<p><strong>ಮೊರ್ಬಿ:</strong>135 ಜನರ ಜೀವ ಬಲಿ ತೆಗೆದುಕೊಂಡ ತೂಗು ಸೇತುವೆ ಕುಸಿತ ದುರಂತದ ಸಂಬಂಧ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್ ಸಿನ್ಹ ಜಾಲ ಅವರನ್ನು ಗುಜರಾತ್ ರಾಜ್ಯ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>ಸಂದೀಪ್ಸಿನ್ಹ ಜಾಲಅವರನ್ನುರಾಜ್ಯ ನಗರಾಭಿವೃದ್ಧಿ ಇಲಾಖೆ ಅಮಾನತುಗೊಳಿಸಿದೆ. ಮುಂದಿನ ಆದೇಶದವರೆಗೆ ಸ್ಥಾನಿಕ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೊರ್ಬಿ ಜಿಲ್ಲಾಧಿಕಾರಿ ಜಿ.ಟಿ. ಪಾಂಡ್ಯ ತಿಳಿಸಿದರು.</p>.<p>ಬ್ರಿಟಿಷರ ಕಾಲದಲ್ಲಿಮೊರ್ಬಿ ಪಟ್ಟಣದಲ್ಲಿಮಚ್ಚು ನದಿಗೆ ನಿರ್ಮಿಸಿದ್ದ 19ನೇ ಶತಮಾನದ ತೂಗುಸೇತುವೆ ಅ.30ರಂದು ಸಂಜೆ ಕುಸಿದು ಬಿದ್ದಿತ್ತು. ದುರಂತದಲ್ಲಿ ಮಹಿಳೆಯರು, ಮಕ್ಕಳು ಮೃತಪಟ್ಟಿದ್ದರು. ಈ ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ಒರೆವಾ ಸಮೂಹ ಕಂಪನಿಗೆ15 ವರ್ಷಗಳ ಅವಧಿಗೆಪುರಸಭೆಯು ನೀಡಿತ್ತು.230 ಮೀಟರ್ ಉದ್ದದ ಈ ಸೇತುವೆಯ ನವೀಕರಣ ನಿಮಿತ್ತ ಆರು ತಿಂಗಳಿನಿಂದ ನಾಗರಿಕರ ಓಡಾಟ ನಿರ್ಬಂಧಿಸಲಾಗಿತ್ತು. ಅ.26ರಂದು ಇದನ್ನು ಸಾರ್ವಜನಿಕ ಬಳಕೆಗೆ ತೆರೆಯಲಾಗಿತ್ತು.ಸೇತುವೆ ಕುಸಿತದ ದುರಂತಕ್ಕೆ ಸಂಬಂಧಿಸಿ ಪೊಲೀಸರು ಈವರೆಗೆ ಒಂಬತ್ತು ಜನರನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊರ್ಬಿ:</strong>135 ಜನರ ಜೀವ ಬಲಿ ತೆಗೆದುಕೊಂಡ ತೂಗು ಸೇತುವೆ ಕುಸಿತ ದುರಂತದ ಸಂಬಂಧ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್ ಸಿನ್ಹ ಜಾಲ ಅವರನ್ನು ಗುಜರಾತ್ ರಾಜ್ಯ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>ಸಂದೀಪ್ಸಿನ್ಹ ಜಾಲಅವರನ್ನುರಾಜ್ಯ ನಗರಾಭಿವೃದ್ಧಿ ಇಲಾಖೆ ಅಮಾನತುಗೊಳಿಸಿದೆ. ಮುಂದಿನ ಆದೇಶದವರೆಗೆ ಸ್ಥಾನಿಕ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಪುರಸಭೆಯ ಪ್ರಭಾರ ಮುಖ್ಯಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೊರ್ಬಿ ಜಿಲ್ಲಾಧಿಕಾರಿ ಜಿ.ಟಿ. ಪಾಂಡ್ಯ ತಿಳಿಸಿದರು.</p>.<p>ಬ್ರಿಟಿಷರ ಕಾಲದಲ್ಲಿಮೊರ್ಬಿ ಪಟ್ಟಣದಲ್ಲಿಮಚ್ಚು ನದಿಗೆ ನಿರ್ಮಿಸಿದ್ದ 19ನೇ ಶತಮಾನದ ತೂಗುಸೇತುವೆ ಅ.30ರಂದು ಸಂಜೆ ಕುಸಿದು ಬಿದ್ದಿತ್ತು. ದುರಂತದಲ್ಲಿ ಮಹಿಳೆಯರು, ಮಕ್ಕಳು ಮೃತಪಟ್ಟಿದ್ದರು. ಈ ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಗುತ್ತಿಗೆಯನ್ನು ಒರೆವಾ ಸಮೂಹ ಕಂಪನಿಗೆ15 ವರ್ಷಗಳ ಅವಧಿಗೆಪುರಸಭೆಯು ನೀಡಿತ್ತು.230 ಮೀಟರ್ ಉದ್ದದ ಈ ಸೇತುವೆಯ ನವೀಕರಣ ನಿಮಿತ್ತ ಆರು ತಿಂಗಳಿನಿಂದ ನಾಗರಿಕರ ಓಡಾಟ ನಿರ್ಬಂಧಿಸಲಾಗಿತ್ತು. ಅ.26ರಂದು ಇದನ್ನು ಸಾರ್ವಜನಿಕ ಬಳಕೆಗೆ ತೆರೆಯಲಾಗಿತ್ತು.ಸೇತುವೆ ಕುಸಿತದ ದುರಂತಕ್ಕೆ ಸಂಬಂಧಿಸಿ ಪೊಲೀಸರು ಈವರೆಗೆ ಒಂಬತ್ತು ಜನರನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>