<p><strong>ದಾಹೋದ್, ಗುಜರಾತ್:</strong> ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿತರಾಗಿದ್ದ ಗುಜರಾತ್ ಸಚಿವ ಬಚ್ಚುಭಾಯಿ ಖಾಬಡ್ ಅವರ ಮಗನಿಗೆ ಜಾಮೀನು ಸಿಕ್ಕ ಎರಡು ದಿನದ ಬಳಿಕ ಮತ್ತೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ.</p>.<p>ಕಳೆದ ಏಪ್ರಿಲ್ ತಿಂಗಳಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ, ಗುಜರಾತ್ನ ಪಂಚಾಯತ್ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಮಕ್ಕಳಾದ ಬಲವಂತ್ ಹಾಗೂ ಅವರ ಸಹೋದರ ಕಿರಣ್ ಅವರನ್ನು ಬಂಧಿಸಲಾಗಿತ್ತು. ಮೇ 29ರಂದು ಇಬ್ಬರಿಗೂ ನ್ಯಾಯಾಲಯವು ಜಾಮೀನು ನೀಡಿತ್ತು.</p>.<p class="title">‘ಮತ್ತೊಂದು ಪ್ರಕರಣದಲ್ಲಿ ಕಿರಣ್ ಅವರನ್ನು ಅದೇ ದಿನ ಬಂಧಿಸಲಾಗಿತ್ತು. ದಾಹೋದ್ ‘ಬಿ’ ವಲಯದ ಪೊಲೀಸರು ಹೊಸತಾಗಿ ದಾಖಲಿಸಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ, ಬಲವಂತ್ ಅವರನ್ನು ಭಾನುವಾರ ಬಂಧಿಸಲಾಯಿತು’ ಎಂದು ದಾಹೋದ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಸಿಂಗ್ ಭಂಡಾರಿ ತಿಳಿಸಿದರು.</p>.<p class="title">2022–23ರಲ್ಲಿ ದಾಹೋದ್ನ ಧನ್ಪುರ ತಾಲ್ಲೂಕಿನ ಭಾನ್ಪುರ ಗ್ರಾಮದಲ್ಲಿ ನರೇಗಾದ ಅಡಿಯಲ್ಲಿ ಕೆಲಸ ಪೂರ್ಣಗೊಳಿಸದೇ, ಬಲವಂತ್ ಅವರ ‘ಶ್ರೀರಾಜ್ ಕನ್ಸ್ಟ್ರಕ್ಷನ್ ಸಂಸ್ಥೆ ₹33.86 ಲಕ್ಷ ಹಣ ಪಡೆದಿದೆ ಎಂದು ಮೇ 31ರಂದು ದಾಖಲಾದ ಎಫ್ಐಆರ್ನಲ್ಲಿ ತಿಳಿಸಲಾಗಿದೆ. ಇದರ ಆಧಾರದಲ್ಲಿ ಬಲವಂತ್ ಅವರನ್ನು ಬಂಧಿಸಲಾಗಿದೆ.</p>.<p class="bodytext">ನರೇಗಾದಡಿಯಲ್ಲಿ ₹71 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರನ್ನು ಮೇ 16ರಂದು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಹೋದ್, ಗುಜರಾತ್:</strong> ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿತರಾಗಿದ್ದ ಗುಜರಾತ್ ಸಚಿವ ಬಚ್ಚುಭಾಯಿ ಖಾಬಡ್ ಅವರ ಮಗನಿಗೆ ಜಾಮೀನು ಸಿಕ್ಕ ಎರಡು ದಿನದ ಬಳಿಕ ಮತ್ತೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ.</p>.<p>ಕಳೆದ ಏಪ್ರಿಲ್ ತಿಂಗಳಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ, ಗುಜರಾತ್ನ ಪಂಚಾಯತ್ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಮಕ್ಕಳಾದ ಬಲವಂತ್ ಹಾಗೂ ಅವರ ಸಹೋದರ ಕಿರಣ್ ಅವರನ್ನು ಬಂಧಿಸಲಾಗಿತ್ತು. ಮೇ 29ರಂದು ಇಬ್ಬರಿಗೂ ನ್ಯಾಯಾಲಯವು ಜಾಮೀನು ನೀಡಿತ್ತು.</p>.<p class="title">‘ಮತ್ತೊಂದು ಪ್ರಕರಣದಲ್ಲಿ ಕಿರಣ್ ಅವರನ್ನು ಅದೇ ದಿನ ಬಂಧಿಸಲಾಗಿತ್ತು. ದಾಹೋದ್ ‘ಬಿ’ ವಲಯದ ಪೊಲೀಸರು ಹೊಸತಾಗಿ ದಾಖಲಿಸಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ, ಬಲವಂತ್ ಅವರನ್ನು ಭಾನುವಾರ ಬಂಧಿಸಲಾಯಿತು’ ಎಂದು ದಾಹೋದ್ ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್ ಸಿಂಗ್ ಭಂಡಾರಿ ತಿಳಿಸಿದರು.</p>.<p class="title">2022–23ರಲ್ಲಿ ದಾಹೋದ್ನ ಧನ್ಪುರ ತಾಲ್ಲೂಕಿನ ಭಾನ್ಪುರ ಗ್ರಾಮದಲ್ಲಿ ನರೇಗಾದ ಅಡಿಯಲ್ಲಿ ಕೆಲಸ ಪೂರ್ಣಗೊಳಿಸದೇ, ಬಲವಂತ್ ಅವರ ‘ಶ್ರೀರಾಜ್ ಕನ್ಸ್ಟ್ರಕ್ಷನ್ ಸಂಸ್ಥೆ ₹33.86 ಲಕ್ಷ ಹಣ ಪಡೆದಿದೆ ಎಂದು ಮೇ 31ರಂದು ದಾಖಲಾದ ಎಫ್ಐಆರ್ನಲ್ಲಿ ತಿಳಿಸಲಾಗಿದೆ. ಇದರ ಆಧಾರದಲ್ಲಿ ಬಲವಂತ್ ಅವರನ್ನು ಬಂಧಿಸಲಾಗಿದೆ.</p>.<p class="bodytext">ನರೇಗಾದಡಿಯಲ್ಲಿ ₹71 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರರಿಬ್ಬರನ್ನು ಮೇ 16ರಂದು ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>