<p><strong>ಚಂದ್ರಾಪುರ (ಮಹಾರಾಷ್ಟ್ರ):</strong> ಹುಲಿಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಾರಾಷ್ಟ್ರದ ತಡೋಬಾ ಅಂಧಾರಿ ಹುಲಿ ಸಂರಕ್ಷಣಾ ಮೀಸಲು ಪ್ರದೇಶದಲ್ಲಿ 10 ಮಂದಿ ಮಾರ್ಗದರ್ಶಕರನ್ನು ಅಮಾನತು ಮಾಡಲಾಗಿದ್ದು, ಸಫಾರಿ ಸೇವೆಯನ್ನೂ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮೇ 17 ರಂದು ಜಂಗಲ್ ಸಫಾರಿ ವೇಳೆ ಚಂದ್ರಾಪುರದ ಮೀಸಲು ಪ್ರದೇಶದಲ್ಲಿ ಹುಲಿ T-114 ರ ಸಂಚಾರಕ್ಕೆ ಕೆಲವು ವಾಹನಗಳು ಅಡ್ಡಿಪಡಿಸಿವೆ ಎನ್ನಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಬಳಿಕ 10 ಜನ ಮಾರ್ಗದರ್ಶಿಗಳು ಮತ್ತು 10 ಸಫಾರಿ ವಾಹನಗಳ ಸೇವೆಗಳನ್ನು ಭಾನುವಾರದಿಂದ ಒಂದು ತಿಂಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ಮೀಸಲು ಪ್ರದೇಶದ ನಿರ್ದೇಶಕ ಕುಶಾಗ್ರಾ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಇಂತಹ ಘಟನೆಗಳು ಹೆಚ್ಚಾಗಿ ಸಂಭವಿಸುವ ಮೀಸಲು ಪ್ರದೇಶದ ಕೆಲವು ಪ್ರದೇಶಗಳಲ್ಲಿ ಪ್ರವಾಸಿಗರ ಭೇಟಿ ನಿಷೇಧಿಸಲು ಆಡಳಿತವು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂದ್ರಾಪುರ (ಮಹಾರಾಷ್ಟ್ರ):</strong> ಹುಲಿಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಾರಾಷ್ಟ್ರದ ತಡೋಬಾ ಅಂಧಾರಿ ಹುಲಿ ಸಂರಕ್ಷಣಾ ಮೀಸಲು ಪ್ರದೇಶದಲ್ಲಿ 10 ಮಂದಿ ಮಾರ್ಗದರ್ಶಕರನ್ನು ಅಮಾನತು ಮಾಡಲಾಗಿದ್ದು, ಸಫಾರಿ ಸೇವೆಯನ್ನೂ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಮೇ 17 ರಂದು ಜಂಗಲ್ ಸಫಾರಿ ವೇಳೆ ಚಂದ್ರಾಪುರದ ಮೀಸಲು ಪ್ರದೇಶದಲ್ಲಿ ಹುಲಿ T-114 ರ ಸಂಚಾರಕ್ಕೆ ಕೆಲವು ವಾಹನಗಳು ಅಡ್ಡಿಪಡಿಸಿವೆ ಎನ್ನಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಬಳಿಕ 10 ಜನ ಮಾರ್ಗದರ್ಶಿಗಳು ಮತ್ತು 10 ಸಫಾರಿ ವಾಹನಗಳ ಸೇವೆಗಳನ್ನು ಭಾನುವಾರದಿಂದ ಒಂದು ತಿಂಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ಮೀಸಲು ಪ್ರದೇಶದ ನಿರ್ದೇಶಕ ಕುಶಾಗ್ರಾ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಇಂತಹ ಘಟನೆಗಳು ಹೆಚ್ಚಾಗಿ ಸಂಭವಿಸುವ ಮೀಸಲು ಪ್ರದೇಶದ ಕೆಲವು ಪ್ರದೇಶಗಳಲ್ಲಿ ಪ್ರವಾಸಿಗರ ಭೇಟಿ ನಿಷೇಧಿಸಲು ಆಡಳಿತವು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>