<p><strong>ಅಹಮದಾಬಾದ್</strong>: ಗುಜರಾತ್ ಬಿಜೆಪಿಯ ನೂತನ ಅಧ್ಯಕ್ಷರಾಗಿ ಆ ರಾಜ್ಯದ ಹಿಂದುಳಿದ ವರ್ಗಗಳ ನಾಯಕ ಎಂದು ಗುರುತಿಸಿಕೊಂಡಿರುವ ಜಗದೀಶ್ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.</p><p>ರಾಜ್ಯಾಧ್ಯಕ್ಷರ ಚುನಾವಣೆಯ ನೇತೃತ್ವ ವಹಿಸಿದ್ದ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಇಂದು ಅಹಮದಾಬಾದ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಗದೀಶ್ ವಿಶ್ವಕರ್ಮ ಅವರ ಆಯ್ಕೆಯನ್ನು ಘೋಷಣೆ ಮಾಡಿದರು.</p><p>ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಸಿಆರ್ ಪಾಟೀಲ ಅವರ ಅವಧಿ ಕೊನೆಗೊಂಡಿದ್ದರಿಂದ ಚುನಾವಣೆ ನಡೆಯಿತು. ಜಗದೀಶ್ ವಿಶ್ವಕರ್ಮ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಜಗದೀಶ್ ವಿಶ್ವಕರ್ಮ ಅವರು ಇನ್ನು ಮೂರು ವರ್ಷ ಬಿಜೆಪಿ ಗುಜರಾತ್ ರಾಜ್ಯಾಧ್ಯಕ್ಷರಾಗಿ ಇರಲಿದ್ದಾರೆ.</p><p>ಅಹಮದಾಬಾದ್ನ ನಿಕೋಲ್ ಕ್ಷೇತ್ರದ ಶಾಸಕರಾಗಿರುವ ಜಗದೀಶ್ ವಿಶ್ವಕರ್ಮ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರ ಸಂಪುಟದಲ್ಲಿ ಸಹಕಾರ ಹಾಗೂ ಸಣ್ಣ ಕೈಗಾರಿಕೆಗಳ ಸಚಿವರಾಗಿದ್ದಾರೆ.</p><p>ಅಮಿತ್ ಶಾ ಹಾಗೂ ಮೋದಿ ಅವರ ನೇತೃತ್ವದಲ್ಲಿ ಪಕ್ಷಕ್ಕಾಗಿ ಉತ್ತಮ ಕೆಲಸಗಳನ್ನು ಮಾಡುತ್ತಾ ಹೆಚ್ಚು ಪಕ್ಷ ಸಂಘಟನೆ ಮಾಡಲಾಗುವುದು ಎಂದು ವಿಶ್ವಕರ್ಮ ಅವರು ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಗುಜರಾತ್ ಬಿಜೆಪಿಯ ನೂತನ ಅಧ್ಯಕ್ಷರಾಗಿ ಆ ರಾಜ್ಯದ ಹಿಂದುಳಿದ ವರ್ಗಗಳ ನಾಯಕ ಎಂದು ಗುರುತಿಸಿಕೊಂಡಿರುವ ಜಗದೀಶ್ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.</p><p>ರಾಜ್ಯಾಧ್ಯಕ್ಷರ ಚುನಾವಣೆಯ ನೇತೃತ್ವ ವಹಿಸಿದ್ದ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಇಂದು ಅಹಮದಾಬಾದ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಗದೀಶ್ ವಿಶ್ವಕರ್ಮ ಅವರ ಆಯ್ಕೆಯನ್ನು ಘೋಷಣೆ ಮಾಡಿದರು.</p><p>ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಸಿಆರ್ ಪಾಟೀಲ ಅವರ ಅವಧಿ ಕೊನೆಗೊಂಡಿದ್ದರಿಂದ ಚುನಾವಣೆ ನಡೆಯಿತು. ಜಗದೀಶ್ ವಿಶ್ವಕರ್ಮ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಜಗದೀಶ್ ವಿಶ್ವಕರ್ಮ ಅವರು ಇನ್ನು ಮೂರು ವರ್ಷ ಬಿಜೆಪಿ ಗುಜರಾತ್ ರಾಜ್ಯಾಧ್ಯಕ್ಷರಾಗಿ ಇರಲಿದ್ದಾರೆ.</p><p>ಅಹಮದಾಬಾದ್ನ ನಿಕೋಲ್ ಕ್ಷೇತ್ರದ ಶಾಸಕರಾಗಿರುವ ಜಗದೀಶ್ ವಿಶ್ವಕರ್ಮ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರ ಸಂಪುಟದಲ್ಲಿ ಸಹಕಾರ ಹಾಗೂ ಸಣ್ಣ ಕೈಗಾರಿಕೆಗಳ ಸಚಿವರಾಗಿದ್ದಾರೆ.</p><p>ಅಮಿತ್ ಶಾ ಹಾಗೂ ಮೋದಿ ಅವರ ನೇತೃತ್ವದಲ್ಲಿ ಪಕ್ಷಕ್ಕಾಗಿ ಉತ್ತಮ ಕೆಲಸಗಳನ್ನು ಮಾಡುತ್ತಾ ಹೆಚ್ಚು ಪಕ್ಷ ಸಂಘಟನೆ ಮಾಡಲಾಗುವುದು ಎಂದು ವಿಶ್ವಕರ್ಮ ಅವರು ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>