ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್‌ ನ್ಯಾಯಮೂರ್ತಿ

ಮಾನನಷ್ಟ ಮೊಕದ್ದಮೆ: ಶಿಕ್ಷೆ ರದ್ದತಿ ಕೋರಿ ಅರ್ಜಿ
Published 27 ಏಪ್ರಿಲ್ 2023, 4:21 IST
Last Updated 27 ಏಪ್ರಿಲ್ 2023, 4:21 IST
ಅಕ್ಷರ ಗಾತ್ರ

ಅಹಮದಾಬಾದ್: ಮಾನನಷ್ಟ ಮೊಕದ್ದಮೆಯೊಂದರಲ್ಲಿ ಸೂರತ್‌ನ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿ ಗೀತಾ ಗೋಪಿ ಅವರು ಬುಧವಾರ ಹಿಂದೆ ಸರಿದರು.

ಅರ್ಜಿ ವಿಚಾರಣೆಯನ್ನು ಬೇರೆ ನ್ಯಾಯಪೀಠಕ್ಕೆ ವಹಿಸುವುದಕ್ಕಾಗಿ ಮುಖ್ಯ ನ್ಯಾಯಮೂರ್ತಿ ಅವರಿಗೆ ಈ ಅರ್ಜಿಯನ್ನು ಮರಳಿಸುವಂತೆ ಅವರು ನ್ಯಾಯಾಲಯದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಚಾರಣೆಯಿಂದ ಹಿಂದೆ ಸರಿಯುವುದಕ್ಕೆ ಅವರು ಯಾವುದೇ ಕಾರಣ ನೀಡಿಲ್ಲ.

ಇದಕ್ಕೂ ಮುನ್ನ, ನ್ಯಾಯಮೂರ್ತಿ ಗೀತಾ ಗೋಪಿ ಅವರಿದ್ದ ನ್ಯಾಯಪೀಠದ ಮುಂದೆ ವಾದ ಮಂಡಿಸಿದ ರಾಹುಲ್‌ ಗಾಂಧಿ ಪರ ವಕೀಲ ಪಿ.ಎಸ್‌.ಚಂಪಾನೇರಿ, ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದರು.

ಇದಕ್ಕೆ ಸಹಾಯಕ ಸರ್ಕಾರಿ ವಕೀಲರು ವಿರೋಧ ವ್ಯಕ್ತಪಡಿಸಿದರು. ಆಗ ಪ್ರತಿಕ್ರಿಯಿಸಿದ ವಕೀಲ ಚಂಪಾನೇರಿ, ‘ಇದು ಖಾಸಗಿ ದೂರು. ರಾಜ್ಯ ಸರ್ಕಾರಕ್ಕೂ ಇದಕ್ಕೂ ಏನೂ ಸಂಬಂಧ ಇಲ್ಲ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು’ ಎಂದು ಕೋರಿದರು.

ಎರಡೂ ಕಡೆಯವರ ಮಾತುಗಳನ್ನು ಆಲಿಸಿದ ನ್ಯಾಯಮೂರ್ತಿ ಗೀತಾ ಗೋಪಿ ಅವರು, ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT