<p><strong>ಅಹಮದಾಬಾದ್: </strong>ಗುಜರಾತ್ ಕಾಂಗ್ರೆಸ್ನ ಎರಡನೇ ಹಂತದ ‘ಜನ ಆಕ್ರೋಶ ಯಾತ್ರೆ’ಯು ಇದೇ 20ರಂದು ಖೇಡಾ ಜಿಲ್ಲೆಯ ಫಾಗ್ವೆಲ್ ಗ್ರಾಮದಿಂದ ಆರಂಭವಾಗಲಿದ್ದು, ಜನವರಿ 6ರಂದು ದಾಹೋದ್ ಜಿಲ್ಲೆಯಲ್ಲಿ ಕೊನೆಗೊಳ್ಳಲಿದೆ. </p>.<p>ಯಾತ್ರೆಯು 1,400 ಕಿ.ಮೀ ದೂರವನ್ನು ಕ್ರಮಿಸುತ್ತದೆ ಮತ್ತು ಗುಜರಾತಿನ ಮಧ್ಯ ಭಾಗದ ಖೇಡಾ, ಆನಂದ್, ವಡೋದರಾ, ಛೋಟೌದೇಪುರ್, ಪಂಚಮಹಲ್, ಮಹಿಸಾಗರ್ ಮತ್ತು ದಾಹೋದ್ ಜಿಲ್ಲೆಗಳಲ್ಲಿ ಸಾಗಲಿದೆ ಎಂದು ಗುಜರಾತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮಿತ್ ಚಾವ್ಡಾ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p>.<p>ರೈತರು, ವಿದ್ಯಾರ್ಥಿಗಳು, ಯುವ ಜನ, ಮಹಿಳೆಯರು ಮತ್ತು ಕಾರ್ಮಿಕರ ಸಮಸ್ಯೆಗಳ ಕುರಿತು ಯಾತ್ರೆಯಲ್ಲಿ ಧ್ವನಿಯೆತ್ತಲಾಗುವುದು ಎಂದು ಅವರು ವಿವರಿಸಿದರು.</p>.<p>ನವೆಂಬರ್ 21ರಿಂದ ಡಿಸೆಂಬರ್ 3ರವರೆಗೆ ಉತ್ತರ ಗುಜರಾತ್ ಭಾಗದಲ್ಲಿ ಕಾಂಗ್ರೆಸ್ ಜನ ಆಕ್ರೋಶ ಯಾತ್ರೆಯ ಮೊದಲ ಹಂತ ಸಾಗಿತ್ತು. ರೈತರ ಸಮಸ್ಯೆ, ಪರಿಹಾರ ಬಗ್ಗೆ ಹಾಗೂ ಮದ್ಯ, ಮಾದಕ ವಸ್ತುಗಳ ಅಕ್ರಮ ಮಾರಾಟದ ವಿರುದ್ಧ ಧ್ವನಿಯೆತ್ತಲಾಗಿತ್ತು ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್: </strong>ಗುಜರಾತ್ ಕಾಂಗ್ರೆಸ್ನ ಎರಡನೇ ಹಂತದ ‘ಜನ ಆಕ್ರೋಶ ಯಾತ್ರೆ’ಯು ಇದೇ 20ರಂದು ಖೇಡಾ ಜಿಲ್ಲೆಯ ಫಾಗ್ವೆಲ್ ಗ್ರಾಮದಿಂದ ಆರಂಭವಾಗಲಿದ್ದು, ಜನವರಿ 6ರಂದು ದಾಹೋದ್ ಜಿಲ್ಲೆಯಲ್ಲಿ ಕೊನೆಗೊಳ್ಳಲಿದೆ. </p>.<p>ಯಾತ್ರೆಯು 1,400 ಕಿ.ಮೀ ದೂರವನ್ನು ಕ್ರಮಿಸುತ್ತದೆ ಮತ್ತು ಗುಜರಾತಿನ ಮಧ್ಯ ಭಾಗದ ಖೇಡಾ, ಆನಂದ್, ವಡೋದರಾ, ಛೋಟೌದೇಪುರ್, ಪಂಚಮಹಲ್, ಮಹಿಸಾಗರ್ ಮತ್ತು ದಾಹೋದ್ ಜಿಲ್ಲೆಗಳಲ್ಲಿ ಸಾಗಲಿದೆ ಎಂದು ಗುಜರಾತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮಿತ್ ಚಾವ್ಡಾ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p>.<p>ರೈತರು, ವಿದ್ಯಾರ್ಥಿಗಳು, ಯುವ ಜನ, ಮಹಿಳೆಯರು ಮತ್ತು ಕಾರ್ಮಿಕರ ಸಮಸ್ಯೆಗಳ ಕುರಿತು ಯಾತ್ರೆಯಲ್ಲಿ ಧ್ವನಿಯೆತ್ತಲಾಗುವುದು ಎಂದು ಅವರು ವಿವರಿಸಿದರು.</p>.<p>ನವೆಂಬರ್ 21ರಿಂದ ಡಿಸೆಂಬರ್ 3ರವರೆಗೆ ಉತ್ತರ ಗುಜರಾತ್ ಭಾಗದಲ್ಲಿ ಕಾಂಗ್ರೆಸ್ ಜನ ಆಕ್ರೋಶ ಯಾತ್ರೆಯ ಮೊದಲ ಹಂತ ಸಾಗಿತ್ತು. ರೈತರ ಸಮಸ್ಯೆ, ಪರಿಹಾರ ಬಗ್ಗೆ ಹಾಗೂ ಮದ್ಯ, ಮಾದಕ ವಸ್ತುಗಳ ಅಕ್ರಮ ಮಾರಾಟದ ವಿರುದ್ಧ ಧ್ವನಿಯೆತ್ತಲಾಗಿತ್ತು ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>