‘ಇದಲ್ಲದೆ, ಅನೇಕ ಸಂದರ್ಭಗಳಲ್ಲಿ ಅರ್ಜಿದಾರರು ಮತ್ತು ಸ್ವಾಯತ್ತ ಸಂಸ್ಥೆಗಳ ಪ್ರತಿನಿಧಿಗಳು, ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರವಾಗಲು ಪೂರ್ವಾನುಮತಿ ಅಗತ್ಯವಿಲ್ಲವೆಂದು ಪ್ರತಿಪಾದಿಸಿದ್ದಾರೆ. ಸಿಖ್, ಜೈನ ಮತ್ತು ಬೌದ್ಧ ಧರ್ಮಗಳನ್ನು ಹಿಂದೂ ಧರ್ಮದಲ್ಲಿ ಸೇರಿಸಲಾಗಿದೆ ಎಂದು ಸಂವಿಧಾನದ 25 (2)ನೇ ವಿಧಿಯನ್ನು ಉಲ್ಲೇಖಿಸಿ, ಪೂರ್ವಾನುಮತಿಯ ಅಗತ್ಯವಿಲ್ಲವೆಂದು ಸಂಬಂಧಪಟ್ಟ ಕಚೇರಿಗಳು ಅರ್ಜಿಗಳನ್ನು ವಿಲೇವಾರಿ ಮಾಡುತ್ತಿವೆ. ಧಾರ್ಮಿಕ ಮತಾಂತರದಂತಹ ಸೂಕ್ಷ್ಮ ಪ್ರಕರಣಗಳಲ್ಲಿ ಕಾನೂನಿನ ನಿಬಂಧನೆಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ, ಈ ರೀತಿಯಾಗಿ ಪ್ರತಿಕ್ರಿಯಿಸುವುದು ಕಾನೂನು ಸಮರಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಸ್ಪಷ್ಟೀಕರಣ ನೀಡಲಾಗಿದೆ’ ಎಂದು ಅಧಿಸೂಚನೆಯಲ್ಲಿ ಹೇಳಿದೆ.