ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿ ಯಾದವ್‌ಗೆ ಕೋರ್ಟ್‌ ಸಮನ್ಸ್‌

ಮಾನಹಾನಿ ಪ್ರಕರಣ: ಸೆ.22ರಂದು ವಿಚಾರಣೆಗೆ ಹಾಜರಾಗಲು ಸೂಚನೆ
Published 28 ಆಗಸ್ಟ್ 2023, 15:52 IST
Last Updated 28 ಆಗಸ್ಟ್ 2023, 15:52 IST
ಅಕ್ಷರ ಗಾತ್ರ

ಅಹಮದಾಬಾದ್‌: ಮಾನಹಾನಿ ಪ್ರಕರಣದಲ್ಲಿ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರಿಗೆ ಇಲ್ಲಿನ ಮೆಟ್ರೊಪಾಲಿಟನ್ ಕೋರ್ಟ್‌ ಸೋಮವಾರ ಸಮನ್ಸ್‌ ಜಾರಿ ಮಾಡಿದೆ.

ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಡಿ.ಜೆ.ಪಾರ್ಮರ್‌ ಅವರು, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 499 ಮತ್ತು 500ರ ಅಡಿಯಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣದ ವಿಚಾರಣೆಗೆ ಸೆ.22ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ಸೂಚಿಸಿದ್ದಾರೆ.

ತೇಜಸ್ವಿ ಯಾದವ್‌ ಅವರು ಮಾರ್ಚ್‌ 21ರಂದು ಪಟ್ನಾದಲ್ಲಿ ಮಾಧ್ಯಮಗಳ ಎದುರು, ‘ಸದ್ಯದ ಸನ್ನಿವೇಶದಲ್ಲಿ ಗುಜರಾತಿಗಳು ಮಾತ್ರ ವಂಚಕರು’ ಎಂದಿದ್ದಾರೆ. ಈ ಮೂಲಕ ಗುಜರಾತ್ ಜನರನ್ನು ಅವಮಾನಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಹರೇಶ್‌ ಮೆಹ್ತಾ ಎಂಬವರು ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT