<p><strong>ನವದೆಹಲಿ:</strong> ‘ಸರಕು ಸೇವಾ ತೆರಿಗೆಯ (ಜಿಎಸ್ಟಿ) ಸರಳೀಕರಣವು ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಆರ್ಥಿಕ ಸುಧಾರಣೆಗಳ ಡಬಲ್ ಡೋಸ್ ಆಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.</p>.<p>ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಸ್ವದೇಶಿ ಉತ್ಪನ್ನಗಳನ್ನು ಉತ್ತೇಜಿಸುವ ಅಭಿಯಾನವನ್ನು ಮುನ್ನಡೆಸುವಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>‘ಎಲ್ಲ ವರ್ಗದವರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು ಹಾಗೂ ಯುವ ಪೀಳಿಗೆಯು ತೆರಿಗೆ ಕಡಿತದ ಪ್ರಯೋಜನವನ್ನು ಪಡೆಯಲಿದ್ದಾರೆ’ ಎಂದು ಹೇಳಿದರು.</p>.<p>‘21ನೇ ಶತಮಾನದಲ್ಲಿ ಭಾರತದ ಪ್ರಗತಿಯನ್ನು ಬೆಂಬಲಿಸಲು ಮುಂದಿನ ತಲೆಮಾರಿನ ಜಿಎಸ್ಟಿ ಸುಧಾರಣೆಯು ಸಹಕಾರಿಯಾಗಿದೆ. ಜಿಎಸ್ಟಿ 2.0ನಿಂದ ದೇಶದ ಬೆಳವಣಿಗೆ ದ್ವಿಗುಣವಾಗಿದೆ. ಜಿಎಸ್ಟಿ ಸುಧಾರಣೆಗಳ ಮೂಲಕ ಭಾರತದ ರೋಮಾಂಚಕ ಆರ್ಥಿಕತೆಗೆ ಹೊಸ ಐದು ರತ್ನಗಳನ್ನು (ಪಂಚರತ್ನ) ಸೇರಿಸಲಾಗಿದೆ’ ಎಂದು ತಿಳಿಸಿದರು.</p>.<p>‘2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ದಿನ ಬಳಕೆ ವಸ್ತುಗಳ ಮೇಲೆ ಅಧಿಕ ತೆರಿಗೆ ವಿಧಿಸಲಾಗಿತ್ತು. ಅಡುಗೆ ಪಾತ್ರೆಗಳು, ಕೃಷಿ ಉಪಕರಣಗಳು, ಔಷಧ, ಜೀವವಿಮೆ ಹೀಗೆ ವಿವಿಧ ವಸ್ತುಗಳ ಮೇಲೆ ಕಾಂಗ್ರೆಸ್ ಸರ್ಕಾರವು ವಿವಿಧ ತೆರಿಗೆಗಳನ್ನು ವಿಧಿಸಿತ್ತು’ ಎಂದು ಮೋದಿ ಟೀಕಿಸಿದರು.</p>.<h2><strong>ರಾಜತಾಂತ್ರಿಕತೆ ಮೀರಿದ ಸಂಬಂಧ</strong></h2><p>‘ಭಾರತ ಹಾಗೂ ಸಿಂಗಪುರ ನಡುವಿನ ಸಂಬಂಧ ರಾಜತಾಂತ್ರಿಕತೆ ಮೀರಿದ್ದಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.</p><p>ದ್ವಿಪಕ್ಷೀಯ ಸಂಬಂಧ ವಿಸ್ತರಣೆ ಸಂಬಂಧ ನವದೆಹಲಿಗೆ ಬಂದಿಳಿದ ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಮುಂದೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸರಕು ಸೇವಾ ತೆರಿಗೆಯ (ಜಿಎಸ್ಟಿ) ಸರಳೀಕರಣವು ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಆರ್ಥಿಕ ಸುಧಾರಣೆಗಳ ಡಬಲ್ ಡೋಸ್ ಆಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.</p>.<p>ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಸ್ವದೇಶಿ ಉತ್ಪನ್ನಗಳನ್ನು ಉತ್ತೇಜಿಸುವ ಅಭಿಯಾನವನ್ನು ಮುನ್ನಡೆಸುವಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>‘ಎಲ್ಲ ವರ್ಗದವರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು ಹಾಗೂ ಯುವ ಪೀಳಿಗೆಯು ತೆರಿಗೆ ಕಡಿತದ ಪ್ರಯೋಜನವನ್ನು ಪಡೆಯಲಿದ್ದಾರೆ’ ಎಂದು ಹೇಳಿದರು.</p>.<p>‘21ನೇ ಶತಮಾನದಲ್ಲಿ ಭಾರತದ ಪ್ರಗತಿಯನ್ನು ಬೆಂಬಲಿಸಲು ಮುಂದಿನ ತಲೆಮಾರಿನ ಜಿಎಸ್ಟಿ ಸುಧಾರಣೆಯು ಸಹಕಾರಿಯಾಗಿದೆ. ಜಿಎಸ್ಟಿ 2.0ನಿಂದ ದೇಶದ ಬೆಳವಣಿಗೆ ದ್ವಿಗುಣವಾಗಿದೆ. ಜಿಎಸ್ಟಿ ಸುಧಾರಣೆಗಳ ಮೂಲಕ ಭಾರತದ ರೋಮಾಂಚಕ ಆರ್ಥಿಕತೆಗೆ ಹೊಸ ಐದು ರತ್ನಗಳನ್ನು (ಪಂಚರತ್ನ) ಸೇರಿಸಲಾಗಿದೆ’ ಎಂದು ತಿಳಿಸಿದರು.</p>.<p>‘2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ದಿನ ಬಳಕೆ ವಸ್ತುಗಳ ಮೇಲೆ ಅಧಿಕ ತೆರಿಗೆ ವಿಧಿಸಲಾಗಿತ್ತು. ಅಡುಗೆ ಪಾತ್ರೆಗಳು, ಕೃಷಿ ಉಪಕರಣಗಳು, ಔಷಧ, ಜೀವವಿಮೆ ಹೀಗೆ ವಿವಿಧ ವಸ್ತುಗಳ ಮೇಲೆ ಕಾಂಗ್ರೆಸ್ ಸರ್ಕಾರವು ವಿವಿಧ ತೆರಿಗೆಗಳನ್ನು ವಿಧಿಸಿತ್ತು’ ಎಂದು ಮೋದಿ ಟೀಕಿಸಿದರು.</p>.<h2><strong>ರಾಜತಾಂತ್ರಿಕತೆ ಮೀರಿದ ಸಂಬಂಧ</strong></h2><p>‘ಭಾರತ ಹಾಗೂ ಸಿಂಗಪುರ ನಡುವಿನ ಸಂಬಂಧ ರಾಜತಾಂತ್ರಿಕತೆ ಮೀರಿದ್ದಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.</p><p>ದ್ವಿಪಕ್ಷೀಯ ಸಂಬಂಧ ವಿಸ್ತರಣೆ ಸಂಬಂಧ ನವದೆಹಲಿಗೆ ಬಂದಿಳಿದ ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಮುಂದೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>