2002ರ ಗುಜರಾತ್ ಗಲಭೆ ಪ್ರಕರಣ ಗಳಲ್ಲಿ ಮುಗ್ಧ ಜನರನ್ನು ಸಿಲುಕಿಸುವುದಕ್ಕಾಗಿ ದಾಖಲೆಗಳನ್ನು ತಿರುಚಿದ ಮತ್ತು ಅಪರಾಧ ಒಳಸಂಚು ನಡೆಸಿದ ಆರೋಪದಲ್ಲಿ ತೀಸ್ತಾ, ಮಾಜಿ ಐಪಿಎಸ್ ಅಧಿಕಾರಿಗಳಾದ ಆರ್.ಬಿ. ಶ್ರೀಕುಮಾರ್ ಮತ್ತು ಸಂಜೀವ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 2002ರ ಗೋಧ್ರೋತ್ತರ ಗಲಭೆ ಪ್ರಕರಣದಲ್ಲಿ, ಆಗ ಗುಜರಾತ್ ಮುಖ್ಯ ಮಂತ್ರಿಯಾಗಿದ್ದ ನರೇಂದ್ರ ಮೋದಿ ಮತ್ತು ಇತರರನ್ನು ವಿಶೇಷ ತನಿಖಾ ತಂಡವು (ಎಸ್ಐಟಿ) ಆರೋಪಮುಕ್ತ ಗೊಳಿಸಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಮರುದಿನ ತೀಸ್ತಾ ಅವರ ಬಂಧನವಾಗಿತ್ತು.