135 ಜನರ ಸಾವಿಗೆ ಕಾರಣವಾಗಿದ್ದ ಈ ಸೇತುವೆ ಕುಸಿತ ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಜನವರಿ 27ರಂದು ಸಲ್ಲಿಸಿದ್ದರು. ಗಡಿಯಾರ ತಯಾರಿಕೆ ಕಂಪೆನಿ ಒರೆವಾ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಜಯಸುಖ್ ಪಟೇಲ್ ಅವರನ್ನು ಪ್ರಕರಣದ 10ನೇ ಆರೋಪಿ ಎಂದು ಉಲ್ಲೇಖಿಸಲಾಗಿತ್ತು. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಎಂ.ಜೆ. ಖಾನ್ ಅವರು ಪಟೇಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದರು.