ವ–ಉದ್ಯೋಗಕ್ಕೆ ಆರ್ಥಿಕ ಸಹಾಯ ಮಾಡುತ್ತದೆ ಎಂದು ಅಮಿತ್ ಡಿ. ಪೈ ಹೇಳಿದ್ದಾರೆ.</p>.ಪರಿಸರಸ್ನೇಹಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ: : ಜಿಲ್ಲಾಧಿಕಾರಿ.ಶೂನ್ಯ ಬಡ್ಡಿದರದ ಸಾಲ ವಿತರಣೆಗೆ ಸಮಸ್ಯೆ ಇಲ್ಲ: ಬಾಂಡ್ ಗಣಪತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>