ಗುಜರಾತ್ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಅವರು, ‘ನಾನು ನಿಮ್ಮ ಸಹೋದರ. ನಿಮ್ಮ ಕುಟುಂಬದ ಸದಸ್ಯ. ನನಗೆ ಒಂದು ಅವಕಾಶ ಕೊಡಿ. ನಾನು ನಿಮಗೆ ಉಚಿತ ವಿದ್ಯುತ್ ಕೊಡುತ್ತೇನೆ, ಶಾಲೆ ಹಾಗೂ ಆಸ್ಪತ್ರೆಗಳನ್ನು ಕಟ್ಟಿಸುತ್ತೇನೆ. ನಿಮ್ಮನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ಕಳುಹಿಸುತ್ತೇನೆ’ ಎಂದು ಹೇಳಿದ್ದಾರೆ.