ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gujarat Results: ಇದು ಸೈದ್ಧಾಂತಿಕ ಸಂಘರ್ಷ, ಹೋರಾಟ ಮುಂದುವರಿಯಲಿದೆ: ಖರ್ಗೆ

Last Updated 8 ಡಿಸೆಂಬರ್ 2022, 11:26 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆಎದುರಾಗಿರುವ ಹೀನಾಯ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಇದು ಸೈದ್ಧಾಂತಿಕ ಸಂಘರ್ಷವಾಗಿದ್ದು, ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

ಗುಜರಾತ್ ವಿಧಾನಸಭೆ ಸೋಲನ್ನು ಒಪ್ಪಿಕೊಳ್ಳುತ್ತೇವೆ. ವಿಜೇತರನ್ನು ಅಭಿನಂದಿಸುತ್ತೇವೆ ಎಂದು ಹೇಳಿದರು.

ನಮ್ಮ ಹೋರಾಟ ನಿರಂತರವಾಗಿದ್ದು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಂದು ದಿನದ ಸೋಲು-ಗೆಲುವು ಶಾಶ್ವತವಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಇದು ಸೈದ್ಧಾಂತಿಕ ಸಂಘರ್ಷವಾಗಿದ್ದು, ಸೋಲು-ಗೆಲುವು ಸಂಭವಿಸಬಹುದು. ನಮ್ಮ ಲೋಪಗಳನ್ನು ಸರಿಪಡಿಸಿಕೊಂಡು ಹೋರಾಟ ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.

ಹಿಮಾಚಲ ಪ್ರದೇಶದ ಜನತೆಗೆ ಧನ್ಯವಾದ...
ಏತನ್ಮಧ್ಯೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಜನರಿಗೆ ಮಲ್ಲಿಕಾರ್ಜುನ ಖರ್ಗೆ ಧನ್ಯವಾದ ಸಲ್ಲಿಸಿದರು. ಎಲ್ಲರ ಬೆಂಬಲದಿಂದ ಈ ಫಲಿತಾಂಶ ದೊರಕಿದೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಧನ್ಯವಾದ ಸಲ್ಲಿಸುತ್ತಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಸಹ ನೆರವಾಗಿದೆ. ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರ ಆಶೀರ್ವಾದವೂ ನಮ್ಮ ಮೇಲಿದೆ ಎಂದು ಹೇಳಿದರು.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT