<p class="title"><strong>ಅಹಮದಾಬಾದ್:</strong> ಸುಮಾರು 200 ಮಂದಿ ಗಾಯಗೊಂಡು 56 ಮಂದಿ ಮೃತಪಟ್ಟ 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 28 ಮಂದಿಯನ್ನು ಖುಲಾಸೆಗೊಳಿಸಿದ ವಿಶೇಷ ನಿಯೋಜಿತ ನ್ಯಾಯಾಲಯ 49 ಮಂದಿಯನ್ನು ತಪ್ಪಿತಸ್ಥರೆಂದು ಮಂಗಳವಾರ ತೀರ್ಪು ನೀಡಿದೆ.</p>.<p class="title">ಶಿಕ್ಷೆಯನ್ನು ಪ್ರಕಟಿಸುವ ಮುನ್ನ ನ್ಯಾಯಾಲಯವು ಬುಧವಾರ ತಪ್ಪಿತಸ್ಥರ ಮನವಿಯನ್ನು ಆಲಿಸಲಿದೆ.</p>.<p class="title">ವರ್ಚುವಲ್ ಮೂಲಕ ವಿಚಾರಣೆ ನಡೆಸಿದ ವಿಶೇಷ ನಿಯೋಜಿತ ನ್ಯಾಯಾಧೀಶ ಅಂಬಾಲಾಲ್ ಆರ್.ಪಟೇಲ್ ತೀರ್ಪು ನೀಡಿದ್ದಾರೆ.302 (ಕೊಲೆ), 307 (ಕೊಲೆಗೆ ಯತ್ನ), ದೇಶದ್ರೋಹ, (124-A), ಧಾರ್ಮಿಕ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (153-A) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ವಿವಿಧ ಸೆಕ್ಷನ್ಗಳಡಿಯಲ್ಲಿ 49 ಮಂದಿಯನ್ನು ತಪ್ಪಿತಸ್ಥರೆಂದು ಉಲ್ಲೇಖಿಸಿದ್ದಾರೆ.</p>.<p class="title">ಸಾಕ್ಷ್ಯಾಧಾರಗಳ ಕೊರತೆಯಿಂದ ಉಳಿದ 28 ಮಂದಿಯನ್ನು ಖುಲಾಸೆಗೊಳಿಸಲಾಗಿದೆ.</p>.<p class="title">2008ರ ಜುಲೈ 26 ರಂದು ಅಹಮದಾಬಾದ್ನಲ್ಲಿ ಏಕಕಾಲದಲ್ಲಿ ನಡೆದ ಬಾಂಬ್ ಸ್ಫೋಟಗಳಲ್ಲಿ 56 ಜನರು ಸಾವನ್ನಪ್ಪಿದರು. 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಘಟನೆ ಸಂಬಂಧ ಪೊಲೀಸರು ಅಹಮದಾಬಾದ್ನಲ್ಲಿ 20 ಎಫ್ಐಆರ್ ದಾಖಲಿಸಿದ್ದರು. ಸೂರತ್ನ ವಿವಿಧ ಸ್ಥಳಗಳಲ್ಲಿ ಬಾಂಬ್ ಪತ್ತೆಯಾಗಿದ್ದವು. ಈ ಸಂಬಂಧ 15 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಎರಡು ಪ್ರಕರಣಗಳನ್ನು ತನಿಖೆ ನಡೆಸಿದ್ದ ಪೊಲೀಸರು ಇದು ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆ ಕೃತ್ಯ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಹಮದಾಬಾದ್:</strong> ಸುಮಾರು 200 ಮಂದಿ ಗಾಯಗೊಂಡು 56 ಮಂದಿ ಮೃತಪಟ್ಟ 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 28 ಮಂದಿಯನ್ನು ಖುಲಾಸೆಗೊಳಿಸಿದ ವಿಶೇಷ ನಿಯೋಜಿತ ನ್ಯಾಯಾಲಯ 49 ಮಂದಿಯನ್ನು ತಪ್ಪಿತಸ್ಥರೆಂದು ಮಂಗಳವಾರ ತೀರ್ಪು ನೀಡಿದೆ.</p>.<p class="title">ಶಿಕ್ಷೆಯನ್ನು ಪ್ರಕಟಿಸುವ ಮುನ್ನ ನ್ಯಾಯಾಲಯವು ಬುಧವಾರ ತಪ್ಪಿತಸ್ಥರ ಮನವಿಯನ್ನು ಆಲಿಸಲಿದೆ.</p>.<p class="title">ವರ್ಚುವಲ್ ಮೂಲಕ ವಿಚಾರಣೆ ನಡೆಸಿದ ವಿಶೇಷ ನಿಯೋಜಿತ ನ್ಯಾಯಾಧೀಶ ಅಂಬಾಲಾಲ್ ಆರ್.ಪಟೇಲ್ ತೀರ್ಪು ನೀಡಿದ್ದಾರೆ.302 (ಕೊಲೆ), 307 (ಕೊಲೆಗೆ ಯತ್ನ), ದೇಶದ್ರೋಹ, (124-A), ಧಾರ್ಮಿಕ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (153-A) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ವಿವಿಧ ಸೆಕ್ಷನ್ಗಳಡಿಯಲ್ಲಿ 49 ಮಂದಿಯನ್ನು ತಪ್ಪಿತಸ್ಥರೆಂದು ಉಲ್ಲೇಖಿಸಿದ್ದಾರೆ.</p>.<p class="title">ಸಾಕ್ಷ್ಯಾಧಾರಗಳ ಕೊರತೆಯಿಂದ ಉಳಿದ 28 ಮಂದಿಯನ್ನು ಖುಲಾಸೆಗೊಳಿಸಲಾಗಿದೆ.</p>.<p class="title">2008ರ ಜುಲೈ 26 ರಂದು ಅಹಮದಾಬಾದ್ನಲ್ಲಿ ಏಕಕಾಲದಲ್ಲಿ ನಡೆದ ಬಾಂಬ್ ಸ್ಫೋಟಗಳಲ್ಲಿ 56 ಜನರು ಸಾವನ್ನಪ್ಪಿದರು. 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಘಟನೆ ಸಂಬಂಧ ಪೊಲೀಸರು ಅಹಮದಾಬಾದ್ನಲ್ಲಿ 20 ಎಫ್ಐಆರ್ ದಾಖಲಿಸಿದ್ದರು. ಸೂರತ್ನ ವಿವಿಧ ಸ್ಥಳಗಳಲ್ಲಿ ಬಾಂಬ್ ಪತ್ತೆಯಾಗಿದ್ದವು. ಈ ಸಂಬಂಧ 15 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಎರಡು ಪ್ರಕರಣಗಳನ್ನು ತನಿಖೆ ನಡೆಸಿದ್ದ ಪೊಲೀಸರು ಇದು ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆ ಕೃತ್ಯ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>