<p><strong>ಗಾಂಧಿನಗರ</strong>: ಈ ವರ್ಷದ ಜುಲೈನಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಗುಜರಾತ್ ಸರ್ಕಾರ ₹350 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದೆ.</p>.<p>ರಾಜ್ಯದ ಜುನಾಗಢ, ಪೋರಬಂದರ್, ದೇವಭೂಮಿ ದ್ವಾರಕಾ, ರಾಜ್ಕೋಟ್, ಆನಂದ್, ಭರೂಚ್, ಸೂರತ್, ನವಸಾರಿ ಮತ್ತು ತಾಪಿ ಜಿಲ್ಲೆಗಳ 45 ತಾಲ್ಲೂಕುಗಳಲ್ಲಿ ನಷ್ಟ ಮೌಲ್ಯಮಾಪನ ಸಮೀಕ್ಷೆ ನಡೆಸಿದ ಬಳಿಕ ರಾಜ್ಯ ಕೃಷಿ ಸಚಿವ ರಾಘವ್ಜಿ ಪಟೇಲ್ ಅವರು ವಿಧಾನಸಭೆಯಲ್ಲಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ.</p><p>ಜುಲೈ 18 ರಿಂದ 24ರ ನಡುವೆ ಈ ಒಂಬತ್ತು ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಇದರಿಂದಾಗಿ ಸುಮಾರು 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು, ತೋಟಗಾರಿಕೆ ಉತ್ಪನ್ನಗಳು ಮತ್ತು ಹಣ್ಣಿನ ಮರಗಳಿಗೆ ಹಾನಿಯಾಗಿದೆ ಎಂದು ಪಟೇಲ್ ಹೇಳಿದ್ದಾರೆ.</p><p>ಪರಿಹಾರ ಪ್ಯಾಕೇಜ್ ಅಡಿಯಲ್ಲಿ, ಒಟ್ಟು ನೀರಾವರಿ ರಹಿತ ಖಾರಿಫ್ ಬೆಳೆಯಲ್ಲಿ ಶೇ 33 ಅಥವಾ ಅದಕ್ಕಿಂತ ಹೆಚ್ಚಿನ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಎರಡು ಹೆಕ್ಟೇರ್ಗಳ ಮಿತಿಯಲ್ಲಿ ಪ್ರತಿ ಹೆಕ್ಟೇರ್ಗೆ ₹11,000 ಪರಿಹಾರ ನೀಡಲಾಗುತ್ತದೆ. ನೀರಾವರಿ ಪ್ರದೇಶದಲ್ಲಿ ಹಾನಿಯಾದ ಬೆಳೆಗಳಿಗೆ ಎರಡು ಹೆಕ್ಟೇರ್ ಮಿತಿಯಲ್ಲಿ ಪ್ರತಿ ಹೆಕ್ಟೇರ್ಗೆ ₹22 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.</p><p>ವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ಎರಡು ಹೆಕ್ಟೇರ್ ಮಿತಿಯಲ್ಲಿ ಪ್ರತಿ ಹೆಕ್ಟೇರ್ಗೆ ₹22,000 ಪರಿಹಾರವನ್ನು ಸರ್ಕಾರ ನಿಗದಿಪಡಿಸಿದೆ. ಮೂರು ಅಥವಾ ಅದಕ್ಕಿಂತ ಹೆಚ್ಚಿನ ಅವಧಿ ಹೊಂದಿರುವ ದೀರ್ಘಕಾಲಿಕ ತೋಟಗಾರಿಕೆ ಬೆಳೆಗಳ ನಷ್ಟಕ್ಕೆ ಪ್ರತಿ ಹೆಕ್ಟೇರ್ಗೆ ₹22,500 ಪರಿಹಾರ ನೀಡಲಾಗುತ್ತದೆ ಎಂದು ಪಟೇಲ್ ತಿಳಿಸಿದ್ದಾರೆ.</p><p>ಬಹುವಾರ್ಷಿಕ ವರ್ಗದ ಹಣ್ಣಿನ ಮರಗಳು ಸಂಪೂರ್ಣ ಹಾನಿಯಾದರೆ ಅಥವಾ ಬೇರುಸಹಿತ ಕಿತ್ತು ಹೋದರೆ, ಶೇ 33ಕ್ಕಿಂತ ಹೆಚ್ಚು ಮರಗಳು ಹಾನಿಗೊಳಗಾದರೆ ರೈತರು ಪ್ರತಿ ಹೆಕ್ಟೇರ್ಗೆ ₹1.02 ಲಕ್ಷ ಹೆಚ್ಚುವರಿ ಪರಿಹಾರವನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ</strong>: ಈ ವರ್ಷದ ಜುಲೈನಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಗುಜರಾತ್ ಸರ್ಕಾರ ₹350 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದೆ.</p>.<p>ರಾಜ್ಯದ ಜುನಾಗಢ, ಪೋರಬಂದರ್, ದೇವಭೂಮಿ ದ್ವಾರಕಾ, ರಾಜ್ಕೋಟ್, ಆನಂದ್, ಭರೂಚ್, ಸೂರತ್, ನವಸಾರಿ ಮತ್ತು ತಾಪಿ ಜಿಲ್ಲೆಗಳ 45 ತಾಲ್ಲೂಕುಗಳಲ್ಲಿ ನಷ್ಟ ಮೌಲ್ಯಮಾಪನ ಸಮೀಕ್ಷೆ ನಡೆಸಿದ ಬಳಿಕ ರಾಜ್ಯ ಕೃಷಿ ಸಚಿವ ರಾಘವ್ಜಿ ಪಟೇಲ್ ಅವರು ವಿಧಾನಸಭೆಯಲ್ಲಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ.</p><p>ಜುಲೈ 18 ರಿಂದ 24ರ ನಡುವೆ ಈ ಒಂಬತ್ತು ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಇದರಿಂದಾಗಿ ಸುಮಾರು 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು, ತೋಟಗಾರಿಕೆ ಉತ್ಪನ್ನಗಳು ಮತ್ತು ಹಣ್ಣಿನ ಮರಗಳಿಗೆ ಹಾನಿಯಾಗಿದೆ ಎಂದು ಪಟೇಲ್ ಹೇಳಿದ್ದಾರೆ.</p><p>ಪರಿಹಾರ ಪ್ಯಾಕೇಜ್ ಅಡಿಯಲ್ಲಿ, ಒಟ್ಟು ನೀರಾವರಿ ರಹಿತ ಖಾರಿಫ್ ಬೆಳೆಯಲ್ಲಿ ಶೇ 33 ಅಥವಾ ಅದಕ್ಕಿಂತ ಹೆಚ್ಚಿನ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಎರಡು ಹೆಕ್ಟೇರ್ಗಳ ಮಿತಿಯಲ್ಲಿ ಪ್ರತಿ ಹೆಕ್ಟೇರ್ಗೆ ₹11,000 ಪರಿಹಾರ ನೀಡಲಾಗುತ್ತದೆ. ನೀರಾವರಿ ಪ್ರದೇಶದಲ್ಲಿ ಹಾನಿಯಾದ ಬೆಳೆಗಳಿಗೆ ಎರಡು ಹೆಕ್ಟೇರ್ ಮಿತಿಯಲ್ಲಿ ಪ್ರತಿ ಹೆಕ್ಟೇರ್ಗೆ ₹22 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.</p><p>ವಾರ್ಷಿಕ ತೋಟಗಾರಿಕೆ ಬೆಳೆಗಳಿಗೆ ಎರಡು ಹೆಕ್ಟೇರ್ ಮಿತಿಯಲ್ಲಿ ಪ್ರತಿ ಹೆಕ್ಟೇರ್ಗೆ ₹22,000 ಪರಿಹಾರವನ್ನು ಸರ್ಕಾರ ನಿಗದಿಪಡಿಸಿದೆ. ಮೂರು ಅಥವಾ ಅದಕ್ಕಿಂತ ಹೆಚ್ಚಿನ ಅವಧಿ ಹೊಂದಿರುವ ದೀರ್ಘಕಾಲಿಕ ತೋಟಗಾರಿಕೆ ಬೆಳೆಗಳ ನಷ್ಟಕ್ಕೆ ಪ್ರತಿ ಹೆಕ್ಟೇರ್ಗೆ ₹22,500 ಪರಿಹಾರ ನೀಡಲಾಗುತ್ತದೆ ಎಂದು ಪಟೇಲ್ ತಿಳಿಸಿದ್ದಾರೆ.</p><p>ಬಹುವಾರ್ಷಿಕ ವರ್ಗದ ಹಣ್ಣಿನ ಮರಗಳು ಸಂಪೂರ್ಣ ಹಾನಿಯಾದರೆ ಅಥವಾ ಬೇರುಸಹಿತ ಕಿತ್ತು ಹೋದರೆ, ಶೇ 33ಕ್ಕಿಂತ ಹೆಚ್ಚು ಮರಗಳು ಹಾನಿಗೊಳಗಾದರೆ ರೈತರು ಪ್ರತಿ ಹೆಕ್ಟೇರ್ಗೆ ₹1.02 ಲಕ್ಷ ಹೆಚ್ಚುವರಿ ಪರಿಹಾರವನ್ನು ಪಡೆಯುತ್ತಾರೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>