<p><strong>ಅಹಮದಾಬಾದ್</strong>: ಜುನಾಗಢದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 8ರಿಂದ 10 ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಥಳಿಸಿದ ಪ್ರಕರಣ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿಗೊಳಿಸಿದೆ.</p><p>ಈ ಕುರಿತು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಜೆ. ದೇಸಾಯಿ ಮತ್ತು ನ್ಯಾಯಮೂರ್ತಿ ಬಿರೆನ್ ವೈಷ್ಣವ್ ಅವರಿದ್ದ ವಿಭಾಗೀಯ ಪೀಠವು ತ್ವರಿತವಾಗಿ ಅರ್ಜಿಯ ವಿಚಾರಣೆಗೆ ನಿರಾಕರಿಸಿತು. </p>.<p>‘ಪೊಲೀಸರ ವಿರುದ್ಧ ಸಂತ್ರಸ್ತರು ದೂರು ಸಲ್ಲಿಸಿದ್ದು, ಅದನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ. ಹಾಗಾಗಿ, ತ್ವರಿತವಾಗಿ ಅರ್ಜಿಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಅರ್ಜಿದಾರರ ಪರ ವಕೀಲ ಎ.ಜೆ. ಯಾಗ್ನಿಕ್ ಕೋರಿದರು. ಆದರೆ, ಈ ಮನವಿಯನ್ನು ಪೀಠವು ಪುರಸ್ಕರಿಸಲಿಲ್ಲ.</p>.<p>ಜೂನ್ 16ರಂದು ಜುನಾಗಢದ ಗಲಭೆಗೆ ಸಂಬಂಧಿಸಿದಂತೆ ಅಲ್ಲಿನ ಹಜರತ್ ಗೆಬಾನ್ಶಾ ಪಿರ್ ದರ್ಗಾದ ಮುಂಭಾಗ ಸಂತ್ರಸ್ತರನ್ನು ಸಾಲಾಗಿ ನಿಲ್ಲಿಸಿ ಪೊಲೀಸರು ಥಳಿಸಿದ್ದರು. ಈ ಕುರಿತ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಜುನಾಗಢದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 8ರಿಂದ 10 ವ್ಯಕ್ತಿಗಳನ್ನು ಸಾರ್ವಜನಿಕವಾಗಿ ಥಳಿಸಿದ ಪ್ರಕರಣ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಬುಧವಾರ ನೋಟಿಸ್ ಜಾರಿಗೊಳಿಸಿದೆ.</p><p>ಈ ಕುರಿತು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಜೆ. ದೇಸಾಯಿ ಮತ್ತು ನ್ಯಾಯಮೂರ್ತಿ ಬಿರೆನ್ ವೈಷ್ಣವ್ ಅವರಿದ್ದ ವಿಭಾಗೀಯ ಪೀಠವು ತ್ವರಿತವಾಗಿ ಅರ್ಜಿಯ ವಿಚಾರಣೆಗೆ ನಿರಾಕರಿಸಿತು. </p>.<p>‘ಪೊಲೀಸರ ವಿರುದ್ಧ ಸಂತ್ರಸ್ತರು ದೂರು ಸಲ್ಲಿಸಿದ್ದು, ಅದನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ. ಹಾಗಾಗಿ, ತ್ವರಿತವಾಗಿ ಅರ್ಜಿಯನ್ನು ಕೈಗೆತ್ತಿಕೊಳ್ಳಬೇಕು’ ಎಂದು ಅರ್ಜಿದಾರರ ಪರ ವಕೀಲ ಎ.ಜೆ. ಯಾಗ್ನಿಕ್ ಕೋರಿದರು. ಆದರೆ, ಈ ಮನವಿಯನ್ನು ಪೀಠವು ಪುರಸ್ಕರಿಸಲಿಲ್ಲ.</p>.<p>ಜೂನ್ 16ರಂದು ಜುನಾಗಢದ ಗಲಭೆಗೆ ಸಂಬಂಧಿಸಿದಂತೆ ಅಲ್ಲಿನ ಹಜರತ್ ಗೆಬಾನ್ಶಾ ಪಿರ್ ದರ್ಗಾದ ಮುಂಭಾಗ ಸಂತ್ರಸ್ತರನ್ನು ಸಾಲಾಗಿ ನಿಲ್ಲಿಸಿ ಪೊಲೀಸರು ಥಳಿಸಿದ್ದರು. ಈ ಕುರಿತ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>