<p><strong>ಪೋರಬಂದರ್</strong>: ಪೊಲೀಸ್ ವಶದಲ್ಲಿದ್ದ ವ್ಯಕ್ತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತ್ನ ಪೋರಬಂದರ್ ನ್ಯಾಯಾಲಯ ಖುಲಾಸೆಗೊಳಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಮುಖೇಶ್ ಪಾಂಡ್ಯ, ‘ಅಪರಾಧ ಒಪ್ಪಿಕೊಳ್ಳುವಂತೆ ದೂರುದಾರನನ್ನು ಬಲವಂತಪಡಿಸಲಾಗಿದೆ ಮತ್ತು ಅಪಾಯಕಾರಿ ಆಯುಧಗಳಿಂದ ಘಾಸಿಗೊಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಆ ಸಮಯದಲ್ಲಿ(1997) ಸಾರ್ವಜನಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿಯನ್ನು(ಸಂಜೀವ್ ಭಟ್) ವಿಚಾರಣೆಗೆ ಒಳಪಡಿಸುವಾಗ ಅಗತ್ಯವಾದ ಮಂಜೂರಾತಿಯನ್ನು ಪಡೆದಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಮನ ಸೆಳೆದಿದೆ.</p><p>‘ಅಪರಾಧವನ್ನು ಒಪ್ಪಿಕೊಳ್ಳುವಂತೆ ನನಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ’ ಎಂದು ನರನ್ ಜಾಧವ್ ಎಂಬ ವ್ಯಕ್ತಿ ನೀಡಿದ್ದ ದೂರನ್ನು ಆಧರಿಸಿ ಸಂಜೀವ್ ಭಟ್ ಮತ್ತು ಪೊಲೀಸ್ ಇನ್ಸ್ಸ್ಪೆಕ್ಟರ್ ವಜುಭಾಯಿ ಚೌ ಅವರ ವಿರುದ್ಧ ಆಗ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೋರಬಂದರ್</strong>: ಪೊಲೀಸ್ ವಶದಲ್ಲಿದ್ದ ವ್ಯಕ್ತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತ್ನ ಪೋರಬಂದರ್ ನ್ಯಾಯಾಲಯ ಖುಲಾಸೆಗೊಳಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಮುಖೇಶ್ ಪಾಂಡ್ಯ, ‘ಅಪರಾಧ ಒಪ್ಪಿಕೊಳ್ಳುವಂತೆ ದೂರುದಾರನನ್ನು ಬಲವಂತಪಡಿಸಲಾಗಿದೆ ಮತ್ತು ಅಪಾಯಕಾರಿ ಆಯುಧಗಳಿಂದ ಘಾಸಿಗೊಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಆ ಸಮಯದಲ್ಲಿ(1997) ಸಾರ್ವಜನಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿಯನ್ನು(ಸಂಜೀವ್ ಭಟ್) ವಿಚಾರಣೆಗೆ ಒಳಪಡಿಸುವಾಗ ಅಗತ್ಯವಾದ ಮಂಜೂರಾತಿಯನ್ನು ಪಡೆದಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಮನ ಸೆಳೆದಿದೆ.</p><p>‘ಅಪರಾಧವನ್ನು ಒಪ್ಪಿಕೊಳ್ಳುವಂತೆ ನನಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ’ ಎಂದು ನರನ್ ಜಾಧವ್ ಎಂಬ ವ್ಯಕ್ತಿ ನೀಡಿದ್ದ ದೂರನ್ನು ಆಧರಿಸಿ ಸಂಜೀವ್ ಭಟ್ ಮತ್ತು ಪೊಲೀಸ್ ಇನ್ಸ್ಸ್ಪೆಕ್ಟರ್ ವಜುಭಾಯಿ ಚೌ ಅವರ ವಿರುದ್ಧ ಆಗ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>