<p><strong>ಗಾಂಧಿನಗರ, ಗುಜರಾತ್</strong>: ಗುಜರಾತ್ನ ಖೇದ್ಬ್ರಹ್ಮ ಕ್ಷೇತ್ರದ ಶಾಸಕ ಅಶ್ವಿನ್ ಕೊತ್ವಾಲ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡುತ್ತಿರುವುದರಿಂದ ಪಕ್ಷವನ್ನು ತೊರೆದೆ’ ಎಂದು ಅಶ್ವಿನ್ ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನ ಕಾರ್ಯವೈಖರಿ ನನಗೆ ಸಂತೋಷ ನೀಡಿಲ್ಲ. ಜನಸಾಮಾನ್ಯರಲ್ಲಿ ಜನಪ್ರಿಯವಾಗಿರುವವರಿಗೆ ಟಿಕೆಟ್ ನೀಡುವ ಬದಲು, ಪಕ್ಷದ ನಾಯಕತ್ವವು ಅವರಿಗೆ ನಿಷ್ಠರಾಗಿರುವವರಿಗೆ ಮಾತ್ರ ಆದ್ಯತೆ ನೀಡುತ್ತಿತ್ತು. ಭವಿಷ್ಯದಲ್ಲಿ ನನಗೆ ಟಿಕೆಟ್ ನಿರಾಕರಿಸಬಹುದು ಎಂಬ ಭಯ ನನಗಿದೆ. ಈ ಕಾರಣದಿಂದ ನಾನು ಬಿಜೆಪಿ ಸೇರುತ್ತಿದ್ದೇನೆ’ ಎಂದು ಹೇಳಿದರು.</p>.<p>‘ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಗುಜರಾತ್ನ ಬುಡಕಟ್ಟು ಪ್ರದೇಶಗಳು ಅಭಿವೃದ್ಧಿ ಕಂಡಿವೆ ಎಂದು ನಾನು ಬಲವಾಗಿ ನಂಬುತ್ತೇನೆ. ಆದ್ದರಿಂದ ನಾನು ಬಿಜೆಪಿಗೆ ಸೇರಿದ್ದೇನೆ’ ಎಂದು ಅಶ್ವಿನ್ ತಿಳಿಸಿದರು.</p>.<p>ಅಶ್ವಿನ್ ಅವರು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಅಲ್ಲದೇಖೇದ್ಬ್ರಹ್ಮ ಕ್ಷೇತ್ರದ ಶಾಸಕ ಸ್ಥಾನಕ್ಕೂರಾಜೀನಾಮೆ ನೀಡಿದರು.</p>.<p>ಈ ವರ್ಷಾಂತ್ಯದಲ್ಲಿ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಅಶ್ವಿನ್ ಅವರ ಈ ನಡೆ ಕಾಂಗ್ರೆಸ್ ಪಕ್ಷಕ್ಕೆ ಆಘಾತ ನೀಡಿದೆ. ಅಶ್ವಿನ್ ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಒಟ್ಟು ಮೂರು ಬಾರಿ ಶಾಸಕರಾಗಿ ಆರಿಸಿ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ, ಗುಜರಾತ್</strong>: ಗುಜರಾತ್ನ ಖೇದ್ಬ್ರಹ್ಮ ಕ್ಷೇತ್ರದ ಶಾಸಕ ಅಶ್ವಿನ್ ಕೊತ್ವಾಲ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಆಡಳಿತಾರೂಢ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.</p>.<p>‘ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡುತ್ತಿರುವುದರಿಂದ ಪಕ್ಷವನ್ನು ತೊರೆದೆ’ ಎಂದು ಅಶ್ವಿನ್ ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನ ಕಾರ್ಯವೈಖರಿ ನನಗೆ ಸಂತೋಷ ನೀಡಿಲ್ಲ. ಜನಸಾಮಾನ್ಯರಲ್ಲಿ ಜನಪ್ರಿಯವಾಗಿರುವವರಿಗೆ ಟಿಕೆಟ್ ನೀಡುವ ಬದಲು, ಪಕ್ಷದ ನಾಯಕತ್ವವು ಅವರಿಗೆ ನಿಷ್ಠರಾಗಿರುವವರಿಗೆ ಮಾತ್ರ ಆದ್ಯತೆ ನೀಡುತ್ತಿತ್ತು. ಭವಿಷ್ಯದಲ್ಲಿ ನನಗೆ ಟಿಕೆಟ್ ನಿರಾಕರಿಸಬಹುದು ಎಂಬ ಭಯ ನನಗಿದೆ. ಈ ಕಾರಣದಿಂದ ನಾನು ಬಿಜೆಪಿ ಸೇರುತ್ತಿದ್ದೇನೆ’ ಎಂದು ಹೇಳಿದರು.</p>.<p>‘ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಗುಜರಾತ್ನ ಬುಡಕಟ್ಟು ಪ್ರದೇಶಗಳು ಅಭಿವೃದ್ಧಿ ಕಂಡಿವೆ ಎಂದು ನಾನು ಬಲವಾಗಿ ನಂಬುತ್ತೇನೆ. ಆದ್ದರಿಂದ ನಾನು ಬಿಜೆಪಿಗೆ ಸೇರಿದ್ದೇನೆ’ ಎಂದು ಅಶ್ವಿನ್ ತಿಳಿಸಿದರು.</p>.<p>ಅಶ್ವಿನ್ ಅವರು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರಿದರು. ಅಲ್ಲದೇಖೇದ್ಬ್ರಹ್ಮ ಕ್ಷೇತ್ರದ ಶಾಸಕ ಸ್ಥಾನಕ್ಕೂರಾಜೀನಾಮೆ ನೀಡಿದರು.</p>.<p>ಈ ವರ್ಷಾಂತ್ಯದಲ್ಲಿ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಅಶ್ವಿನ್ ಅವರ ಈ ನಡೆ ಕಾಂಗ್ರೆಸ್ ಪಕ್ಷಕ್ಕೆ ಆಘಾತ ನೀಡಿದೆ. ಅಶ್ವಿನ್ ಅವರು ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಒಟ್ಟು ಮೂರು ಬಾರಿ ಶಾಸಕರಾಗಿ ಆರಿಸಿ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>