<p><strong>ಅಹಮದಾಬಾದ್:</strong> ಅಹಮದಾಬಾದ್ ಪೊಲೀಸ್ ಕಮಿಷನರ್ ಮೇಲಿಂದ ಮೇಲೆ ಸಿಆರ್ಪಿಸಿ ಸೆಕ್ಷನ್ 144 ಹಾಗೂ ಗುಜರಾತ್ ಪೊಲೀಸ್ ಕಾಯ್ದೆಯ ಸೆಕ್ಷನ್ 37 ಜಾರಿಗೊಳಿಸಿ ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಗುಜರಾತ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.</p>.<p>ಈ ಸೆಕ್ಷನ್ಗಳು, ಪೊಲೀಸರ ಅನುಮತಿ ಇಲ್ಲದೆಯೇ ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸುತ್ತve.</p>.<p>‘ನಾಗರಿಕ ಸಂಘಟನೆಗಳು ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ಮುಂದಾದ ವೇಳೆ, ಈ ಸೆಕ್ಷನ್ಗಳನ್ನು ಜಾರಿಗೊಳಿಸುವ ಮೂಲಕ ಅನುಮತಿ ನಿರಾಕರಿಸುವ ಏಕೈಕ ವಿಧಾನವನ್ನು ಅಹಮದಾಬಾದ್ ಪೊಲೀಸರು ಬಳಸುತ್ತಿದ್ದಾರೆ’ ಎಂದು ನ್ಯಾಯಮೂರ್ತಿ ಎಂ.ಆರ್.ಮೆಂಗ್ಡೆ ಅವರು ಡಿಸೆಂಬರ್ 4ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಈ ಸೆಕ್ಷನ್ ಅಡಿ ಅಹಮದಾಬಾದ್ ಪೊಲೀಸ್ ಹೊರಡಿಸಿರುವ ಎಲ್ಲ ಅಧಿಸೂಚನೆಗಳನ್ನು ರದ್ದು ಮಾಡಿರುವ ನ್ಯಾಯಮೂರ್ತಿ ಮೆಂಗ್ಡೆ, ಇಂತಹ ಕ್ರಮ ಕೈಗೊಳ್ಳುವ ವೇಳೆ ಪೊಲೀಸರು ನಿಯಮಗಳ ಪಾಲನೆ ಮಾಡಿಲ್ಲ ಎಂದು ಹೇಳಿದ್ದಾರೆ.</p>.<p>ಐಐಎಂ–ಅಹಮದಾಬಾದ್ನ ಪ್ರಾಧ್ಯಾಪಕರಾದ ನವದೀಪ್ ಮಾಥೂರ್, ಅಂಕುರ್ ಸರಿನ್, ಅಹಮದಾಬಾದ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ರಾಘವನ್ ರಾಜನ್, ಉದ್ಯಮಿಗಳಾದ ಅರ್ಚನಾ ಶಾ, ಸಂಜೀವ್ ಶಾ ಹಾಗೂ ಇತರರು ಈ ಕುರಿತು ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿದಾರರು ಈ ಹಿಂದೆ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟಿಸಲು ಉದ್ದೇಶಿಸಿದ್ದರು. ಅದಕ್ಕೆ ಅಹಮದಾಬಾದ್ ಪೊಲೀಸರು ಅನುಮತಿ ನೀಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಅಹಮದಾಬಾದ್ ಪೊಲೀಸ್ ಕಮಿಷನರ್ ಮೇಲಿಂದ ಮೇಲೆ ಸಿಆರ್ಪಿಸಿ ಸೆಕ್ಷನ್ 144 ಹಾಗೂ ಗುಜರಾತ್ ಪೊಲೀಸ್ ಕಾಯ್ದೆಯ ಸೆಕ್ಷನ್ 37 ಜಾರಿಗೊಳಿಸಿ ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಗುಜರಾತ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.</p>.<p>ಈ ಸೆಕ್ಷನ್ಗಳು, ಪೊಲೀಸರ ಅನುಮತಿ ಇಲ್ಲದೆಯೇ ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸುತ್ತve.</p>.<p>‘ನಾಗರಿಕ ಸಂಘಟನೆಗಳು ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ಮುಂದಾದ ವೇಳೆ, ಈ ಸೆಕ್ಷನ್ಗಳನ್ನು ಜಾರಿಗೊಳಿಸುವ ಮೂಲಕ ಅನುಮತಿ ನಿರಾಕರಿಸುವ ಏಕೈಕ ವಿಧಾನವನ್ನು ಅಹಮದಾಬಾದ್ ಪೊಲೀಸರು ಬಳಸುತ್ತಿದ್ದಾರೆ’ ಎಂದು ನ್ಯಾಯಮೂರ್ತಿ ಎಂ.ಆರ್.ಮೆಂಗ್ಡೆ ಅವರು ಡಿಸೆಂಬರ್ 4ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಈ ಸೆಕ್ಷನ್ ಅಡಿ ಅಹಮದಾಬಾದ್ ಪೊಲೀಸ್ ಹೊರಡಿಸಿರುವ ಎಲ್ಲ ಅಧಿಸೂಚನೆಗಳನ್ನು ರದ್ದು ಮಾಡಿರುವ ನ್ಯಾಯಮೂರ್ತಿ ಮೆಂಗ್ಡೆ, ಇಂತಹ ಕ್ರಮ ಕೈಗೊಳ್ಳುವ ವೇಳೆ ಪೊಲೀಸರು ನಿಯಮಗಳ ಪಾಲನೆ ಮಾಡಿಲ್ಲ ಎಂದು ಹೇಳಿದ್ದಾರೆ.</p>.<p>ಐಐಎಂ–ಅಹಮದಾಬಾದ್ನ ಪ್ರಾಧ್ಯಾಪಕರಾದ ನವದೀಪ್ ಮಾಥೂರ್, ಅಂಕುರ್ ಸರಿನ್, ಅಹಮದಾಬಾದ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ರಾಘವನ್ ರಾಜನ್, ಉದ್ಯಮಿಗಳಾದ ಅರ್ಚನಾ ಶಾ, ಸಂಜೀವ್ ಶಾ ಹಾಗೂ ಇತರರು ಈ ಕುರಿತು ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿದಾರರು ಈ ಹಿಂದೆ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟಿಸಲು ಉದ್ದೇಶಿಸಿದ್ದರು. ಅದಕ್ಕೆ ಅಹಮದಾಬಾದ್ ಪೊಲೀಸರು ಅನುಮತಿ ನೀಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>