ಅಹಮದಾಬಾದ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.27ರವರೆಗೆ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸದಂತೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಸರ್ಕಾರದ ನಿರ್ಧಾರ ಖಂಡಿಸಿ ಟ್ವೀಟ್ ಮಾಡಿರುವಎಐಎಂಐಎಂ ಮುಖ್ಯಸ್ಥ ಒವೈಸಿ, ‘2021ರಲ್ಲಿ ಗುಜರಾತ್ನಲ್ಲಿ 15,200 ರಸ್ತೆ ಅಪಘಾತವಾಗಿದ್ದು, 7,457 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಜೆಪಿ ಗುಜರಾತ್ ಸರ್ಕಾರದ ‘ಉಚಿತ’ ಕೊಡುಗೆ ಜನರ ಜೀವನವನ್ನು ಅಪಾಯಕ್ಕೆ ತಳ್ಳುತ್ತಿದೆ’ ಎಂದು ಹೇಳಿದ್ದಾರೆ.