<p><strong>ನವದೆಹಲಿ</strong>: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ಟಿ) ಸರಳೀಕರಣದಿಂದ ರಾಜ್ಯಗಳಿಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. </p>.<p>ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ. ಜಿಎಸ್ಟಿ ವ್ಯವಸ್ಥೆ ಸರಳೀಕರಣದಿಂದ ವಾರ್ಷಿಕ ₹15 ಸಾವಿರ ಕೊಟಿ ನಷ್ಟವಾಗಲಿದ್ದು, ಇದಕ್ಕೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ತಮ್ಮ ರಾಜ್ಯಗಳಿಗೆ ವಾರ್ಷಿಕ ತಲಾ ₹10 ಸಾವಿರ ಕೋಟಿ ನಷ್ಟವಾಗಲಿದೆ ಎಂದು ತಮಿಳುನಾಡು ಹಾಗೂ ಕೇರಳ ಸರ್ಕಾರಗಳು ದೂರಿದ್ದವು. ಬಿಜೆಪಿಯೇತರ ಸರ್ಕಾರಗಳ ಸಚಿವರು ನವದೆಹಲಿಯಲ್ಲಿ ಸಭೆ ನಡೆಸಿ ನಷ್ಟ ಪರಿಹಾರ ನೀಡುವಂತೆ ಒತ್ತಡ ಹೇರಿದ್ದವು. ರಾಜ್ಯ ಸರ್ಕಾರಗಳ ಬೇಡಿಕೆಯನ್ನು ಹಣಕಾಸು ಸಚಿವಾಲಯ ಸಾರಾಸಗಟಾಗಿ ತಳ್ಳಿ ಹಾಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್ಟಿ) ಸರಳೀಕರಣದಿಂದ ರಾಜ್ಯಗಳಿಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. </p>.<p>ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ. ಜಿಎಸ್ಟಿ ವ್ಯವಸ್ಥೆ ಸರಳೀಕರಣದಿಂದ ವಾರ್ಷಿಕ ₹15 ಸಾವಿರ ಕೊಟಿ ನಷ್ಟವಾಗಲಿದ್ದು, ಇದಕ್ಕೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ತಮ್ಮ ರಾಜ್ಯಗಳಿಗೆ ವಾರ್ಷಿಕ ತಲಾ ₹10 ಸಾವಿರ ಕೋಟಿ ನಷ್ಟವಾಗಲಿದೆ ಎಂದು ತಮಿಳುನಾಡು ಹಾಗೂ ಕೇರಳ ಸರ್ಕಾರಗಳು ದೂರಿದ್ದವು. ಬಿಜೆಪಿಯೇತರ ಸರ್ಕಾರಗಳ ಸಚಿವರು ನವದೆಹಲಿಯಲ್ಲಿ ಸಭೆ ನಡೆಸಿ ನಷ್ಟ ಪರಿಹಾರ ನೀಡುವಂತೆ ಒತ್ತಡ ಹೇರಿದ್ದವು. ರಾಜ್ಯ ಸರ್ಕಾರಗಳ ಬೇಡಿಕೆಯನ್ನು ಹಣಕಾಸು ಸಚಿವಾಲಯ ಸಾರಾಸಗಟಾಗಿ ತಳ್ಳಿ ಹಾಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>