<div dir="ltr"><span style="font-size:large;">ಅಹಮದಾಬಾದ್: ಪೊಲೀಸರ ಅನುಮತಿ ಪಡೆಯದೇ ಸಾರ್ವಜನಿಕ ರ್ಯಾಲಿಯೊಂದನ್ನು ಮುನ್ನಡೆಸಿದ ಪ್ರಕರಣದಲ್ಲಿ ಗುಜರಾತ್ನ ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಜನರನ್ನು ಮೆಹ್ಸಾನಾ ಸೆಷನ್ಸ್ ನ್ಯಾಯಾಲಯವು ಬುಧವಾರ ಖುಲಾಸೆಗೊಳಿಸಿತು.</span></div>.<div dir="ltr"><span style="font-size:large;">ಇದಕ್ಕೂ ಮೊದಲು ಈ ಪ್ರಕರಣದ ವಿಚಾರಣೆ ನಡೆಸಿ ಆದೇಶ ನೀಡಿದ್ದ ಸ್ಥಳೀಯ ನ್ಯಾಯಾಲಯವು ಮೇವಾನಿ ಮತ್ತು ಇತರರು ದೋಷಿ ಘೋಷಿಸಿ</span><span style="font-size:large;">, ಮೂರು ವರ್ಷಗಳ ಸಜೆ ವಿಧಿಸಿತ್ತು. ಈ ಆದೇಶವನ್ನು ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣವು ಆಧಾರರಹಿತವಾಗಿದೆ ಎಂದು ಹೇಳಿದೆ.</span></div>.<div dir="ltr"><span style="font-size:large;">ಸೆಷನ್ಸ್ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಟ್ವೀಟ್ ಮಾಡಿರುವ ಮೇವಾನಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಡಿ ವಿಮರ್ಶೆ, ಚರ್ಚೆ ಮತ್ತು ವಾದಮಂಡನೆಗೆ ಇರುವ ಅವಕಾಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ ಮತ್ತು ನಮ್ಮ ಮೇಲೆ ದಾಖಲಿಸಲಾಗಿದ್ದ ಪ್ರಕರಣವನ್ನು ಆಧಾರರಹಿತ ಎಂದು ಹೇಳಿದೆ’ ಎಂದಿದ್ದಾರೆ.<br />ಮೇವಾನಿ ನೇತೃತ್ವದ ‘ರಾಷ್ಟ್ರೀಯ ದಲಿತ್ ಅಧಿಕಾರ ಮಂಚ’ ಎಂಬ ಹೆಸರಿನ ಸಂಘಟನೆಯು 2017ರ ಜುಲೈ 12ರಂದು ‘ಆಜದಿ ಕೂಚ್’ ಎಂಬ ರ್ಯಾಲಿ ಕೈಗೊಂಡಿತ್ತು. ಈ ರ್ಯಾಲಿಗೆ ಸ್ಥಳೀಯ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೂ ಆಯೋಜಕರು ಈ ರ್ಯಾಲಿ ನಡೆಸಿದ್ದರು. ಈ ಕಾರಣಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 ಅಡಿ (ಕಾನೂನು ಬಾಹಿರವಾಗಿ ಗುಂಪು ಸೇರುವಿಕೆ) 10 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><span style="font-size:large;">ಅಹಮದಾಬಾದ್: ಪೊಲೀಸರ ಅನುಮತಿ ಪಡೆಯದೇ ಸಾರ್ವಜನಿಕ ರ್ಯಾಲಿಯೊಂದನ್ನು ಮುನ್ನಡೆಸಿದ ಪ್ರಕರಣದಲ್ಲಿ ಗುಜರಾತ್ನ ಕಾಂಗ್ರೆಸ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಜನರನ್ನು ಮೆಹ್ಸಾನಾ ಸೆಷನ್ಸ್ ನ್ಯಾಯಾಲಯವು ಬುಧವಾರ ಖುಲಾಸೆಗೊಳಿಸಿತು.</span></div>.<div dir="ltr"><span style="font-size:large;">ಇದಕ್ಕೂ ಮೊದಲು ಈ ಪ್ರಕರಣದ ವಿಚಾರಣೆ ನಡೆಸಿ ಆದೇಶ ನೀಡಿದ್ದ ಸ್ಥಳೀಯ ನ್ಯಾಯಾಲಯವು ಮೇವಾನಿ ಮತ್ತು ಇತರರು ದೋಷಿ ಘೋಷಿಸಿ</span><span style="font-size:large;">, ಮೂರು ವರ್ಷಗಳ ಸಜೆ ವಿಧಿಸಿತ್ತು. ಈ ಆದೇಶವನ್ನು ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣವು ಆಧಾರರಹಿತವಾಗಿದೆ ಎಂದು ಹೇಳಿದೆ.</span></div>.<div dir="ltr"><span style="font-size:large;">ಸೆಷನ್ಸ್ ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಟ್ವೀಟ್ ಮಾಡಿರುವ ಮೇವಾನಿ, ‘ಪ್ರಜಾಪ್ರಭುತ್ವ ವ್ಯವಸ್ಥೆಯಡಿ ವಿಮರ್ಶೆ, ಚರ್ಚೆ ಮತ್ತು ವಾದಮಂಡನೆಗೆ ಇರುವ ಅವಕಾಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ ಮತ್ತು ನಮ್ಮ ಮೇಲೆ ದಾಖಲಿಸಲಾಗಿದ್ದ ಪ್ರಕರಣವನ್ನು ಆಧಾರರಹಿತ ಎಂದು ಹೇಳಿದೆ’ ಎಂದಿದ್ದಾರೆ.<br />ಮೇವಾನಿ ನೇತೃತ್ವದ ‘ರಾಷ್ಟ್ರೀಯ ದಲಿತ್ ಅಧಿಕಾರ ಮಂಚ’ ಎಂಬ ಹೆಸರಿನ ಸಂಘಟನೆಯು 2017ರ ಜುಲೈ 12ರಂದು ‘ಆಜದಿ ಕೂಚ್’ ಎಂಬ ರ್ಯಾಲಿ ಕೈಗೊಂಡಿತ್ತು. ಈ ರ್ಯಾಲಿಗೆ ಸ್ಥಳೀಯ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೂ ಆಯೋಜಕರು ಈ ರ್ಯಾಲಿ ನಡೆಸಿದ್ದರು. ಈ ಕಾರಣಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 ಅಡಿ (ಕಾನೂನು ಬಾಹಿರವಾಗಿ ಗುಂಪು ಸೇರುವಿಕೆ) 10 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>